Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ 26  NEWS DESK : ಚಾಟ್ ಜಿಪಿಟಿಯಂಥ ತಾಂತ್ರಿಕ ಮಾಧ್ಯಮವನ್ನು ಹೆಚ್ಚು ಬಳಕೆ ಮಾಡುತ್ತಿದ್ದರೆ ನಮ್ಮ ಮನಸ್ಸಿನ ಕ್ರಿಯಾಶೀಲತೆಯನ್ನೇ ನಾಶ ಮಾಡುವ ಮೂಲಕ ಮೆದುಳಿನ ಮೇಲೆ ದುಫ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿರುವ ನಿಟ್ಟಿನಲ್ಲಿ ಅಗತ್ಯಕ್ಕೆ ತಕ್ಕಂತೆ ಎಐ, ಜಿಪಿಟಿಯಂಥ ಮಾಧ್ಯಮವನ್ನು ಬಳಸುವ ಮೂಲಕ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕರೆ ಗಮನ ನೀಡಿ ಎಂದು ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ. ಶುಭಾ ಕೆ.ಜಿ. ವಿದ್ಯಾಥಿ೯ಗಳಿಗೆ ಕರೆ ನೀಡಿದ್ದಾರೆ. ಕೊಡಗು ವಿಶ್ವವಿದ್ಯಾಲಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕೆ. ಎಂ. ಕಾರ್ಯಪ್ಪ ಕಾಲೇಜಿನ ಮಹಿಳಾ ಘಟಕ ಹಾಗೂ ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಭಾಗಗಗಳ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ರ ಅಂಗವಾಗಿ ” ಹೆಲ್ದಿ ಹ್ಯಾಬಿಟ್ಸ್ – ಹ್ಯಾಪಿ ಲೈಫ್” ವಿಷಯದ ಕುರಿತು ಆಯೋಜಿತ ಕಾಯಾ೯ಗಾರದಲ್ಲಿ ಅವರು ಮಾತನಾಡಿದರು. ಯೌವನದಲ್ಲಿ ಯುವತಿಯರು ಚಮ೯ ಸಂರಕ್ಷಣೆ ಸಂಬಂಧಿತ ಹೆಚ್ಚು ಜಾಗೖತೆ ವಹಿಸುವ ನಿಟ್ಟಿನಲ್ಲಿ ಆರೋಗ್ಯಕರ ಆಹಾರ ಸೇವಿಸಬೇಕು. ಆಯಾಯ ಕಾಲಮಾನಕ್ಕೆ ತಕ್ಕಂತೆ ಆಹಾರ ಸೇವನೆಯೂ ಯೌವನದಲ್ಲಿ ಮುಖ್ಯವಾಗುತ್ತದೆ ಎಂದೂ ಡಾ. ಶುಭಾ ಕೆ.ಜಿ. ಕಿವಿಮಾತು ಹೇಳಿದರು.. ಮೊಬೈಲ್ ಬಳಕೆಯು ಹೆಚ್ಚಾದಂತೆ ಇದು ಯುವಪೀಳಿಗೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ದೈಹಿಕವಾಗಿಯೂ ಮೊಬೈಲ್ ನ ಅತೀ ಬಳಕೆಯು ಗಂಭೀರ ಪರಿಣಾಮ ಬೀರುತ್ತದೆ. ಹಿಂದಿನ ಕಾಲದಲ್ಲಿ ಸಂಸ್ಕೖತಿ, ಸಂಪ್ರದಾಯಕ್ಕೆ ಮನೆಗಳಲ್ಲಿ ಹೆಚ್ಚು ಆದ್ಯತೆ ನೀಡುತ್ತಿದ್ದ ಹಿನ್ನಲೆಯಲ್ಲಿ ಕುಟುಂಬ ವಗ೯ದ ಆರೋಗ್ಯ ಉತ್ತಮವಾಿತ್ತು ಎಂದು ಸ್ಮರಿಸಿಕೊಂಡ ಡಾ.ಶುಭಾ, ನಮ್ಮ ದೇಹಕ್ಕೆ ನಾವೇ ಚಾಲಕರಂತೆ, ಹೀಗಾಗಿ ನಮ್ಮ ದೇಹದ ಆರೋಗ್ಯದ ಕಾಳಜಿಯನ್ನು ನಾವೇ ಸೂಕ್ತವಾಗಿ ನಿವ೯ಹಿಸಬೇಕು. ಕಾಯಿಲೆಗಳಿಂದ ಮುಕ್ತವಾಗಿರುವ ಶರೀರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಯೌವನದಲ್ಲಿಯೇ ಹೆಚ್ಚು ಮುತುವಜಿ೯ ವಹಿಸಬೇಕೆಂದೂ ಕರೆ ನೀಡಿದರು. ವಿದ್ಯಾರ್ಥಿನಿಯರಿಗೆ ಆರೋಗ್ಯಕರ ಜೀವನದ ಮಹತ್ವ, ಉತ್ತಮ ಜೀವನ ಶೈಲಿ ಮತ್ತು ದೈನಂದಿನ ಆಹಾರ ಹಾಗೂ ಆರೋಗ್ಯ ದಲ್ಲಿ ಆಗುವ ಏರುಪೇರುಗಳು ಮತ್ತು ಅವುಗಳನ್ನು ಸಮರ್ಪಕವಾಗಿ ನಿಭಾಯಿಸುವ ಬಗ್ಗೆಯೂ ಡಾ. ಶುಭಾ ಅರಿವು ಮೂಡಿಸಿದರು. ಪ್ರಸ್ತುತ ನವಯುಗದಲ್ಲಿ ಆಯುರ್ವೇದದ ಮಹತ್ವ ನಮ್ಮ ಸುತ್ತ ಮುತ್ತಲಿನ ಔಷಧೀಯ ಸಸ್ಯಗಳ ಬಳಕೆ ಬಗ್ಗೆ ಮಾಹಿತಿ ನೀಡಿದ ಅವರು ಅವುಗಳನ್ನು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಬಳಸಬಹುದಾದ ರೀತಿಯನ್ನೂ ವಿವರಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹನಿರ್ದೇಶಕಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ವಿದ್ಯಾರ್ಥಿಗಳು ಹೇಗೆ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ, ಮೊಬೈಲ್ ದುರ್ಬಳಕೆಯಿಂದ ದಿಕ್ಕು ತಪ್ಪುತ್ತಿದ್ದಾರೆಹ ಎಂದು ವಿವರಿಸಿ, , ಜೀವನದಲ್ಲಿ ತೆಗೆದು ಕೊಳ್ಳಬೇಕಾದ ಸರಿಯಾದ ನಿರ್ಧಾರಗಳು ಮತ್ತು ಪೌಷ್ಟಿಕ ಆಹಾರದ ಮಹತ್ವ ಕುರಿತು ಜಾಗೃತಿ ಮೂಡಿಸಿದರು. ಕರ್ನಾಟಕ ಸರ್ಕಾರಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಜಾರಿಗೆ ತಂದಿರುವ ವಿಶೇಷ ಪೊಲೀಸ್ ಪಡೆಯಾದ “ಅಕ್ಕ ಪಡೆ” ಯ ಬಗ್ಗೆಯೂ ಸವಿತಾ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಮೇ.ಜರ್ ಪ್ರೊ. ರಾಘವ ಬಿ. ಮಾತನಾಡಿ, ಮಹಿಳಾ ದಿನಾಚರಣೆಯು ಒಂದು ದಿನದ ಆಚರಣೆಗೆ ಸೀಮಿತವಾಗಿರಬಾರದು. ಪ್ರಸ್ತುತ ಸಮಾಜದಲ್ಲಿ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಮಹಿಳೆಯರ ಪ್ರತಿನಿಧಿತ್ವ ಮಹತ್ವ ದ್ದಾಗಿದೆ, ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಸ್ತ್ರೀಯ ಮಹತ್ವ ತಿಳಿಯುವ ಅಗತ್ಯ ಇದೆ ಎಂದು ಕರೆ ನೀಡಿದರು. ಕಾಲೇಜಿನ ಮಹಿಳಾ ಘಟಕದ ಸಂಯೋಜಕಿ ಪ್ರೊ. ನಯನಾ ಕಶ್ಯಪ್ ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳೆ ಈವರೆಗೆ ಸಾಗಿಬಂದ ಹೋರಾಟದ ಹಾದಿ ಒಂದೆಡೆಯಾದರೆ ಇಂದಿನ ಶತಮಾನದ ಮಹಿಳೆ ಹೊಸ ಸವಾಲುಗಳನ್ನು ಎದುರಿಸುವ ಅನಿವಾರ್ಯ ಇನ್ನೊಂದೆಡೆ ಇದೆ. ಈ ನಿಟ್ಟಿನಲ್ಲಿ ಪ್ರತಿಯೋವ೯ ಯುವತಿ ಮಾನಸಿಕ, ದೈಹಿಕ ಸಾಮರ್ಥ್ಯ ಮತ್ತು ಆರೋಗ್ಯ ಸಮತೋಲನವನ್ನು ಎಚ್ಚರದಿಂದ ಕಾಪಾಡಿಕೊಳ್ಳಬೇಕಾದ ತುರ್ತಿನ ಕುರಿತು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು. ಈ ಸಂದರ್ಭ ಕಾಲೇಜಿನ ಮಹಿಳಾ ಸ್ವಚ್ಛತಾ ಸಿಬ್ಬಂದಿ ಯ ಅವಿರತ ಶ್ರಮ, ಸೇವೆ ಗುರುತಿಸಿ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.
ತಾವು ಯಾವುದೇ ದುಶ್ಚಟಗಳಿಗೆ ಒಳಗಾಗುವುದಿಲ್ಲ ಹಾಗೂ ಆರೋಗ್ಯಕರ ಜೀವನ ನಡೆಸುತ್ತೇವೆ ಎಂದು ಕಾಯ೯ಗಾರದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರು ಪ್ರತಿಜ್ಞೆ ಸ್ವೀಕರಿಸಿದರು. ವಿದ್ಯಾರ್ಥಿನಿಯರಾದ ಸಪ್ನಾ ಶೇಠ್ ಮತ್ತು ಚೋಂದಮ್ಮ ಪ್ರಾಥಿ೯ಸಿ, ರಾಜ್ಯ ಶಾಸ್ತ್ರ ವಿಭಾಗದ ಸಂಯೋಜಕಿ ಪ್ರೊ. ಗಾಯತ್ರಿ ದೇವಿ ಸ್ವಾಗತಿಸಿದರು. ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಎ. ಎನ್ ಗಾಯತ್ರಿ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ರಾಜ್ಯ ಶಾಸ್ತ್ರ ವಿಭಾಗದ ಡಾ. ಶ್ರುಂಗಾರ್ ನಿರ್ವಹಿಸಿದರು. ಕಾಲೇಜಿನ ಬೋಧಕರಾದ ಆಲೋಕ್ ಬಿಜೈ, ಯೋಗಾನಂದ, ಶರತ್, ಡಾ. ಭೈರವಿ, ಕನ್ನಿಕಾ ಪ್ರಕಾಶ್, ಡಾ. ವಿಜಯಲತ, ದೇವಮ್ಮ, ಡಾ. ಅಮೃತ ಮತ್ತು ಡಾ. ನಳಿನಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.