Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆ : ಸೈಬರ್ ಅಪರಾಧಗಳ ಕುರಿತು ಜಾಗೃತಿ ಅಗತ್ಯ : ಪೋಲಿಸ್ ಉಪ ಅಧೀಕ್ಷ ಮಹೇಶ್ ಕುಮಾರ್*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ : ಸೈಬರ್ ಅಪರಾಧಗಳ ಕುರಿತು ಜಾಗೃತಿ ಅಗತ್ಯ : ಪೋಲಿಸ್ ಉಪ ಅಧೀಕ್ಷ ಮಹೇಶ್ ಕುಮಾರ್*

January 31, 20262 Mins Read
Share
Facebook Twitter LinkedIn Pinterest WhatsApp Email

 

ವಿರಾಜಪೇಟೆ ಜ.31 NEWS DESK  : ಪ್ರತಿದಿನ ಹಲವಾರು ಹೊಸ ಸೈಬರ್ ಕ್ರೈಂ ಪ್ರಕರಣಗಳು ಮತ್ತು ವಂಚನೆಗಳು ಬೆಳಕಿಗೆ ಬರುತ್ತಿರುವುದು ಆಘಾತಕಾರಿ ಮತ್ತು ಕಳವಳಕಾರಿ ಸಂಗತಿಯಾಗಿದ್ದು, ಸೈಬರ್ ಅಪರಾಧಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ವಿರಾಜಪೇಟೆ ಪೋಲಿಸ್ ಉಪ ಅಧೀಕ್ಷಕರಾದ ಮಹೇಶ್ ಕುಮಾರ್ ಹೇಳಿದರು. ವಿರಾಜಪೇಟೆ ಮಾಜಿ ಸೈನಿಕರ ಸಂಘದ ಮಾಸಿಕ ಸಭೆಯು ಸಂಘದ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾಜಿ ಸೈನಿಕರಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಲು ಅವರು ಸಭೆಗೆ ಆಗಮಿಸಿ ಜಾಗೃತಿ ಮೂಡಿಸಿ ಮಾತನಾಡಿದ ಪೋಲಿಸ್ ಉಪ ಅಧೀಕ್ಷಕರಾದ ಮಹೇಶ್ ಕುಮಾರ್ ಅವರು, ಸೈಬರ್ ಕ್ರೈಂ ಬಗ್ಗೆ ಜನರು ಜಾಗೃತರಾಗಿರಬೇಕು ಮತ್ತು ಪ್ರತಿಯೊಂದು ಸಾಫ್ಟ್‍ವೇರ್ ಅನ್ನು ಡೌನ್‍ಲೋಡ್ ಮಾಡಬಾರದು. ಹೆಚ್ಚು ತಾಂತ್ರಿಕ ಜ್ಞಾನ ಬಳಕೆ ಮಾಡುವ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಹಿರಿಯ ನಾಗರಿಕರು ಸೈಬರ್ ವಂಚನೆಗೆ ಹೆಚ್ಚು ಗುರಿಯಾಗುತ್ತಿದ್ದಾರೆಂದು ತಿಳಿಸಿದರು. ವಂಚನೆಗಳನ್ನು ಪತ್ತೆ ಹಚ್ಚುವುದು ಹಾಗೂ ಅವುಗಳಿಗೆ ಪರಿಹಾರ ಕಂಡುಹಿಡಿಯಲು ಸೇತುವೆಯಾಗುವುದರತ್ತ ನಾವು ಕೆಲಸ ಮಾಡುತ್ತಿದ್ದೇವೆ.  ಆನ್‍ಲೈನ್ ವಂಚನೆ, ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಸಮಾಜದ ಮನೆ ಮನೆಗೂ ತಲುಪುವಂತಾಗುವ ದಿಸೆಯಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದರಲ್ಲದೆ ಮೊಬೈಲ್ ಪ್ರಜ್ಞಾಪೂರ್ವಕವಾಗಿ ಬಳಸಬೇಕು, ಅಪರಿಚಿತರ ಕೈಗೆ ಮೊಬೈಲ್ ನೀಡಬಾರದು, ಅಪರಿಚಿತ ಪೋನ್ ಮತ್ತು ವಿಡಿಯೋ ಕರೆಗಳನ್ನು ಸ್ವೀಕರಿಸಬೇಡಿ, ಓ.ಟಿ.ಪಿ. ಸಂಖ್ಯೆಗಳನ್ನು ಬ್ಯಾಂಕ್ ಖಾತೆಗಳ ಸಂಖ್ಯೆಯನ್ನು ತಿಳಿಸಬೇಡಿ, ಮುಖ್ಯವಾಗಿ ಹೆಣ್ಣು ಮಕ್ಕಳು ಮೊಬೈಲ್ ಕುರಿತು ಬಹಳ ಎಚ್ಚರಿಕೆಯಿಂದ ಬಳಸಬೇಕು. ಇಲ್ಲವಾದಲ್ಲಿ ಅನೇಕ ತೊಂದರೆಗಳಿಗೆ ಸಿಲುಕುವಿರಿ ಎಂದರು. ವಾಟ್ಸ್‍ಆಪ್, ಇನ್ಸಾಟ್ರಗ್ರಾಮ್, ಫೇಸ್ ಬುಕ್, ಟ್ವೇಟರ್ ಮುಂತಾದುವುಗಳ ಮೂಲಕ ಅಪರಿಚಿತರು ಪರಿಚಯ ಮಾಡಿಕೊಂಡು ನಿಮ್ಮನ್ನು ದುರ್ಬಳಿಸಿಕೊಂಡು ಅನಾಹುತಗಳಿಗೆ ಕಾರಣರಾಗುತ್ತಾರೆ ಎಂದು ಕಿವಿಮಾತು ತಿಳಿಸಿದರು. ಅಪರಿಚಿತ ಕರೆಗಳು ಸ್ವೀಕರಿಸಬೇಡಿ, ಸೇವ್ ಮಾಡಬೇಡಿ, ಮೇಸೇಜ್‍ಗಳಿಗೆ ರಿಪ್ಲೇ ಮಾಡಬೇಡಿ, ನಿಮ್ಮ ಪರಿಚಿತರ ಸಂಖ್ಯೆಗಳನ್ನು ಮಾತ್ರ ಸೇವ್ ಮಾಡಿ ಕರೆಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಿಕೊಳ್ಳಿ, ವಿಡಿಯೋ ಕಾಲ್ಸ್‍ಗಳ ಬಗ್ಗೆ ಹೆಚ್ಚು ಜಾಗೃತಿ ಅಗತ್ಯ, ಏನಾದರೂ ಅನುಚಿತ ಕರೆಗಳು, ವಿಡಿಯೋಗಳು, ಬೆದರಿಕೆ, ಹೂಡಿಕೆಗೆ ಆಮಿಷಗಳನ್ನು ಒಡ್ಡುವುದು ಇತ್ಯಾದಿಗಳ ಕುರಿತು ದೂರು ನೀಡಿ ಎಂದು ತಿಳಿಸಿದರು. ವಂಚಕರು ಅಂತರ್ಜಾಲದ ಸಂಪರ್ಕ ಪಡೆದು ಇತರರಿಗೆ ಕಂಪ್ಯೂಟರ್ ಸಂಪರ್ಕವನ್ನು ನಿರ್ಬಂಧಿಸುವುದು. ವೈರಸ್ ಹರಡಿ ಇಡೀ ಸಂಪರ್ಕವನ್ನು ನಾಶಪಡಿಸುವುದು, ದುರುದ್ದೇಶವುಳ್ಳ ತಂತ್ರಾಂಶವನ್ನು ಬಳಸಿ ಇನ್ನೊಬ್ಬರ ಕ್ರೆಡಿಟ್ ಕಾರ್ಡ್, ಬ್ಯಾಂಕ್ ಕಾರ್ಡ್‍ಗಳನ್ನು ನಕಲಿ ಮಾಡುವುದು, ಇನ್ನೊಬ್ಬರ ಬಗ್ಗೆ ತಪ್ಪು ಭಾವನೆ ಬರುವಂತೆ ಮಾಡುವುದು. ಬೆದರಿಕೆ ಮೂಲಕ ಭಯೋತ್ಪಾದನೆ ಉಂಟು ಮಾಡುವುದು ಆನ್‍ಲೈನ್ ವಂಚಕರ ಕೆಲಸವಾಗಿದೆ. ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವುದಾಗಿ, ಲಾಟರಿ ಬಂದಿರುವುದಾಗಿ, ಕೆಲಸ ಕೊಡಿಸುವುದಾಗಿ, ಉಡುಗೊರೆ ಕೊಡುವುದಾಗಿ, ಕಡಿಮೆ ಬೆಲೆಯಲ್ಲಿ ದುಬಾರಿ ವಸ್ತುಗಳನ್ನು ಮಾರುತ್ತೇವೆ ಎಂಬುದಾಗಿ ನಿಮಗೆ ಮೊಬೈಲ್ ಕರೆ ಅಥವಾ ಇ-ಮೇಲ್ ಮಾಡಿದರೆ ಅದನ್ನು ನಂಬಬೇಡಿ. ಇದರಿಂದ ನಿಮ್ಮ ಹಣ ಪಾವತಿಮಾಡುವಂತೆ ಹೇಳಿ ನಂಬಿಸಿ ವಂಚಿಸುತ್ತಾರೆ. ಈ ಬಗ್ಗೆ ಎಚ್ಚರವಿರಲಿ ಹೀಗೆ ಸಮಾಜದಲ್ಲಿ ನಡೆಯುವ ಸೈಬರ್ ಕ್ರೈಂನ ಬಗ್ಗೆ ಮಾಹಿತಿ ನೀಡಿ, ಪ್ರತ್ಯೇಕವಾಗಿ ಹಿರಿಯ ನಾಗರಿಕರು ಪಿಂಚಣಿದಾರರನ್ನು ಕಲೆ ಹಾಕಿ ಮೋಸ ಮಾಡುವುದರ ಕುರಿತು ಹಾಗೂ ಡಿಜಿಟಲ್ ಬಂಧನದ ಕುರಿತು ಜಾಗೃತಿ ಮೂಡಿಸಿದರು. ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಮಾತನಾಡಿ ಭಾರತೀಯ ಸೇನೆಯು ಸದಾ ತಾಯಿನಾಡಿನ ಶಾಂತಿಗಾಗಿ ಸರಕಾರ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಸೇವೆ ಮಾಡುವುದರ ಬಗ್ಗೆ ಮನವರಿಕೆ ಮಾಡಿದರು. ಸಂಘದ ಸದಸ್ಯರು ಹಾಗೂ ಮಾಜಿ ಸೈನಿಕರಾದ ದಿವಂಗತ ಮಾಚಿಮಂಡ ಜಿ ಸೋಮಯ್ಯ ಅವರಿಗೆ ಸಂತಾಪ ಸೂಚಿಸಲಾಯಿತು.  ಈ ಸಂದರ್ಭ ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಪಟ್ಟಚೆರುವಂಡ ಕೆ.ನಾಚಪ್ಪ, ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಚಂದ್ರಶೇಖರ್ ಬಿ.ಎಸ್., ಕಾರ್ಯದರ್ಶಿ ಪುಗ್ಗೇರ ಎಸ್.ನಂದಾ, ಖಜಾಂಚಿ ತೋರೇರ ಪೂವಯ್ಯ, ನಿರ್ದೆಶಕರಾದ ಚೇಂದ್ರಿಮಾಡ ಕೆ.ನಂಜಪ್ಪ, ಪಟ್ರಪಂಡ ಎಂ.ಕರುಂಬಯ್ಯ, ಕೊಂಗಂಡ ಎ.ಭೀಮಯ್ಯ, ಅಣ್ಣಾಳಮಾಡ ಡಿ.ಸುಬ್ಬಯ್ಯ, ಬಾಳೆಕುಟ್ಟೀರ ಎ.ಬೋಪಯ್ಯ, ಅಪ್ಪಯ್ಯ ಹೆಚ್.ಕೆ., ಕಬ್ಬಚ್ಚೀರ ಕೆ.ಬೋಪಣ್ಣ, ಎಂ.ಕೆ. ಸಲಾಂ ಕಡಂಗ, ಪಟ್ರಪಂಡ ಎನ್. ಚಂಗಪ್ಪ ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕನಕಪುರದಲ್ಲಿ ಸಾಂಪ್ರದಾಯಿಕ ಹಾಗೂ ಪಾರಂಪರಿಕ ಕನಕೋತ್ಸವ : ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸನ್ಮಾನ*
Next Article *ಕನಕಪುರ ಕನಕೋತ್ಸವದಲ್ಲಿ ಶಾಸಕ ಡಾ.ಮಂತರ್ ಗೌಡರಿಗೆ ಸನ್ಮಾನ*

Related Posts

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

ನವದೆಹಲಿ/ಬೆಂಗಳೂರು NEWS DESK ಫೆ.11: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳು, ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಆರ್ಥಿಕ ಸುಧಾರಣೆಗಳನ್ನು…

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.