
ಮಡಿಕೇರಿ ಫೆ.28 NEWS DESK : ಗಂಭೀರ ಆರೋಪ ಎದುರಿಸುತ್ತಿರುವ ಜೆಫ್ರಿ ಎಪ್ಸ್ಟೀನ್ ನೊಂದಿಗೆ ಸಂಪರ್ಕ ಹೊಂದಿರುವ ಟೀಕೆಗೆ ಗುರಿಯಾಗಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವ ಹಾಗೂ ಬಿಜೆಪಿ ಮುಖಂಡ ಹರ್ ದೀಪ್ ಸಿಂಗ್ ಪುರಿ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಶುಕ್ರವಾರ ಸಂಜೆ ಮಡಿಕೇರಿ ನಗರದ ಇಂದಿರಾಗಾಂಧಿ ವೃತ್ತದಿಂದ ಮೊಂಬತ್ತಿ ಹಿಡಿದು ಹಳೆ ಖಾಸಗಿ ಬಸ್ ನಿಲ್ದಾಣದವರೆಗೆ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಹರ್ ದೀಪ್ ಸಿಂಗ್ ಪುರಿ, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜಿ.ಆರ್.ಪುಷ್ಪಲತಾ ಮಾತನಾಡಿ ಬಾಲಕಿಯರನ್ನು ಅಪಹರಿಸಿ ಪ್ರಭಾವಿಗಳನ್ನು ಅಪರಾಧ ಕೃತ್ಯದಲ್ಲಿ ಭಾಗಿಯಾಗುವಂತೆ ಮಾಡಿದ ಆರೋಪ ಎದುರಿಸುತ್ತಿರುವ ಜೆಫ್ರಿ ಎಪ್ಸ್ಟೀನ್ ನೊಂದಿಗೆ ಕೇಂದ್ರ ಸಚಿವ ಹರ್ ದೀಪ್ ಸಿಂಗ್ ಪುರಿ ಸಂಪರ್ಕ ಹೊಂದಿರುವುದು ಬಹಿರಂಗವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಕೂಡ ಯಾಕೆ ಸಚಿವ ಸಂಪುಟದಲ್ಲಿ ಮುಂದುವರೆಸಿದ್ದಾರೆ ಎಂದು ಪ್ರಶ್ನಿಸಿದರು. ಹರ್ ದೀಪ್ ಸಿಂಗ್ ಪುರಿ ಅವರ ಬಂಧನವಾಗುವವರೆಗೆ ಮಹಿಳಾ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಮಾತನಾಡಿ ಎಪ್ಸ್ಟೀನ್ ಫೈಲ್ ನಲ್ಲಿ ಹೆಸರು ಬಹಿರಂಗಗೊಂಡಿರುವ ಬ್ರಿಟನ್ ಮಾಜಿ ಯುವರಾಜ, ನಾರ್ಜೇನಿಯಾದ ಮಾಜಿ ಪ್ರಧಾನಿ ಸೇರಿದಂತೆ ಅನೇಕ ದೇಶದ ಪ್ರಮುಖ ವ್ಯಕ್ತಿಗಳ ಬಂಧನವಾಗಿದೆ. ವಿಶ್ವ ಸಂಸ್ಥೆ ಮತ್ತು ಅಮೆರಿಕಾದ ಸೆನೆಟ್ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಆದರೆ ಭಾರತದ ಗೌರವಕ್ಕೆ ದಕ್ಕೆ ತಂದಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳದೆ ಪ್ರಧಾನಮಂತ್ರಿಗಳು ಮೌನಕ್ಕೆ ಜಾರಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಕೆ.ಪಿ.ಸಿ.ಸಿ ಸದಸ್ಯರಾದ ಬೇಕಲ್ ರಮಾನಾಥ್, ಕೊಕ್ಕಂಡ ರೂಪಾ ಭೀಮಯ್ಯ, ಪ್ರಮುಖರಾದ ಸುನಿತಾ ಮಂಜುನಾಥ್, ಪಂಕಜ, ಶ್ರೀಜಾ ಸಾಜಿ, ಆಶಾ ಪೂಣಚ್ಚ, ಸುಮಿತಾ ಎಂ.ಜಿ.ಧನ್ಯ, ಸುನಿತಾ ರಾಜನ್, ಪಾರ್ವತಿ ಫ್ಯಾನ್ಸಿ, ಲೀಲಾ ಶೇಷಮ್ಮ, ಶಿವಮ್ಮ, ಮೀನಾಜ್ ಪ್ರವೀಣ್, ಶ್ರೀಮತಿ ಬಂಗೇರ, ವೀಣಾಕ್ಷಿ, ಜಯಮ್ಮ, ಭಾಗ್ಯಮ್ಮ, ಸವಿತ, ವಿಮಲ, ಉದಯ ಚಂದ್ರಿಕ, ಪವಿತ್ರ, ಜಿ.ಸಿ.ಜಗದೀಶ್, ಮಂಡಿರ ಸದಾ ಮುದ್ದಪ್ಪ, ಚಂದ್ರಶೇಖರ್, ಕವನ್ ಕೊತ್ತೋಳಿ, ದಿನೇಶ್ ಕೆ.ಆರ್,ನಿರಂಜನ್, ಅರ್ಜುನ್, ಶರಣ್, ಸುರೇಶ್, ಪ್ರತಾಪ್ ಸೇರಿದಂತೆ ಅನೇಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.









