
ಮುಂಬೈ NEWS DESK ಜ.28 : ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಬಾರಾಮತಿ ಬಳಿ ನಡೆದಿದೆ. ಇಂದು ಬೆಳಗ್ಗೆ ಮುಂಬೈನಿಂದ ಟೇಕಾಫ್ ಆಗಿದ್ದ ವಿಮಾನವು ಸುಮಾರು ಒಂದು ಗಂಟೆಯ ಪ್ರಯಾಣದ ನಂತರ 9 ಗಂಟೆಯ ಸುಮಾರಿಗೆ ಬಾರಾಮತಿಯಲ್ಲಿ ಲ್ಯಾಂಡಿಂಗ್ ಗೆ ಸಿದ್ಧವಾಗಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ವಿಮಾನ ಪತನಗೊಂಡಿತು. ಅಪಘಾತದಲ್ಲಿ ಅಜಿತ್ ಪವಾರ್, ಅವರ ಇಬ್ಬರು ಸಿಬ್ಬಂದಿ ಹಾಗೂ ಇಬ್ಬರು ವಿಮಾನ ಸಿಬ್ಬಂದಿ ಸದಸ್ಯರು (ಪೈಲಟ್ ಸಿಬ್ಬಂದಿ) ಸೇರಿದಂತೆ ವಿಮಾನದಲ್ಲಿದ್ದ ಐವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.









