ಮಡಿಕೇರಿ, NEWS DESK ಮಾ.31:-ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2026 ರ ಮೇ, 02 ರಿಂದ 2027 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್, 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಮಡಿಕೇರಿ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿಯನ್ನು ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಎಸ್ಎಲ್ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿ, ಜಾತಿ ಪ್ರಮಾಣ ಪತ್ರ, ಪೋಟೋ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸಬೇಕು ಎಂದು ಮಡಿಕೇರಿ ರಾಜ್ಯವಲಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
- *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
- *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
- *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
- *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
- *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
- *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
- *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
- *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
- *ಸಾರ್ವಜನಿಕರ ಗಮನಕ್ಕೆ*







