ಮಡಿಕೇರಿ NEWS DESK ಮಾ.15 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪುತ್ತೂರು ವಿಭಾಗದ ಮಡಿಕೇರಿ ಘಟಕದ ಡಿಪೋ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡಿರುವ ರಾಮ್ ಚಂದ್ ದರ್ಶನ್ ಅವರನ್ನು ಯುನೈಟೆಡ್ ಪ್ಲಾಂಟೇಷನ್ ವಕರ್ಸ್ ಯೂನಿಯನ್ (ಎಐಟಿಯುಸಿ) ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಹಾಗೂ ಪದಾಧಿಕಾರಿಗಳು ಭೇಟಿಯಾಗಿ ಅಭಿನಂದಿಸಿದರು.ಈ ಸಂದರ್ಭ ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ಎಟಿಸಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ರಾಮ್ ಚಂದ್ ದರ್ಶನ್ ಅವರು ಈ ಹಿಂದೆ ಪಿರಿಯಾಪಟ್ಟಣ ಘಟಕದಲ್ಲಿ ಘಟಕ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು.








