ಬೆಂಗಳೂರು, ಮಾರ್ಚ್ 07, 2026: ನೈಋತ್ಯ ರೈಲ್ವೆ ಇಲಾಖೆಯು ಕಾಚಿಗುಡ–ಯಶವಂತಪುರ ಹಾಗೂ ಬೆಂಗಳೂರು–ಕಲಬುರಗಿ ಮಾರ್ಗಗಳಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಸಮಯದಲ್ಲಿ ಪರಿಷ್ಕರಣೆ ಮಾಡಿದೆ. ಈ ಹೊಸ ವೇಳಾಪಟ್ಟಿಯು ಮಾರ್ಚ್ 15ರಿಂದ ಅಧಿಕೃತವಾಗಿ ಜಾರಿಗೆ ಬರಲಿದ್ದು, ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಗಳನ್ನು ಈ ಬದಲಾವಣೆಗೆ ಅನುಗುಣವಾಗಿ ಮಾರ್ಪಡಿಸಿಕೊಳ್ಳಲು ಸೂಚಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯ ವಿವರಗಳು:

1. ಯಶವಂತಪುರ – ಕಾಚಿಗುಡ (ರೈಲು ಸಂಖ್ಯೆ: 20704)
-
ಹಿಂದೂಪುರ ನಿಲ್ದಾಣ: ಈ ಮೊದಲು ಮಧ್ಯಾಹ್ನ 15.48ಕ್ಕೆ ಬಂದು 15.50ಕ್ಕೆ ನಿರ್ಗಮಿಸುತ್ತಿತ್ತು. ಇನ್ಮುಂದೆ 15.55ಕ್ಕೆ ಆಗಮಿಸಿ 15.57ಕ್ಕೆ ಹೊರಡಲಿದೆ.
2. ಕಾಚಿಗುಡ – ಯಶವಂತಪುರ (ರೈಲು ಸಂಖ್ಯೆ: 20703)
-
ಹಿಂದೂಪುರ ನಿಲ್ದಾಣ: ಮಧ್ಯಾಹ್ನ 12.08ರ ಬದಲು ಪರಿಷ್ಕೃತ ಸಮಯದಂತೆ 12.17ಕ್ಕೆ ಆಗಮಿಸಿ 12.19ಕ್ಕೆ ನಿರ್ಗಮಿಸಲಿದೆ.
3. ಕಲಬುರಗಿ – ಎಸ್ಎಂವಿಟಿ ಬೆಂಗಳೂರು (ರೈಲು ಸಂಖ್ಯೆ: 22231)
-
ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ: ಬೆಳಿಗ್ಗೆ 11.00ರ ಬದಲು 11.13ಕ್ಕೆ ಆಗಮಿಸಿ 11.15ಕ್ಕೆ ಹೊರಡಲಿದೆ.
-
ಯಲಹಂಕ ನಿಲ್ದಾಣ: ಮಧ್ಯಾಹ್ನ 12.28ರ ಬದಲು 12.58ಕ್ಕೆ ಆಗಮಿಸಿ 01.00 ಗಂಟೆಗೆ ನಿರ್ಗಮಿಸಲಿದೆ.
4. ಎಸ್ಎಂವಿಟಿ ಬೆಂಗಳೂರು – ಕಲಬುರಗಿ (ರೈಲು ಸಂಖ್ಯೆ: 22232)
-
ಯಲಹಂಕ ನಿಲ್ದಾಣ: ಮಧ್ಯಾಹ್ನ 15.05ರ ಬದಲು 15.09ಕ್ಕೆ ಆಗಮಿಸಿ 15.11ಕ್ಕೆ ಹೊರಡಲಿದೆ.
-
ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ: ಸಂಜೆ 16.23ರ ಬದಲು 16.45ಕ್ಕೆ ಆಗಮಿಸಿ 16.47ಕ್ಕೆ ನಿರ್ಗಮಿಸಲಿದೆ.
ಪ್ರಯಾಣಿಕರು ಯಾವುದೇ ಗೊಂದಲಕ್ಕೀಡಾಗದಂತೆ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ವಿಚಾರಣಾ ಕೇಂದ್ರಗಳಲ್ಲಿ ಸಮಯವನ್ನು ಖಚಿತಪಡಿಸಿಕೊಂಡು ನಿಲ್ದಾಣಕ್ಕೆ ಆಗಮಿಸುವಂತೆ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ವಿನಂತಿಸಿದೆ.







