
ಮಡಿಕೇರಿ ಮಾ.21 NEWS DESK : ಕಾರು ಮತ್ತು ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್ಗಳ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ತಿತಿಮತಿ-ಮೈಸೂರು ರಸ್ತೆಯಲ್ಲಿ ನಡೆದಿದೆ. ನಂಜನಗೂಡು ನಿವಾಸಿ ಶಿವಕುಮಾರ್(25) ಮತ್ತು ಕೇರಳ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್(27) ಮೃತ ಯುವಕರಾಗಿದ್ದಾರೆ. ಕಾರೊಂದು ಮೈಸೂರು-ತಿತಿಮತಿ ಮಾರ್ಗವಾಗಿ ಗೋಣಿಕೊಪ್ಪ ಕಡೆಗೆ ಆಗಮಿಸುತಿತ್ತು. ಇದೇ ಮಾರ್ಗವಾಗಿ ನಂಜನಗೂಡು ನಿವಾಸಿ ಶಿವಕುಮಾರ್ ಹಾಗೂ ಕೇರಳ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್ ಅವರು ಮೈಸೂರು ಕಡೆಗೆ ತೆರಳುತ್ತಿದ್ದರು. ಮಧ್ಯಾಹ್ನ ಗೋಣಿಕೊಪ್ಪ-ತಿತಿಮತಿ ಹೆದ್ದಾರಿಯ ದೇವರಪುರ ಬಳಿ ಕಾರು ಮತ್ತು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಎರಡೂ ಬೈಕ್ಗಳಲ್ಲಿದ್ದ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೋಣಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.









