

ಮಡಿಕೇರಿ NEWS DESK ಮಾ.27 : ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ, ಸೋಮವಾರಪೇಟೆ ತಾಲ್ಲೂಕಿನ ಕುಸುಬೂರು ಗ್ರಾಮದ ಕೆಂಚಮ್ಮನ ಬಾಣೆಯ ಬಿ.ಎಸ್.ಆನಂದ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬಿ.ಎಸ್.ಆನಂದ್ ಅವರನ್ನು ನೇಮಕ ಮಾಡಿ ದಾವಣಗೆರೆಗೆ ನಿಯೋಜಿಸಿದ್ದಾರೆ. ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಏ.9 ರಂದು ನಡೆಯಲಿದೆ.








