Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಫೆ.1 ರಿಂದ ಸ್ವಚ್ಛ ಕುಶಾಲನಗರ ಅಭಿಯಾನ*
ಇತ್ತೀಚಿನ ಸುದ್ದಿಗಳು

*ಫೆ.1 ರಿಂದ ಸ್ವಚ್ಛ ಕುಶಾಲನಗರ ಅಭಿಯಾನ*

January 29, 20263 Mins Read
Share
Facebook Twitter LinkedIn Pinterest WhatsApp Email

ಕುಶಾಲನಗರ ಜ.29 NEWS DESK :  ರೋಟರಿ ಕುಶಾಲನಗರ ಮೂಲಕ ಹಸಿ ಕಸದ ನಿರ್ವಹಣೆ ಯೋಜನೆಯೊಂದಿಗೆ ಸ್ವಚ್ಛ ಕುಶಾಲನಗರ ಅಭಿಯಾನ ಫೆ.1 ರಿಂದ ಹಮ್ಮಿಕೊಳ್ಳಲಾಗುತ್ತದೆ ಎಂದು ರೋಟರಿ ಅಧ್ಯಕ್ಷರಾದ ಮನು ಪೆಮ್ಮಯ್ಯ ತಿಳಿಸಿದ್ದಾರೆ.  ಕುಶಾಲನಗರ ರೋಟರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕುಶಾಲನಗರ ರೋಟರಿಯ ಸುವರ್ಣ ಮಹೋತ್ಸವ ಅಂಗವಾಗಿ ಈಗಾಗಲೇ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ ತಿಂಗಳ ಅಂತ್ಯ ತನಕ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ವಿವಿಧ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.  ಸಾರ್ವಜನಿಕರ ಸಹಕಾರದೊಂದಿಗೆ ಸ್ವಚ್ಛ ಕುಶಾಲನಗರ ನಿರ್ಮಿಸುವುದು ಸುವರ್ಣ ಮಹೋತ್ಸವದ ಧ್ಯೇಯವಾಗಿದೆ ಎಂದು ಹೇಳಿದ ಅವರು ಈ ಸಂಬಂಧ ಕುಶಾಲನಗರ ಪಟ್ಟಣದಲ್ಲಿ ಒಂದು ತಿಂಗಳ ಕಾಲ ವಾಹನಗಳ ಮೂಲಕ ನಾಗರಿಕರಿಗೆ ಕಸ ವಿಲೇವಾರಿ ಬಗ್ಗೆ ಮಾಹಿತಿ ಅರಿವು ನೀಡುವ ಕೆಲಸ ನಡೆಯಲಿದೆ ಇದರೊಂದಿಗೆ ನಮ್ಮ ತಂಡ ಪ್ರತಿ ಮನೆಮನೆಗೆ ತೆರಳಿ ಸ್ವಚ್ಛತಾ ಬಗ್ಗೆ ಮಾಹಿತಿ ನೀಡಿ ಸಹಿ ಸಂಗ್ರಹ ಯೋಜನೆ ನಡೆಯಲಿದೆ.  ಈ ಯೋಜನೆಯ ಅನುಷ್ಠಾನದ ಸಂಬಂಧ ಕೂಡಿಗೆ ಸಮೀಪದ ಭುವನಗಿರಿ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಪೂರ್ಣ ಪ್ರಮಾಣದ ಕಸ ವಿಂಗಡಣೆ ಘಟಕ ಸ್ಥಾಪನೆಗೆ ರೋಟರಿ ಮೂಲಕ ಸಂಪೂರ್ಣ ಸಹಕಾರ ನೀಡಲಾಗುವುದು.
ದಿನಕ್ಕೆ ಸುಮಾರು ಮೂರರಿಂದ ಐದು ಟನ್ ಪ್ರಮಾಣದ ಕಸ ವಿಂಗಡನೆ ಮಾಡುವುದು, ಹಸಿ ಕಸವನ್ನು ಜೈವಿಕ ಗೊಬ್ಬರವಾಗಿ ಪರಿವರ್ತಿಸುವುದು, ಕಸ ಸಂಗ್ರಹಣಾ 2 ಟ್ರ್ಯಾಕ್ಟರ್ ಮತ್ತು ಕಾರ್ಮಿಕ ವ್ಯವಸ್ಥೆಗೆ ಪಟ್ಟಣ ಪಂಚಾಯಿತಿ ಸಹಯೋಗದೊಂದಿಗೆ ಕೆಲಸ ಮಾಡಲಾಗುವುದು. ವಿಶೇಷವಾಗಿ ಅಲಂಕರಿಸಿದ ನಾಲ್ಕು ಚಕ್ರದ ಜಾಗೃತಿ ವಾಹನ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ಸ್ವಚ್ಛ ಕುಶಾಲನಗರ ಕುರಿತ ಸಂದೇಶಗಳು ಆಡಿಯೋ ಪ್ರಕಟಣೆ ಮತ್ತು ಜಾಗೃತಿ ಚಿತ್ರ ಹಾಗೂ ಫಲಕಗಳನ್ನು ಅಳವಡಿಸುವ ಕಾರ್ಯ ನಡೆಯಲಿದೆ ಎಂದು ವಿವರ ನೀಡಿದರು. ಸ್ವಚ್ಛತೆ ಅಂಗವಾಗಿ ಸ್ಥಳೀಯ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ರೋಟರಿ ಕುಶಾಲನಗರದಿಂದ ಬಾಟಲ್ ಮಾದರಿಯ ಒಣ ಕಸ ಸಂಗ್ರಹ ಘಟಕಗಳನ್ನು ಪಟ್ಟಣದ ಐದು ಸ್ಥಳಗಳಲ್ಲಿ ಸ್ಥಾಪನೆ ಮಾಡಲಾಗುವುದು ಕುಶಾಲನಗರ -ಕೊಪ್ಪ ಕಾವೇರಿ ಸೇತುವೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರುಗಡೆ ಮಡಿಕೇರಿ ರಸ್ತೆ ಪ್ರವೇಶದ ವ್ಯಾಪ್ತಿ ಮತ್ತು ಚಿಕ್ಲಿಹೊಳೆ ಅಣೆಕಟ್ಟು ಸಮೀಪ ಸೇರಿದಂತೆ ವಿವಿಧ ಪ್ರವಾಸಿ ತಾಣದಲ್ಲಿ ಅಳವಡಿಸಲಾಗುತ್ತದೆ ಎಂದರು. ಪುರಸಭೆ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ಬಿತ್ತಿ ಪತ್ರ ನೀಡುವ ಮೂಲಕ ವ್ಯಾಪಾರ ಮಳಿಗೆಗಳಲ್ಲಿ ಸ್ವಚ್ಛತಾ ಸ್ಟಿಕರ್ ಅಂಟಿಸುವುದು, ಆಯ್ದ ಸ್ಥಳಗಳಲ್ಲಿ ಗೋಡೆ ಬರಹಗಳ ಮೂಲಕ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು. ರೋಟರಿ ಮೂಲಕ ಹಸಿದವರಿಗೆ ಅನ್ನ ಯೋಜನೆ ಈಗಾಗಲೇ ಕಳೆದ ಆರು ತಿಂಗಳಿನಿಂದ ನಡೆಯುತ್ತಿದೆ. ಪಟ್ಟಣದಲ್ಲಿ ಆಯ್ದ ಪೊಲೀಸ್ ಚೌಕಿಗಳ ನವೀಕರಣ ಮತ್ತು ವಿಶೇಷವಾಗಿ ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಕಟ್ಟಡ ನವೀಕರಣಕ್ಕೆ ರೋಟರಿ ಕುಶಾಲನಗರ ಮೂಲಕ 50,000 ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಅವರು ಹೇಳಿದರು. ಕುಶಾಲನಗರ ತಾಲೂಕಿನ ಕಣಿವೆ ಗ್ರಾಮ ಹುಲುಸೆ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಈಗಾಗಲೇ ಲೋಕಾರ್ಪಣೆಗೊಂಡಿದೆ. ಫೆಬ್ರವರಿ ಒಂದರಿಂದ ತಿಂಗಳ ಅಂತ್ಯದ ತನಕ ಈ ಎಲ್ಲಾ ಸೇವಾ ಕಾರ್ಯಗಳು ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಮಾರ್ಚ್ ಒಂದರಂದು ಕುಶಾಲನಗರ ರೋಟರಿಯ ಸುವರ್ಣ ಮಹೋತ್ಸವ ಸಮಾರಂಭ ಕಾರ್ಯಕ್ರಮ ನಡೆಯಲಿದೆ ಎಂದು ಮನು ಪೆಮ್ಮಯ್ಯ ಸಮಗ್ರ ಮಾಹಿತಿ ಒದಗಿಸಿದರು. ಈ ಸಂದರ್ಭ ಮಾತನಾಡಿದ ಸುವರ್ಣ ಮಹೋತ್ಸವ ಆಚರಣೆ ಕೇಂದ್ರ ಸಮಿತಿಯ ಚೇರ್ಮನ್ ಎಸ್ ಕೆ ಸತೀಶ್, ಕಳೆದ 50 ವರ್ಷಗಳಿಂದ ರೋಟರಿ ಕುಶಾಲನಗರ ಹಲವು ಸೇವೆಗಳನ್ನು ಸಾರ್ವಜನಿಕ ವಲಯಗಳಲ್ಲಿ ಯಶಸ್ವಿಯಾಗಿ ಹಮ್ಮಿಕೊಂಡು ಬಂದಿದೆ. ಕುಶಾಲನಗರ ಸರಕಾರಿ ಆಸ್ಪತ್ರೆಗೆ ಎರಡು ಡಯಾಲಿಸಿಸ್ ಘಟಕಗಳನ್ನು ನೀಡಿದೆ. ಮಡಿಕೇರಿ ಅಶ್ವಿನಿ ಆಸ್ಪತ್ರೆಗೆ ಲಕ್ಷಾಂತರ ಮೌಲ್ಯದ ಅಗತ್ಯ ಸಲಕರಣೆಗಳು ಕುಶಾಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರು, ಅಂಗ ವೈಕಲ್ಯತೆ ಹೊಂದಿದ ವಿಕಲಾಂಗರಿಗೆ ಅಗತ್ಯವಾದ ಕೃತಕ ಕಾಲು ಜೋಡಣೆ, ಕುಶಾಲನಗರ ಸರಕಾರಿ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಆರೋಗ್ಯ ಶಿಬಿರಗಳು ಸೇರಿದಂತೆ 10 ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಎಲ್ಲಾ ಕಾರ್ಯಕ್ರಮಗಳಿಗೆ ಪತ್ರಿಕಾ ಮಾಧ್ಯಮದಿಂದ ಎಲ್ಲಾ ರೀತಿಯ ಸಲಹೆ ಸಹಕಾರಿಗಳು ಲಭಿಸಿದ್ದು ಮುಂದಿನ ದಿನಗಳ ಎಲ್ಲಾ ಕಾರ್ಯಕ್ರಮಗಳಿಗೆ ಕೈಜೋಡಿಸುವಂತೆ ಮನವಿ ಮಾಡಿದರು. ಈ ಸಂದರ್ಭ ರೋಟರಿ ಕುಶಾಲನಗರ ಕಾರ್ಯದರ್ಶಿ ಹೆಚ್ ಪಿ ಮಂಜುನಾಥ್, ಸುವರ್ಣ ಮಹೋತ್ಸವ ಸಮಿತಿಯ ಪ್ರಮುಖರಾದ ಮಹೇಶ್ ಕುಮಾರ್ ನಾಲ್ವಡೆ, ಕೃಜ್ವಲ್ ಕೋಟ್ಸ್, ಎಂ.ಡಿ.ರಂಗಸ್ವಾಮಿ, ಕೆ ಎಸ್ ರಾಜಶೇಖರ್, ಆರತಿ ಎ ಶೆಟ್ಟಿ, ಸಹಾಯಕ ರಾಜ್ಯಪಾಲರಾದ ಉಲ್ಲಾಸ್ ಕೃಷ್ಣ ಇದ್ದರು. :: ಚೆಕ್ ಹಸ್ತಾಂತರ :: ರೋಟರಿ ಕುಶಾಲನಗರದ ಸುವರ್ಣ ಮಹೋತ್ಸವ ಅಂಗವಾಗಿ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯ ಕಟ್ಟಡ ನಿರ್ವಹಣೆಗಾಗಿ ರೂ.50 ಸಾವಿರ ನೀಡುವುದಾಗಿ ಈ ಸಂದರ್ಭ ರೋಟರಿ ಅಧ್ಯಕ್ಷರಾದ ಮನು ಪೆಮ್ಮಯ್ಯ ಘೋಷಿಸಿದರು. ಇದೇ ಸಂದರ್ಭ ಪ್ರಥಮ ಕಂತಿನಲ್ಲಿ ರೂ.25000 ಮೊತ್ತದ ಚೆಕ್ ಅನ್ನು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್ ಅವರಿಗೆ ಹಸ್ತಾಂತರಿಸಿದರು.

 

Share. Facebook Twitter Pinterest LinkedIn Tumblr Email WhatsApp
Previous Article*ಕಕ್ಕಬ್ಬೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ*
Next Article *ಕುಶಾಲನಗರ : ಪ್ರತಿಭೆಗಳಿಗೆ ಸೂಕ್ತ ವೇದಿಕೆ‌ ಒದಗಿಸಿ, ಪ್ರೋತ್ಸಾಹಿಸಿ : ಡಾ.ನಯನ ಹರಿಶ್ಚಂದ್ರ*

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.