ಮಡಿಕೇರಿ NEWS DESK ಫೆ.8 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರ ಕಾರು ಅಗ್ನಿಗಾಹುತಿಯಾದ ಘಟನೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಶಾಲನಗರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು. ಕಾರು ಸಂಪೂರ್ಣ ಹಾನಿಗೀಡಾಗಿದ್ದು, ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.










