ಮಡಿಕೇರಿ NEWS DESK ಫೆ.7 : ಗ್ರಾ.ಪಂ ಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಮತ್ತು ರಾಜಕೀಯ ರಹಿತವಾಗಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕುಂದಚೇರಿ ಗ್ರಾ.ಪಂ ಚೆಟ್ಟಿಮಾನಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಡಿಜಿಟಲ್ ಗ್ರಂಥಾಲಯ, ಅರಿವು ಕೇಂದ್ರ, ಅಂಚೆ ಕಚೇರಿ ಮತ್ತು ಸಂಜೀವಿನಿ ಒಕ್ಕೂಟದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಗ್ರಾ.ಪಂ ಪ್ರತಿನಿಧಿಗಳು ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು. ಕ್ಷೇತ್ರದಾದ್ಯAತ ನೂತನ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ, ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲು ಸರಕಾರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುತ್ತಿದೆ. ಇದನ್ನು ಪಂಚಾಯಿತಿ ಪ್ರತಿನಿಧಿಗಳು ಸದುಪಯೋಗಪಡಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು. ತಾವು ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಗುರಿ ಹೊಂದಿದ್ದು, ಸರ್ವರೂ ಕೈಜೋಡಿಸಬೇಕೆಂದು ಎ.ಎಸ್.ಪೊನ್ನಣ್ಣ ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕುಂದಚೇರಿ ಗ್ರಾ.ಪಂ ಯ ಹಿರಿಯ ಸದಸ್ಯ ಹ್ಯಾರಿಸ್ ಅವರು 1982 ರಲ್ಲಿ ಪಂಚಾಯ್ತಿಯ ಹಳೆಯ ಕಟ್ಟಡ ನಿರ್ಮಾಣಗೊಂಡಿತು, ಅಂದಿನಿAದ ಇಂದಿನವರೆಗೆ ನೂತನ ಕಟ್ಟಡದ ನಿರ್ಮಾಣಕ್ಕೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿರುವ ಹಾಲಿ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಶಾಸಕರು, ಗ್ರಾ.ಪಂ ನ ಉಪಾಧ್ಯಕ್ಷರು, ಆಡಳಿತ ಮಂಡಳಿ, ಸರ್ವ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಮಾಜಿ ಪ್ರತಿನಿಧಿಗಳು, ಈಗಿನ ಮತ್ತು ಹಿಂದಿನ ಜಿಲ್ಲಾಧಿಕಾರಿಗಳು, ದಾನಿಗಳು, ಜಿ.ಪಂ, ತಾ.ಪಂ, 1994ರಿಂದ ರಚನೆಗೊಂಡ ಆರು ಆಡಳಿತ ಮಂಡಳಿ ಸೇರಿದಂತೆ ಸರ್ವರ ಆಸಕ್ತಿಯಿಂದ ನೂತನ ಕಟ್ಟಡ ನಿರ್ಮಾಣಗೊಂಡು ಇಂದು ಉದ್ಘಾಟನೆಗೊಂಡಿದೆ ಎಂದರು. ಕುಂದಚೇರಿ ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
*ಸನ್ಮಾನ* ಶಾಸಕ ಎ.ಎಸ್.ಪೊನ್ನಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ನೆರವಂಡ ಉಮೇಶ್, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಶೇಖರ್, ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್, ಉಪಾಧ್ಯಕ್ಷೆ ಬೇಬಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಎಂ.ಎಸ್.ಗAಗಮ್ಮ, ತಾಲ್ಲೂಕು ಎ.ಡಿ ಹೇಮಂತ್ ಹಾಗೂ ಗುತ್ತಿಗೆದಾರ ಇಸ್ಮಾಯಿಲ್ ಕಾನಾವು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪಂಚಾಯಿತಿ ಸದಸ್ಯರಾದ ವಿಶ್ವ ಪ್ರವೀಣ್ ಕುಮಾರ್, ಬಸಪ್ಪ, ಸವಿತ, ನಮಿತ, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಪುಷ್ಪ, ನೇತ್ರಾವತಿ, ರೂಪ, ಲಕ್ಷಿö್ಮ, ಹೇಮಲತ, ಅನುಜ, ನಯನ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹರೀಶ್ ಸ್ವಾಗತಿಸಿ ನಿರೂಪಿಸಿ, ವಂದಿಸಿದರು. ಚೆಟ್ಟಿಮಾನಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಾಡಗೀತೆಯನ್ನು ಹಾಡಿದರು.









