Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
  • *ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ : ಭಾರತದ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಅಗತ್ಯ : ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ : ಭಾರತದ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಅಗತ್ಯ : ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅಭಿಮತ*

ಮಾರ್ಚ್ 28, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮಾ.28 NEWS DESK : ಭಾರತವು ವಿಶ್ವದ ಅತ್ಯುನ್ನತ ನಾಗರಿಕತೆಗಳನ್ನು ಹೊಂದಿದೆ. ಪ್ರಾಚೀನ ಕಾಲದಲ್ಲಿ ಗುರುಕುಲ ಮತ್ತು ಆಶ್ರಮಗಳು ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿದ್ದವು. ತದನಂತರ ನಳಂದ ಮತ್ತು ತಕ್ಷಶಿಲಾದಂತಹ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಭಾರತೀಯ ಸಮಾಜದ ಮೌಲ್ಯಗಳನ್ನು, ಬದುಕಿನ ಪಾಠಗಳನ್ನು, ಸಂಸ್ಕಾರಯುತ ವಿದ್ಯಾಭ್ಯಾಸವನ್ನು ಉನ್ನತ ಶಿಕ್ಷಣದ ಮೂಲಕ ಬೋಧಿಸುತ್ತಿದ್ದವು. ಭಾರತದ ಇಂತಹ ಐತಿಹಾಸಿಕ ಶಿಕ್ಷಣ ಪದ್ಧತಿ ಇಂದಿನ ಮಕ್ಕಳಿಗೆ ಅತ್ಯಗತ್ಯ ಮತ್ತು ಅನಿವಾರ್ಯ ಎಂದು ಬೆಂಗಳೂರು ದಕ್ಷಿಣದ ಆಡಳಿತಾತ್ಮಕ ನ್ಯಾಯಾಧೀಶ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರು ಅಭಿಮತ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಆವರಣದಲ್ಲಿಹಮ್ಮಿಕೊಂಡಿದ್ದ ಕೊಡಗು ವಿಶ್ವವಿದ್ಯಾಲಯದ ಮೂರನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಿಜಿಟಲ್ ಯುಗದಲ್ಲಿ ನಾವು ಎಷ್ಟೇ ಮುಂದುವರೆದಿದ್ದರೂ ನಮ್ಮ ಪೂರ್ವಜರ ಜ್ಞಾನದಿಂದ ನಾವು ತುಂಬ ದೂರ ಉಳಿದಿದ್ದೇವೆ ಎಂಬುದನ್ನು ಅರ್ಥೈಸಿಕೊಳ್ಳಬೇಕು. ವಿಜ್ಞಾನ, ಕಲೆ, ಸಾಹಿತ್ಯ, ಸಂಗೀತ, ರಾಜಕೀಯ ಒಳಗೊಂಡಂತೆ ಬಹುತೇಕ ಕ್ಷೇತ್ರಗಳಲ್ಲಿ ನಮ್ಮ ಪೂರ್ವಜರು ಆಳವಾದ ಜ್ಞಾನ ಹೊಂದಿದ್ದರು. ವೈದಿಕ ಶಿಕ್ಷಣವು ಕೇವಲ ಧರ್ಮಾಧಾರಿತ ಅಲ್ಲ, ಅಲ್ಲಿ ಕೌಶಲ್ಯದ ಬೆಳವಣಿಗೆ, ತತ್ವಾದರ್ಶಗಳನ್ನು, ವೈಚಾರಿಕತೆಯ ವಿಸ್ತಾರಕ್ಕೆ ಅನುವು ಮಾಡಿಕೊಟ್ಟಿದೆ ಎಂದು ಅವರು ತಿಳಿಸಿದರು. ನಮ್ಮ ಋಷಿಮುನಿಗಳು ಮಕ್ಕಳಲ್ಲಿ ಆಲೋಚನಪರತೆ, ಪ್ರತಿಫಲಿತ ಚಿಂತನೆ ಯನ್ನು ರೂಢಿಸಬೇಕೆಂದು ಬಯಸಿದ್ದರು. ಇಂದಿನ ವಿದ್ಯಾರ್ಥಿಗಳಲ್ಲಿ ಈ ಆಲೋಚನಾ ಶಕ್ತಿ ಅವರವರು ಬೆಳೆದು ಬಂದ ಪರಿಸರದಿಂದ ಪ್ರಭಾವಿತವಾಗಿರುತ್ತದೆ. ಈ ಕಾಲದ ಮಕ್ಕಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿ ಆಲೋಚನಾ ಶಕ್ತಿ ಕುಂಠಿತವಾಗುತ್ತಿದೆ. ದೇಶದ ಇತಿಹಾಸ ಮತ್ತು ಭೌಗೋಳಿಕ ಜ್ಞಾನ ಅವರಲ್ಲಿ ಇಲ್ಲ. ಇದನ್ನು ಪಾಲಕರು, ಪೋಷಕರು ಮತ್ತು ಶಿಕ್ಷಕರು ಗಮನಿಸಬೇಕು. ಬುನಾದಿ ಗಟ್ಟಿ ಇದ್ದರೆ ಮಾತ್ರ ಕಟ್ಟಡ ಬಹುಕಾಲ ಬಾಳಿಕೆ ಬರುತ್ತದೆ. ಅದೇ ರೀತಿ ಮನೆಯಲ್ಲಿ ಶಿಕ್ಷಣ, ಸಂಸ್ಕಾರ ನೀಡಿದರೆ ಮಾತ್ರ ಮಕ್ಕಳ ಭವಿಷ್ಯ ಭದ್ರವಾಗುತ್ತದೆ. ಎಲ್ಲಿ ಸಂಸ್ಕಾರ ಇರುತ್ತೋ ಅಲ್ಲಿ ಸರಸ್ವತಿ ನೆಲೆಸಿರುತ್ತಾಳೆ. ಸಂಸ್ಕಾರ ಇಲ್ಲದ ಶಿಕ್ಷಣ ಅರ್ಥಹೀನ. ಈ ಸಂಸ್ಕಾರ ಕಲಿಸಲು ನಮ್ಮ ಭಾರತದ ಪ್ರಾಚೀನ ಶಿಕ್ಷಣ ಪದ್ಧತಿಯು ತಳಹದಿ ಎಂಬುದನ್ನು ನಾವೆಲ್ಲರೂ ಮರೆಯಬಾರದು ಎಂದು ಅವರು ಸ್ಪಷ್ಟಪಡಿಸಿದರು. ಉತ್ತಮ ಬದುಕಿನ ವಿಚಾರಗಳನ್ನು ನೇರವಾಗಿ ಖಾರವಾಗಿ ತಿಳಿಸಿಕೊಟ್ಟ ಚಾಣಕ್ಯ, 1848ರಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ಪ್ರಾರಂಭಿಸಿದ ಮತ್ತು ಭಾರತದ ಹೆಣ್ಣು ಮಕ್ಕಳ ಶಿಕ್ಷಣದ ಪ್ರವರ್ತಕರಾದ ಸಾವಿತ್ರಿಬಾಯಿಪುಲೆ, ಮೌಲ್ಯಾಧಾರಿತ ಶಿಕ್ಷಣದ ಮಹತ್ವಕ್ಕೆ ಒತ್ತು ನೀಡಿದ ಸ್ವಾಮಿ ವಿವೇಕಾನಂದರು, ದೇಶದ ಮೌಲ್ಯಗಳನ್ನು ಶಿಕ್ಷಣದ ಮೂಲಕ ಮಕ್ಕಳಿಗೆ ತಲುಪಿಸಲು ಬನಾರಸ್ ವಿಶ್ವವಿದ್ಯಾಲಯ ಪ್ರಾರಂಭಿಸಿದ ಮದನ ಮೋಹನ ಮಾಳವೀಯ, ರವೀಂದ್ರನಾಥ ಟ್ಯಾಗೋರ್ ಇವರೆಲ್ಲರೂ ಉನ್ನತ ಶಿಕ್ಷಣದ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿದವರು. ಇವರ ಹಾಕಿ ಕೊಟ್ಟ ಶಿಕ್ಷಣದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಅವರು ವಿವರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸುರೇಶ್ ಎಚ್. ಜಂಗಮಶೆಟ್ಟಿ ಅವರು ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಉನ್ನತ ಶಿಕ್ಷಣ ಸಿಗಬೇಕೆಂಬ ಬೃಹತ್ ಆಶಯದೊಂದಿಗೆ ಜಿಲ್ಲೆಗೊಂದು ವಿಶ್ವವಿದ್ಯಾಲಯ ಆರಂಭವಾಗಿದ್ದು, ಈ ಹಾದಿಯಲ್ಲಿ ಕೊಡಗು ವಿಶ್ವವಿದ್ಯಾಲಯ ಮೂರು ವರ್ಷದಲ್ಲಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದೆ. ಅಲ್ಲದೇ ಇಂದು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗು ವಿಶ್ವವಿದ್ಯಾಲಯ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಪ್ರಶಂಸಿಸಿದರು. ಡಿಜಿಟಲ್ ಯುಗದಲ್ಲಿ ವರ್ತಮಾನಕ್ಕೆ ತಕ್ಕಂತೆ ಶಿಕ್ಷಕರು ಪ್ರತಿಕ್ಷಣವೂ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಕೃತಕ ಬುದ್ಧಿಮತ್ತೆಯ ಕಾಲದಲ್ಲಿರುವ ಇಂದಿನ ವಿದ್ಯಾರ್ಥಿಗಳು ಎಷ್ಟೇ ಮಾಹಿತಿ ಹೊಂದಿದ್ದರೂ ಕೂಡ ಅವರಿಗೆ ಜ್ಞಾನದ ಕೊರತೆ ನೀಗಿಸಲು ಶಿಕ್ಷಕರು ಮತ್ತು ತರಗತಿಯ ಅವಶ್ಯಕತೆ ಇದೆ ಎಂಬುದನ್ನು ಶಿಕ್ಷಕರು ಮರೆಯಬಾರದು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಮಾತನಾಡಿ, ವಿಶ್ವವಿದ್ಯಾಲಯದ ಮೂರನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಮೂರು ವರ್ಷಗಳ ಅವಧಿಯಲ್ಲಿ ಕೊಡಗು ವಿಶ್ವವಿದ್ಯಾಲಯವು ನಡೆದು ಬಂದ ಹಾದಿಯನ್ನು ಸವಿವರವಾಗಿ ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ಉನ್ನತ ಶಿಕ್ಷಣವು ಜನರ ಮನೆಬಾಗಿಲಿಗೆ ತಲುಪಲು, ಉನ್ನತ ಶಿಕ್ಷಣದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮತ್ತು ಕೊಡಗಿನ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಮಹತ್ತರ ಆಶಯದೊಂದಿಗೆ ನಮ್ಮ ಕೊಡಗು ವಿಶ್ವವಿದ್ಯಾಲಯವು ಕಾರ್ಯನಿರತವಾಗಿದೆ ಎಂದರು. ಕೊಡಗು ಜಿಲ್ಲೆಯು ರಾಜ್ಯದ ಬೇರೆಯ ಜಿಲ್ಲೆಗಳಿಗಿಂತ ಭೌಗೋಳಿಕವಾಗಿ, ಸಾಂಸ್ಕೃತಿಕವಾಗಿ ವಿಭಿನ್ನವಾಗಿದ್ದು, ದೂರದ ವಿಶ್ವವಿದ್ಯಾಲಯಗಳಿಗೆ ತೆರಳಲು ಸಾಧ್ಯವಾಗದೆ ಉನ್ನತ ಶಿಕ್ಷಣ ಸಿಗದೆ ಅವಕಾಶ ವಂಚಿತರಾದ ಇಲ್ಲಿನ ಆದಿವಾಸಿ, ಹಿಂದುಳಿದ, ಗಿರಿಜನ, ಬುಡಕಟ್ಟು ಮತ್ತು ಎಲ್ಲ ವರ್ಗಗಳ ಮಕ್ಕಳಿಗೆ ಉನ್ನತ ಶಿಕ್ಷಣ ತಲುಪಿಸಲು ಈ ಜಿಲ್ಲೆಗೆ ವಿಶ್ವವಿದ್ಯಾಲಯದ ಅವಶ್ಯಕತೆ ತುರ್ತಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ವಿದ್ಯಾರ್ಥಿನಿ ಮನ ಕೆ ಆರ್ ಅವರ ‘ದಿ ಟೋನ್ ಆಫ್ ಸೈಲೆನ್ಸ್’ ಎಂಬ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಹಾಗೂ ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಘಟಕ, ಸರ್ಕಾರಿ, ವಿವಿಧ ಸಂಯೋಜಿತ ಮಹಾವಿದ್ಯಾಲಯಗಳ ಪ್ರಾಂಶುಪಾಲರಿಗೆ ಗೌರವ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಘಟಕ, ಸರ್ಕಾರಿ, ವಿವಿಧ ಸಂಯೋಜಿತ ಮಹಾವಿದ್ಯಾಲಯಗಳ ಪ್ರಾಂಶುಪಾಲರು, ಅಧ್ಯಾಪಕರು, ಸೂಕ್ಷ್ಮಾಣು ಜೀವವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ . ಗುಣಶ್ರೀ ಬಿ. ಎಸ್., ವಿವಿಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಎನ್ ಸಿಸಿ ಸಂಯೋಜಕರು ಮತ್ತು ಅಭ್ಯರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು ಮೌಲ್ಯಮಾಪನ ಡಾ. ಸುರೇಶ್ ಎಂ. ಸ್ವಾಗತಿಸಿದರು. ಕಾರ್ಯಕ್ರಮ ಅಧಿಕಾರಿ ಮತ್ತು ಕನ್ನಡ ವಿಭಾಗದ ಉಪನ್ಯಾಸಕ ಡಾ. ಜಮೀರ್ ಅಹಮದ್ ನಿರೂಪಿಸಿದರು. ಕೊಡಗು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ವಿಶೇಷ ಅಧಿಕಾರಿ ಪ್ರೊ. ರವಿಶಂಕರ್ ಎಂ. ಎನ್. ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಮಧ್ಯ ಪ್ರಾಚ್ಯ ಯುದ್ಧದ ಕಾರಣದಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ನ ಸರಬರಾಜಿನಲ್ಲಿ…

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026

*ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಿತಿಗಳ ರಚನೆ ಮತ್ತು ನಿರ್ವಹಣೆ ತರಬೇತಿ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.