Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*
  • *ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.20 : ವಾಂಡರರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರವನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆಯೆಂದು ಕ್ಲಬ್ ಅಧ್ಯಕ್ಷ ಕೋಟೇರ ಎನ್.ಮುದ್ದಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಹಾಕಿ ಅಥ್ಲೆಟಿಕ್ಸ್ ಮತ್ತು ಯೋಗವನ್ನು ಒಳಗೊಂಡoತೆ ಶಿಬಿರ ನಡೆಯಲಿದೆ. ಶಿಬಿರ ಇದೇ ಮಾ.29ರಂದು ಆರಂಭಗೊoಡರು, ಹಿರಿಯ ಕ್ರೀಡಾ ಮಾರ್ಗದರ್ಶಕರಾಗಿದ್ದ ದಿ.ಸಿ.ವಿ.ಶಂಕರ್ ಅವರ ಜನ್ಮದಿನವಾದ ಏ.1 ರಂದು ಶಿಬಿರಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತದೆ. ಸಮಾರೋಪ ಮೇ3 ರಂದು ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಕ್ಲಬ್‌ನ ಪ್ರಮುಖರಾದ ಬೊಪ್ಪಂಡ ಶ್ಯಾಂ ಮಾತನಾಡಿ, 1934ರಲ್ಲಿ ಆರಂಭಗೊAಡ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ಮೂಲಕ ಕಳೆದ 31 ವರ್ಷಗಳಿಂದ ಬೇಸಿಗೆ ಕ್ರೀಡಾ ಶಿಬಿರವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಕ್ರೀಡಾ ಮರ್ಗದರ್ಶಕರಾಗಿದ್ದ ದಿ.ಸಿ.ವಿ.ಶಂಕರ್ ಅವರ ಗರಡಿಯಲ್ಲಿ ಪಳಗಿದ್ದ ಎಂ.ಪಿ.ಗಣೇಶ್, ಬಿ.ಪಿ.ಗೋವಿಂದ ಅವರು ಒಲಂಪಿಯನ್‌ಗಳಾಗಿದ್ದು, ಹಾಕಿ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಇಲ್ಲಿಯವರೆಗಿನ 11 ಮಂದಿ ಒಲಂಪಿಯನ್‌ಗಳಲ್ಲಿ 9 ಮಂದಿ ಆಟಗಾರರು ಇದೇ ಮೈದಾನದಲ್ಲಿ ಆಟವಾಡಿ ಸಾಧನೆಯ ಶಿಖರವನ್ನೇರಿದವರೆಂದು ಸಂತಸ ವ್ಯಕ್ತಪಡಿಸಿದರು. ಕ್ರೀಡಾ ಸಾಧಕರಿಗೆ ಮಾರ್ಗದರ್ಶಕರಾಗಿದ್ದ ದಿ.ಸಿ.ವಿ.ಶಂಕರ್ ಅವರ ಗೌರವಾರ್ಥ ಅವರು ಹುಟ್ಟಿದ ದಿನದಂದು ಕ್ರೀಡಾ ಶಿಬಿರವನ್ನು ಉದ್ಘಾಟಿಸಲಾಗುತ್ತಿದೆ. ಪ್ರಸ್ತುತ ದಿನಗಳಲ್ಲಿ ಮೊಬೈಲ್ ಗೀಳಿಗೆ ಬಿದ್ದ ಮಕ್ಕಳು ಮೈದಾನದತ್ತ ಬರುವುದು ಕ್ಷೀಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಮೈದಾನದತ್ತ ಸೆಳೆೆಯುವ ಪ್ರಯತ್ನವಾಗಿ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಶಿಬಿರ ಪ್ರತಿನಿತ್ಯ ಬೆಳಗ್ಗೆ 6 ಗಂಟೆಗೆ ಯೋಗಾಭ್ಯಾಸದೊಂದಿಗೆ ಆರಂಭಗೊಳ್ಳಲಿದ್ದು, ನಂತರ ಮಕ್ಕಳಿಗೆ ಅವರಿಷ್ಟದಂತೆ ಅಥ್ಲೆಟಿಕ್ಸ್ ಮತ್ತು ಹಾಕಿಯ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ಹಾಕಿ ತರಬೇತಿಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ಸ್ಟಿಕ್ ಮತ್ತು ಬಾಲನ್ನು ತರುವುದು ಕಡ್ಡಾಯವೆಂದು ಸ್ಪಷ್ಟಪಡಿಸಿದರು. ಯೋಗ ತರಬೇತಿಯನ್ನು ಕೆ.ಕೆ.ಮಹೇಶ್ ಕುಮಾರ್, ವೆಂಕಟೇಶ್, ಬಾಬು ಸೋಮಯ್ಯ ಅವರು ನೀಡುತ್ತಾರೆ. ಹಾಕಿ ಮತ್ತು ಅಥ್ಲೆಟಿಕ್ಸ್ ತರಬೇತಿಯನನ್ನು ಅನುಭವಿ ಆಟಗಾರರು ನೀಡಲಿದ್ದಾರೆ. ಕ್ರೀಡೆಯ ಬಗ್ಗೆ ಒಲವಿರುವ, ಮಕ್ಕಳಿಗೆ ಹಾಕಿ ತರಬೇತಿ ನೀಡಲು ಇಚ್ಛಿಸುವವರು ಶಿಬಿರದಲ್ಲಿ ಪಾಲ್ಗೊಳ್ಳಬಹುದೆಂದು ಬೊಪ್ಪಂಡ ಶ್ಯಾಂ ತಿಳಿಸಿ, ಆಸಕ್ತ ಮಕ್ಕಳು ಮಾ.29ರಂದು ಬೆಳಗ್ಗೆ 6 ಗಂಟೆಗೆ ಬಂದು ತರಬೇತಿಯಲ್ಲಿ ಪಾಲ್ಗೊಳ್ಳಬಹುದೆಂದು ಹೇಳಿದರು. ತಿಂಗಳ ಅವಧಿಯ ಕ್ರೀಡಾ ಶಿಬಿರದ ನಡುವೆ ಈ ಬಾರಿ “ತಡಿಯಂಡ ಮೋಳ್” ಬೆಟ್ಟಕ್ಕೆ ಚಾರಣ ತೆರಳುವ ಉದ್ದೇಶವಿದೆ. ಪ್ರತಿವರ್ಷವು ಜಿಲ್ಲೆಯ ಪ್ರಮುಖ ಸ್ಥಳಗಳಿಗೆ ಮಕ್ಕಳನ್ನು ಚಾರಣಕ್ಕೆ ಕರೆದೊಯ್ಯಲಾಗುತ್ತದೆಂದು ತಿಳಿಸಿದರು. ಕ್ಲಬ್‌ನ ಪ್ರಮುಖರಾದ ಕುಡೆಕಲ್ ಸಂತೋಷ್ ಮಾತನಾಡಿ, ಶಿಬಿರದಲ್ಲಿ 5 ರಿಂದ 15 ವರ್ಷದ ಮಕ್ಕಳು ಪಾಲ್ಗೊಳ್ಳಬಹುದು. ಶಿಬಿರದ ಕೊನೆಯಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಿ ಮಕ್ಕಳಿಗೆ ಬಹುಮಾನಗಳನ್ನು ನೀಡುವುದಲ್ಲದೆ, ಪಾಲ್ಗೊಳ್ಳುವ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗತ್ತದೆಂದು ಮಾಹಿತಿಯನ್ನಿತ್ತರು. ಗೋಷ್ಠಿಯಲ್ಲಿ ಕ್ಲಬ್‌ನ ಸಂಚಾಲಕರಾದ ಬಾಬು ಸೋಮಯ್ಯ, ಪ್ರಮುಖರಾದ ಟಿ.ವಿ.ಲೋಕೇಶ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂದಿನ ಒಂದು ವಾರ ರಾಜ್ಯಾದ್ಯಂತ ಮಳೆ ಅಬ್ಬರ ಸಾಧ್ಯತೆ: ಯಾವೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ? ಹವಾಮಾನ ಇಲಾಖೆ ರಿಪೋರ್ಟ್*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೋದಾವರಿ ನದಿಯಲ್ಲಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ದಾರುಣ ಅಂತ್ಯ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು

ವಿಜಯವಾಡ, ಮಾರ್ಚ್ 20, 2026: ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಪೋಲವರಂ ಬಳಿ ಗೋದಾವರಿ ನದಿಯಲ್ಲಿ ಈಜಲು ಹೋದ ಖಾಸಗಿ ವಿಶ್ವವಿದ್ಯಾಲಯದ…

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.