
ಕುಶಾಲನಗರ ಫೆ.19 NEWS DESK : ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಫೆ.20 ರಂದು ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 10.00 ಗಂಟೆಗೆ ಮುಂಬೈನ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಲಿಮಿಟೆಡ್ ಸಂಸ್ಥೆ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR: ಸಿ ಎಸ್ ಆರ್) ನಿಧಿಯ ಅನುದಾನದಿಂದ ನಿರ್ಮಾಣವಾಗಿರುವ ವಿವಿಧೋದ್ದೇಶ ಸಭಾಂಗಣದ ದ್ಘಾಟನೆಗೊಳ್ಳಲಿದೆ. ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಲಿಮಿಟೆಡ್ ನ ಸಿಇಒ ಸುಂದರ ರಾಮನ್ ರಾಮಮೂರ್ತಿ ಉದ್ಘಾಟಿಸಲಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಮತ್ತು ಸ್ಥಳೀಯ ಜನಪ್ರತಿನಿದಿಗಳು ಹಾಗೂ ಇಲಾಖೆ ಅಧಿಕಾರಿ ವರ್ಗದವರು ಆಗಮಿಸಲಿದ್ದಾರೆ ಎಂದು ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎ.ಸಿ. ಮಂಜುನಾಥ್ ತಿಳಿಸಿದ್ದಾರೆ.








