Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಟ್ಟೆಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಸಂಭ್ರಮ‌ : ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ : ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು

*ಕಟ್ಟೆಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಸಂಭ್ರಮ‌ : ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ : ಗಣ್ಯರ ಕರೆ*

January 29, 20262 Mins Read
Share
Facebook Twitter LinkedIn Pinterest WhatsApp Email

ಕುಶಾಲನಗರ ಜ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ಬೇಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಟ್ಟೆಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ಕ್ರೀಡೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭರತನಾಟ್ಯ, ಜಾನಪದ ನೃತ್ಯ ಹಾಗೂ ಸಮೂಹ ನೃತ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಮನ ರಂಜಿಸಿದರು. ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಅತಿಥಿಗಳು ಬಹುಮಾನ ವಿತರಣೆ ಮಾಡಿದರು. ಪೋಷಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದರು. ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಬೇಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕಮಲಮ್ಮ ಮಾತನಾಡಿ, ವಾರ್ಷಿಕೋತ್ಸವಕ್ಕೆ ಶುಭಹಾರೈಸಿದರು. ಗ್ರಾಮಸ್ಥರು ಹಾಗೂ ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಎಲ್ಲಾರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.  ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸೋಮವಾರಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಭರತ್ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಾಲೆಗಳು ಹೊಣೆಗಾರಿಕೆ ಬಹುಮುಖ್ಯವಾದರೂ ಪೋಷಕರು ಜವಾಬ್ದಾರಿಯೂ ಸಮನಾಗಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆ ನೀಡಿಬೇಕು. ವಿದ್ಯೆ ಮನುಷ್ಯನನ್ನು ಬಾಳಿ ಬೆಳಸುತ್ತದೆ. ಎತ್ತರಕ್ಕೆ ಬೆಳದ ವ್ಯಕ್ತಿ ಸಮಾಜದ ಪ್ರಗತಿ, ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರ ಪ್ರೊಫೆಸರ್ ಧರ್ಮಪ್ಪ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ತುಂಬ ಅಗತ್ಯವಾಗಿದೆ. ಪೋಷಕರು ತಮ್ಮ ಮಕ್ಕಳ ಪ್ರೌಢಶಿಕ್ಷಣ ಮುಗಿದ ನಂತರ ಪಿಯುಸಿ ವ್ಯಾಸಂಗಕ್ಕೆ ಪಟ್ಟಣ ಹಾಗೂ ನಗರ ಪ್ರದೇಶದ ಉತ್ತಮ ಕಾಲೇಜು ಗಳಿಗೆ ಸೇರಿಸಿ ಅವರನ್ನು ಉನ್ನತ ವ್ಯಾಸಂಗ ಕೊಡಿಸುವತ್ತ ಚಿಂತನೆ ಹರಿಸಬೇಕು.ಇತ್ತೀಚಿನ ವರ್ಷಗಳಲ್ಲಿ ಪದವಿ ವ್ಯಾಸಂಗ ಮಾಡುವವರ ಸಂಖ್ಯೆ ಶೇ.5 ಕ್ಕಿಂತ ಕಡಿಮೆಯಾಗಿದೆ. ಸ್ನಾತಕೋತ್ತರ ಪದವಿ ಪಡೆಯುವವರ ಸಂಖ್ಯೆ ಶೇ.2 ಕ್ಕಿಂತಲೂ ಕಡಿಮೆ ಇದೆ.ವರ್ಷ ದಿಂದ ವರ್ಷಕ್ಕೆ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.  ಸಂಪನ್ಮೂಲ ವ್ಯಕ್ತಿ ಜಯಕುಮಾರ್ ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಹಾಗೂ ಹವ್ಯಾಸಗಳನ್ನು ಕಲಿಸುವತ್ತ ಗಮನ ಹರಿಸಬೇಕು. ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರುಗಳಾಗಿದ್ದಾರೆ. ಶಾಲೆಯ ಜೊತೆಗೆ ಮನೆಯ ಪರಿಸರ ಉತ್ತಮವಾಗಿರಬೇಕು. ಮನೆಯಲ್ಲಿ ತಂದೆತಾಯಿಗಳು ಮಕ್ಕಳಿಗೆ ಒಳ್ಳೆಯ ಮಾರ್ಗದರ್ಶನ ಮಾಡುವ ಮೂಲಕ ಅವರನ್ನು ಉತ್ತಮ ಸತ್ಪ್ರರ್ಜೆಯಾಗಿ ರೂಪಿಸಬೇಕು ಎಂದರು. ಕಾಫಿ ಬೆಳೆಗಾರ ಯತೀಶ್ ಮಾತನಾಡಿ,ಪೋಷಕರು ಮಕ್ಕಳಿಗೆ ಆಸ್ತಿ ಮಾಡುವುದು ಬೇಡ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ.ಅವರಿಗೆ ಉತ್ತಮ ಶಿಕ್ಷಣ ಕೊಡಿಸಿ ಸಮಾಜದಲ್ಲಿ ಉನ್ನತ ಸ್ಥಾನಮಾನಗಳಿಸುವಂತೆ ಒತ್ತು ನೀಡಬೇಕು ಎಂದರು. ಶಾಲೆಯ ಶಿಕ್ಷಕಿ ಎಚ್.ಪಿ.ತೇಜಾವತಿ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿ ಶಾಲೆಯ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಗಳನ್ನು ಹಂಚಿಕೊಂಡರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಎಂ.ಸಿ.ಧರ್ಮರಾಜ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸೌಮ್ಯ, ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಘಟಕದ ನಿರ್ದೇಶಕ ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಕವಿತಾ,ಕೊಡ್ಲಿಪೇಟೆ ಶಿಕ್ಷಕ ಕೆ.ಎನ್.ಕಿರಣ್ ಕುಮಾರ್,ಮುಳ್ಳುರು ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸತೀಶ್,ಸಹ ಶಿಕ್ಷಕ ಜಾನ್,ಸಿ. ಆರ್.ಪಿ.ಮುರುಳೀಧರ್,ದಾನಿಗಳಾದ ಎನ್.ಎನ್.ಧರ್ಮಪ್ಪ ,ಮಹೇಶ್,ಸಿದ್ದಪ್ಪ, ತೋಪೇಗೌಡ,ಜವರಯ್ಯ,ಗೋಪಾಣ್ಣ,ಪುಟ್ಟರಾಜು,ಎಚ್.ಬಿ.ಧರ್ಮಪ್ಪ, ಸುವರ್ಣ, ಅಪ್ಪಾಜಿ, ಮಹೇಶಾಚಾರಿ, ರತ್ನಮ್ಮ ಸುರೇಶ್ ಪಾಲ್ಗೊಂಡಿದ್ದರು. ಮೊದಲಿಗೆ ಗ್ರಾಮಸ್ಥರಿಗೆ ನಡೆದ ಕಬಡ್ಡಿ ಕ್ರೀಡಾಕೂಟ ಕ್ರೀಡಾಭಿಮಾನಿಗಳ ಮನ ರಂಜಿಸಿತು. ಕಾಫಿ ಬೆಳೆಗಾರ ಯತೀಶ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ಸಂದರ್ಭ ದಾನಿಗಳು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರು ಹಾಗೂ ಅತಿಥಿಗಳನ್ನು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಕೇಂದ್ರೀಯ ವಿದ್ಯಾಲಯದಲ್ಲಿ ರಸಪ್ರಶ್ನೆ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*
Next Article *ಫೆ.1 ರಂದು ಸುಂಟಿಕೊಪ್ಪದಲ್ಲಿ ಅಲ್ ಅಮೀನ್ ಸಾಮೂಹಿಕ ವಿವಾಹ*

Related Posts

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

ಮಡಿಕೇರಿ NEWS DESK ಫೆ.11 : 2026-27ರ ಒಟ್ಟು ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿರಿಸಬೇಕು,…

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.