
ಮಡಿಕೇರಿ ಮಾ.13 NEWS DESK : ಕೊಡಗು ಅಖಿಲ ಅಮ್ಮಕೊಡವ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾದ ರೂ.20 ಲಕ್ಷಗಳ ಚೆಕ್ ನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸಮಾಜದ ಅಧ್ಯಕ್ಷರಾದ ಬಾನಂಡ ಪ್ರಥ್ಯು ಅವರಿಗೆ ವಿಧಾನ ಸೌಧದಲ್ಲಿ ಹಸ್ತಾಂತರ ಮಾಡಿದರು. ಈ ಸಂದರ್ಭ ಅಮ್ಮ ಕೊಡವ ಸಮಾಜದ ಪ್ರಮುಖರಾದ ಪುತ್ತಾಮನೆ ಅನಿಲ್ ಪ್ರಸಾದ್, ನೇರಿಯಂಡಮ್ಮನ ಸುಬ್ರಮಣಿ, ಜನಾರ್ದನ, ಬಾನಂಡ ಸುನೀತ್, ಸೂದನ್, ಹೆಮ್ಮಚ್ಚಿಮನೆ ಎನ್ ಹರೀಶ್, ಹೆಚ್.ಎಂ.ಹರೀಶ್, ಮನ್ನಕಮನೆ ಎ.ಬಾಲಕೃಷ್ಣ, ಎಂ.ಎಂ.ಬಾಲಕೃಷ್ಣ, ಹೆಚ್.ಆರ್.ಮದನ್, ಪುತ್ತಾಮನೆ ಪರ್ವತ್, ಯತೀಶ್, ಹೆಚ್.ಎಂ.ಪ್ರಶಾಂತ್, ಕೊಡಿಂಜಮ್ಮನ ಬಾಲಕೃಷ್ಣ, ಶರಣು, ವಿಜು ಸೇರಿದಂತೆ ಇತರರು ಇದ್ದರು.









