Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷ ಕೈಮೀರಿ ಹೋಗಿದೆ. ಕಳೆದ 10 ದಿನಗಳಲ್ಲಿ ಕಾಡಾನೆ ದಾಳಿಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲವೆಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಸಚಿವರಿಗೆ ಅರಣ್ಯ ಖಾತೆಯ ಜವಾಬ್ದಾರಿಯನ್ನು ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವನ್ಯಜೀವಿಗಳ ದಾಳಿಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ, ಇದೇ ಫೆ.28 ರಂದು ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಇದೀಗ ಕುಶಾಲನಗರ ತಾಲ್ಲೂಕಿನ ಬಾಳೆಗಂಡಿ ಎಂಬಲ್ಲಿ ಜಲಜಾಕ್ಷಿ ಎಂಬುವವರು ಜೀವ ಕಳೆದುಕೊಂಡಿದ್ದಾರೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದ್ದಾರೆ. ಜನ ವನ್ಯಜೀವಿ ದಾಳಿಯ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದರೂ ಮತ್ತು ಸಾವು ನೋವುಗಳು ಸಂಭವಿಸುತ್ತಿದ್ದರೂ ಅರಣ್ಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆಯುವ ಕಾಳಜಿಯನ್ನು ತೋರುತ್ತಿಲ್ಲ. ಕೇವಲ ವಿಧಾನಸೌಧದ ಕಚೇರಿಯಲ್ಲೇ ಉಳಿದುಬಿಟ್ಟರೆ ವನ್ಯಜೀವಿಗಳ ಉಪಟಳದಿಂದ ಜಿಲ್ಲೆಯ ಜನರು ಎದುರಿಸುತ್ತಿರುವ ಕಷ್ಟನಷ್ಟಗಳ ಗಂಭೀರತೆಯ ಅರಿವಾಗುವುದಿಲ್ಲ. ಆದ್ದರಿಂದ ಅರಣ್ಯ ಸಚಿವರು ತಕ್ಷಣ ಕೊಡಗು ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆಯ ನೈಜತೆಯನ್ನು ಅರಿತುಕೊಳ್ಳಬೇಕು. ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಜನಸಂಪರ್ಕ ಸಭೆ ನಡೆಸಿ ಜನರ ಅಹವಾಲನ್ನು ಸ್ವೀಕರಿಸಬೇಕು. ವನ್ಯಜೀವಿ ದಾಳಿ ತಡೆಗೆ ಇಲ್ಲಿಯವರೆಗೆ ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳ ಕುರಿತು ಖುದ್ದು ಪರಿಶೀಲಿಸಬೇಕು. ಶಾಶ್ವತ ಯೋಜನೆ ರೂಪಿಸಲು ಸಭೆಯಲ್ಲಿ ಅನುಮೋದನೆ ನೀಡಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ತಪ್ಪಿದಲ್ಲಿ ಅರಣ್ಯ ಸಚಿವರ ರಾಜೀನಾಮೆಗಾಗಿ ಆಗ್ರಹಿಸಿ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ವಿರಾಜಪೇಟೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತಾ ಅಧಿಕಾರ…

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.