ಕರಡಿಗೋಡುವಿನ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕುಕ್ಕುನೂರು ಕುಟುಂಬಸ್ಥರಿಂದ ಮಳೆ ಪೂಜೆಯನ್ನ ನೆರೆವೇರಿಸಲಾಯಿತು. ದೇವರ ಸನ್ನಿಧಿಯಲ್ಲಿ ನಾಡಿಗೆ ಉತ್ತಮ ಮಳೆಯಾಗಿ ಪ್ರಕೃತಿಯು ಹಚ್ಚ ಹಸಿರಿನಿಂದ ಕಂಗೊಳಿಸಿ ಭೂಮಿಯನ್ನ ತಂಪಾಗಿಸಿ ಧನ ದಾನ್ಯ ಬೆಳೆಗಳು ಸಮೃದ್ಧಿಯಾಗಿ ಬೆಳೆಯಬೇಕು. ಹಾಗು ಜನತೆಗೆ ಉತ್ತಮ ಆರೋಗ್ಯ ದೀರ್ಘಯುಷ್ಯ ವನ್ನ ಕೊಟ್ಟು ಮಳೆಯಿಂದ ಹಸಿರು ಹುಲ್ಲುಗಳು ಚಿಗುರುಹೊಡೆದು ಹುಲ್ಲುಗಾವಲಾಗಿ ಮಾರ್ಪಟ್ಟು ದನ ಕರುಗಳಿಗೆ ಒಳ್ಳೆಯ ಮೇವು ಒದಗಬೇಕು ಜೊತೆಗೆ ಭರತ ಖಂಡದಲ್ಲಿ ಗೋ ಸಂತತಿ ಹೆಚ್ಚಾಗಿ ಪರಿವರ್ತನೆಯಾಗಬೇಕೆಂದು ದೇವರಲ್ಲಿ ಪ್ರಾರ್ಥನೆಯನ್ನ ಮಾಡಿಕೊಂಡರು. ಈ ಸಂದರ್ಭದಲ್ಲಿ ಕುಕ್ಕುನೂರು ಕುಟುಂಬದ ದೇವ ತಕ್ಕಾರದ ಕೆ ಬಿ ದೇವಪ್ರಕಾಶ್ ದೇವಸ್ಥಾನದ ಅಧ್ಯಕ್ಷರಾದ ಕೆ ಬಿ ಪ್ರಸನ್ನ ಕಾರ್ಯದರ್ಶಿ ಚಿದಾನಂದ ಕುಟುಂಬದ ಹಿರಿಯರಾದ ಮೋಹನ್, ಪುರುಷೋತ್ತಮ, ಸೋಮಣ್ಣ, ಜಯರಾಮ್, ಸೂರಜ್, ಸುನಿಲ್, ಕಿಸನ್, ನವೀನ್, ಇನ್ನಿತರರು ಹಾಜರಿದ್ದರು.








