Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
  • *ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿಶ್ವವ್ಯಾಪಿ ಮಾನವೀಯ ಧಮ೯ ಸಂರಕ್ಷಣೆಯಲ್ಲಿ ರೆಡ್ ಕ್ರಾಸ್ ಮುಖ್ಯ ಪಾತ್ರ : ಬಿ.ಭಾಸ್ಕರರಾವ್*
ಇತ್ತೀಚಿನ ಸುದ್ದಿಗಳು

*ವಿಶ್ವವ್ಯಾಪಿ ಮಾನವೀಯ ಧಮ೯ ಸಂರಕ್ಷಣೆಯಲ್ಲಿ ರೆಡ್ ಕ್ರಾಸ್ ಮುಖ್ಯ ಪಾತ್ರ : ಬಿ.ಭಾಸ್ಕರರಾವ್*

January 26, 20262 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.26 NEWS DESK : ರೆಡ್ ಕ್ರಾಸ್ ಸಂಸ್ಥೆಯು ವಿಶ್ವದಲ್ಲಿ ಮಾನವೀಯ ಧಮ೯ವನ್ನು ಪ್ರಚುರಪಡಿಸುವ ಮೂಲಕ ವಿಶ್ವಶಾಂತಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಲಕ್ಷಾಂತರ ಮಂದಿಗೆ ರೆಡ್ ಕ್ರಾಸ್ ನೆರವನ್ನು ವಿಶ್ವವ್ಯಾಪಿ ಒದಗಿಸುತ್ತಾ ಬಂದಿದ್ದು, ಕೊಡಗಿನಲ್ಲಿಯೂ ರೆಡ್ ಕ್ರಾಸ್ ಗೆ ಹೆಚ್ಚಿನ ಸದಸ್ಯರು ಸೇಪ೯ಡೆಯಾಗಬೇಕೆಂದು ರೆಡ್ ಕ್ರಾಸ್ ರಾಜ್ಯ ಉಪಾಧ್ಯಕ್ಷ ಬಿ. ಭಾಸ್ಕರರಾವ್ ಕರೆ ನೀಡಿದರು. ನಗರದ ರೆಡ್ ಕ್ರಾಸ್ ಭವನಕ್ಕೆ ಭೇಟಿ ನೀಡಿದ ಭಾಸ್ಕರರಾವ್ ಈ ಸಂದಭ೯ ರೆಡ್ ಕ್ರಾಸ್ ಸದಸ್ಯರನ್ನುದ್ದೇಶಿಸಿ ಮಾತನಾಡಿ, ಯಾವುದೇ ದೇಶಗಳ ನಡುವೆ ಅಶಾಂತಿಯುತ ವಾತಾವರಣ ಪರಿಸ್ಥಿತಿ ಉಧ್ಬವಿಸಿದಾಗ ರೆಡ್ ಕ್ರಾಸ್ ಪ್ರಮುಖರು ಅಂಥ ದೇಶಗಳ ನಡುವೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಕ್ರಿಯರಾಗುತ್ತಾರೆ. ವಿಶ್ವದಲ್ಲಿ ಶಾಂತಿ ಕಾಪಾಡುವುದೇ ರೆಡ್ ಕ್ರಾಸ್ ನ ಪ್ರಮುಖ ಉದ್ದೇಶವಾಗಿದೆ ಎಂದರು. ಸಾಕಷ್ಟು ಅನುದಾನ ರೆಡ್ ಕ್ರಾಸ್ ನಲ್ಲಿ ಜನೋಪಯೋಗಿ ಕಾಯ೯ಗಳಿಗೆ ಲಭಿಸುತ್ತಿದ್ದು ಇದನ್ನು ಕೊಡಗಿನಲ್ಲಿ ಪ್ರಕೖತ್ತಿ ವಿಕೋಪದಂಥ ಪ್ರತಿಕೂಲ ದಿನಗಳಲ್ಲಿ ಸದುಪಯೋಗ ಮಾಡಬೇಕೆಂದೂ ಭಾಸ್ಕರ್ ರಾವ್ ಸಲಹೆ ನೀಡಿದರು. ಕೊಡಗಿನ ಸ್ಥಳೀಯ ಸಂಸ್ಥೆಗಳಿಂದ ರೆಡ್ ಕ್ರಾಸ್ ಗೆ ಲಭಿಸಬೇಕಾದ ವಾಷಿ೯ಕ ಚಂದಾ ಹಣವನ್ನು ವಿಳಂಭರಹಿತವಾಗಿ ಪಡೆಯುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದೂ ಅವರು ಸೂಚಿಸಿದರು. ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸಂಚಾರ ಜಾಗೖತಿ ಶಿಬಿರಗಳ ಜತೆಗೇ ವಿನೂತನ ಯೋಜನೆಗಳನ್ನು ರೆಡ್ ಕ್ರಾಸ್ ಹಮ್ಮಿಕೊಳ್ಳಬೇಕು ಎಂದೂ ಭಾಸ್ಕರ್ ರಾವ್ ಸಲಹೆ ನೀಡಿದರು. ಕಾಲೇಜು ವಿದ್ಯಾಥಿ೯ಗಳಿಗೆ ಮತ್ತು ಪೊಲೀಸ್ ಸಿಬ್ಬಂದಿಗಳಿಗೂ ಅಗತ್ಯ ಕಾಯ೯ಕ್ರಮಗಳನ್ನು ಆಯೋಜಿಸುವಂತೆ ಅವರು ಕೋರಿದರು. ಕೊಡಗಿನಲ್ಲಿ ತಾವು ಪೊಲೀಸ್ ವರಿಷ್ಟಾಧಿಕಾರಿಯಾಗಿ ಕತ೯ವ್ಯ ಸಲ್ಲಿಸಿದ ದಿನಗಳು ತನ್ನ ಜೀವನದಲ್ಲಿಯೇ ಸ್ಮರಣೀಯವಾಗಿದೆ ಎಂದು ಹೆಮ್ಮೆಯಿಂದ ಹೇಳಿದಭಾಸ್ಕರರಾವ್, ಜಿಲ್ಲಾಕೇಂದ್ರ ಮಡಿಕೇರಿಯಲ್ಲಿ ಸಂಚಾರ ನಿಯಂತ್ರಣ ಸಂಬಂಧಿತ ಈಗಲೇ ಎಚ್ಚೆತ್ತುಕೊಂಡು ಸೂಕ್ತ ಪರಿಹಾರೋಪಾಯ ಕಂಡುಹುಡುಕದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಸಂಚಾರ ಸಮಸ್ಯೆಯ ಜತೆಗೇ ಪ್ರವಾಸಿಗರೂ ಮಡಿಕೇರಿಯಿಂದ ದೂರವಾಗುವ ಸಾಧ್ಯತೆ ನಿಚ್ಚಳವಾಗಿದೆ ಎಂದೂ ಕಿವಿಮಾತು ಹೇಳಿದರು. ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಬಿಂದುಮಣಿ ಮಾತನಾಡಿ, ಕೊಡಗಿನಲ್ಲಿ ಮಾದಕ ವ್ಯಸನಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದ್ದು ರೆಡ್ ಕ್ರಾಸ್ ಮೂಲಕ ಮಾದಕ ವ್ಯಸನಪೀಡಿತರನ್ನು ಚಟಮುಕ್ತ ಮಾಡುವಂಥ ಕಾಯ೯ಕ್ರಮ ಆಯೋಜಿಸಬೇಕೆಂದು ಸಲಹೆ ನೀಡಿದರು. ಕಳೆದ 20 ದಿನಗಳಿಂದ ಕೊಡಗಿನ ಪ್ರತೀ ಪೊಲೀಸ್ ಠಾಣೆಗಳಿಗೂ ಭೇಟಿ ನೀಡಿ ಆಯಾ ಗ್ರಾಮ ವ್ಯಾಪ್ತಿಯಲ್ಲಿನ ಕಾನೂನು ಸಮಸ್ಯೆಗಳನ್ನು ತಳಿದುಕೊಂಡು ಸೂಕ್ತ ಪರಿಹಾರೋಪಾಯ ಕಂಡುಕೊಳ್ಳುವ ಪ್ರಯತ್ನದಲ್ಲಿದ್ದೇನೆ ಎಂದೂ ಅವರು ನುಡಿದರು.ರೆಡ್ ಕ್ರಾಸ್ ಕೊಡಗು ಘಟಕದ ಸಭಾಧ್ಯಕ್ಷ ಬಿ.ಕೆ. ರವೀಂದ್ರ ರೈ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ ರೆಡ್ ಕ್ರಾಸ್ ನಲ್ಲಿ 350 ಸದಸ್ಯರಿದ್ದು ಮುಂದಿನ ದಿನಗಳಲ್ಲಿ ಸೋಮವಾರಪೇಟೆ, ವೀರಾಜಪೇಟೆಯಲ್ಲಿಯೂ ಘಟಕ ಪ್ರಾರಂಭಿಸಿ ಸದಸ್ಯತ್ವವನ್ನು ಹೆಚ್ಚಿಸಲಾಗುತ್ತದೆ. ಮಹಿಳೆಯರಿಗಾಗಿ ಕ್ಯಾನ್ಸರ್ ತಪಾಸಣಾ ಶಿಬಿರವನ್ನೂ ಶೀಘ್ರದಲ್ಲಿಯೇ ಆಯೋಜಿಸಲಾಗುತ್ತದೆ ಎಂದೂ ರವೀಂದ್ರ ರೈ ಮಾಹಿತಿ ನೀಡಿದರು. ಮಳೆಗಾಲದಲ್ಲಿ ರೆಡ್ ಕ್ರಾಸ್ ಭವನದಲ್ಲಿ ಕಾಳಜಿ ಕೇಂದ್ರದ ಮೂಲಕ ನಿರಾಶ್ರಿತರಿಗೆ ಆಶ್ರಯ ನೀಡಲಾಗುತ್ತಿದೆ. ಈ ಭವನದ ಮೇಲಂತಸ್ತಿನ ನಿಮಾ೯ಣ ಕಾಯ೯ವನ್ನು ಈ ವಷ೯ದಲ್ಲಿಯೇ ಕೈಗೊಳ್ಳಲಾಗುತ್ತದೆ ಎಂದೂ ಅವರು ಹೇಳಿದರು. ರೆಡ್ ಕ್ರಾಸ್ ಕೊಡಗು ಘಟಕದ ಉಪಾಧ್ಯಕ್ಷ ಅನಿಲ್ ಹೆಚ್.ಟಿ, ನಿರೂಪಿಸಿದ ಕಾಯ೯ಕ್ರಮದಲ್ಲಿ ಖಜಾಂಚಿ ಪ್ರಸಾದ್ ಗೌಡ ವೇದಿಕೆಯಲ್ಲಿದ್ದರು. ರೆಡ್ ಕ್ರಾಸ್ ಪ್ರಮುಖರಾದ ಎಸ್. ಸಿ. ಸತೀಶ್, ಮಧುಕರ್, ಉತ್ತಯ್ಯ, ಸತೀಶ್ ರೈ, ವಿಜಯ್ ರೈ,, ವಸಂತ್,ಪ್ರಭಾಕರ್, ಲೋಕೇಶ್ ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Articleಕೊಡಗು : ಪ್ರತಿಯೊಬ್ಬ ಯುವ ಮತದಾರರು ತಪ್ಪದೆ ಹಕ್ಕು ಚಲಾಯಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
Next Article *ದೇಶಕ್ಕೆ ರಕ್ಷಾ ಕವಚ ಸಂವಿಧಾನ : ಬರಹ : ಗೀತಾಂಜಲಿ ಎನ್.ಎಮ್* 

Related Posts

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

ಮಡಿಕೇರಿ, NEWS DESK ಫೆ.10: ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ…

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026

*ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.