
ಸುಂಟಿಕೊಪ್ಪ ಫೆ.28 NEWS DESK : ಕಂಬಿಬಾಣೆಯ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಾಲಯದ ಸಭಾಭವನ ನಿರ್ಮಾಣಕ್ಕೆ ಚಾಲನೆ ದೊರೆಯಿತು. ದೇವಾಲಯದ ಆವರಣದಲ್ಲಿ ಅಂದಾಜು 10 ಲಕ್ಷ ವೆಚ್ಚದ ಸಭಾಭವನ ನಿರ್ಮಾಣಕ್ಕೆ ಕಾಫಿ ಬೆಳೆಗಾರರು ಹಾಗೂ ದಾನಿಗಳಾದ ಟಿ.ಕೆ.ಸಜೀವ ಅವರು ಭೂಮಿ ಪೂಜೆ ನೇರವೇರಿಸಿದರು. ದೇವಾಲಯದ ಆರ್ಚಕ ಪ್ರಭಾಕರ್ಭಟ್ ಪೂಜೆಯನ್ನು ನೇರವೇರಿಸಿದರು. ಈ ಸಂದರ್ಭ ಶ್ರೀ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ ರೈ, ಕಾರ್ಯದರ್ಶಿ ಗಣೇಶ್, ಖಜಾಂಚಿ ಅಜಿತ್, ಸಾಬು ಪಳಂಗಪ್ಪ, ಜಯಂತ್, ಗಂಗಾಧರ್, ರವಿಕುಮಾರ್, ಮಾತೃಮಂಡಳಿ ಸದಸ್ಯರಾದ ಪೂರ್ಣಿಮಾ, ಮೀನಾ ಹರೀಶ್, ರಮಣಿ, ಸುಧಾ ಹಾಗೂ ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.









