ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸ ಸರಣಿಯ 100ರ ಸಂಭ್ರಮ ರಾಷ್ಟ್ರೀಯ ವಿಚಾರ ಸಂಕಿರಣವು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇತ್ತೀಚಿಗೆ ನಡೆಯಿತು. ಆ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಮಹಿಳೆಯರಿಗೆ ವೀರರಾಣಿ ಅಬ್ಬಕ್ಕ ಪುರಸ್ಕಾರ ನೀಡಲಾಗಿದ್ದು ಅದರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೋರ ಗ್ರಾಮದ ನಿವಾಸಿ ಕೆ.ಬಿ.ಅಮ್ಮಣ್ಣಿ ವೀರರಾಣಿ ಅಬ್ಬಕ್ಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ . ಸೂಲಗಿತ್ತಿ ನಾಟಿವೈದ್ಯ , ಬಾಣಂತಿ ಆರೈಕೆ , ಜಾನಪದ ಕ್ಷೇತ್ರದಲ್ಲಿನ ಸೇವೆಯನ್ನು ಗಮನಿಸಿ ಈ ಪುರಸ್ಕಾರ ನೀಡಲಾಗಿದ್ದು. ಸೂಕ್ಷ್ಮ , ಸಣ್ಣ , ಮಧ್ಯಮ ಉದ್ಯಮಗಳ ರಾಜ್ಯ ಸಚಿವಾಲಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಂದ ಈ ಪುರಸ್ಕಾರ ಪಡೆದಿರುತ್ತಾರೆ. ಅಮ್ಮಣಿ ಯವರು ಕೆದಮುಳ್ಳೂರು ಪಂಚಾಯತಿಯ ತೋರ ಗ್ರಾಮದ ನಿವಾಸಿ ಭೀಮಯ್ಯನವರ ಪತ್ನಿಯಾಗಿದ್ದಾರೆ.








