
ಗೋಣಿಕೊಪ್ಪ ಮಾ.27 NEWS DESK : ರಾಮನವಮಿ ಪ್ರಯುಕ್ತ ಗೋಣಿಕೊಪ್ಪ ನಗರ ಹಿಂದೂ ಪರ ಸಂಘಟನೆಗಳು ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು. ಶ್ರೀ ಉಮಾಮಹೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ನಂತರ ರಾಮ ಸ್ತೋತ್ರವನ್ನು ಪಠಿಸಿ ಸಮಾಜದ ಸುಭೀಕ್ಷೆಗೆ ಪ್ರಾರ್ಥಿಸಿದರು. ಇದೇ ಸಂದರ್ಭ ನೆರದವರಿಗೆ ಸಿಹಿ ಹಂಚಲಾಯಿತು. ವಿಶ್ವ ಹಿಂದೂ ಪರಿಷತ್ ಪೊನ್ನಂಪೇಟೆ ತಾಲೂಕು ಪ್ರಖಂಡ ಅಧ್ಯಕ್ಷ ಅಮೃತ್ರಾಜ್, ಉಪಾಧ್ಯಕ್ಷ ಎಂ.ಎಸ್.ಸುಬ್ರಮಣಿ, ಕಾರ್ಯದರ್ಶಿ ಉಮೇಶ್, ಮಾಜಿ ಕಾರ್ಯದರ್ಶಿ ಅಮ್ಮತ್ತೀರ ಸುರೇಶ್, ಗೋಣಿಕೊಪ್ಪ ನಗರಘಟಕ ಕಾರ್ಯದರ್ಶಿ ಕೆ.ವಿ. ಸುರೇಶ್, ಗೋ ರಕ್ಷಕ್ ಅರುಣ್ ಗೋಪಾಲಕೃಷ್ಣ, ಪ್ರಚಾರಕ್ ಪುಷ್ಪಾರಾಜ್, ಸಂಘ ಪರಿವಾರದ ಪ್ರಮುಖರಾದ ನೆಲ್ಲೀರ ಚಲನ್, ಸುರೇಶ್ ರೈ, ರಾಜೇಶ್, ಕೊಣಿಯಂಡ ಬೋಜಮ್ಮ, ಕೆ.ಜಿ.ರಾಮಕೃಷ್ಣ, ದೀಪಕ್, ಕುಮಾರ, ಬೆಂಜಂಡ ರಶ್ಮಿ ದೇವಯ್ಯ, ಎಂ.ಎನ್. ಗಣೇಶ್, ಅಣ್ಣಪ್ಪ, ಚೇತನ್, ಸುಬ್ರಮಣಿ, ಜ್ಯೊತಿ, ವಿನು, ಲಕ್ಷ್ಮಿರೆಡ್ಡಿ, ಮಂಜು, ವಿನೋದ್, ಧನಲಕ್ಷ್ಮಿ, ಮಣಿಕಂಠ, ಶಿವು ಇದ್ದರು.









