Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*
  • *ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*
  • *ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*
  • *ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದಿಂದ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿ ಆಚರಣೆ*
  • *ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ : ಯಶಸ್ಸಿಗೆ ಕೈ ಜೋಡಿಸಲು ಮನವಿ*
  • *ದಾವಣಗೆರೆ ಉಪ ಚುನಾವಣೆ : ಚುನಾವಣಾ ಪ್ರಚಾರ ಕಚೇರಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ*
  • *ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧಕ ಅರೆಯಡ ಗಿರೀಶ್*
  • *ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ*
  • *ಏ.6 ಮತ್ತು 7 ರಂದು ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಆಟಗಾರರ ಆಯ್ಕೆ ಪ್ರಕ್ರಿಯೆ*
  • *ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*

ಏಪ್ರಿಲ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಏ.1 : ಓಂಕಾರೇಶ್ವರ ವ್ಯವಸ್ಥಾಪನಾ ಸಮಿತಿಯ ಉಸ್ತುವಾರಿಯಲ್ಲಿರುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಶ್ರೀ ಕೋಟೆ ಮಹಾಗಣಪತಿ ದೇವಾಲಯಗಳ ಅಭಿವೃದ್ಧಿಗೆ ಹಾಗೂ ಇತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಒಟ್ಟು ರೂ 1 ಕೋಟಿ ಅನುದಾನವನ್ನು ಸರಕಾರದಿಂದ ಒದಗಿಸುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದ್ದಾರೆ.
ಮಡಿಕೇರಿಯಲ್ಲಿ ಭೇಟಿ ಮಾಡಿದ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಗೂ ಸದಸ್ಯರುಗಳಾದ ಅಂಬೆಕಲ್ ಕುಶಾಲಪ್ಪ, ಪ್ರಕಾಶ್ ಆಚಾರ್ಯ ಮತ್ತು ಜಿ.ರಾಜೇಂದ್ರ ಇವರುಗಳು ಮಾಡಿದ ಮನವಿಗೆ ಸ್ಪಂದಿಸಿ ಶಾಸಕರು ಈ ಭರವಸೆ ನೀಡಿದರು.
ಸರಕಾರದಿಂದ ತನಗೆ ಶಾಸಕರ ಅನುದಾನ ದೊರಕುವ ಮೂಲದಿಂದ ರೂ. 50 ಲಕ್ಷ ಹಾಗೂ ಮುಜರಾಯಿ ಇಲಾಖೆಯಿಂದ ಸಚಿವ ರಾಮಲಿಂಗಾ ರೆಡ್ಡಿ ಅವರ ಮೂಲಕ ರೂ. 50 ಲಕ್ಷ, ಹೀಗೆ ಒಟ್ಟು ರೂ. 1 ಕೋಟಿ ಒದಗಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
ಈಗಾಗಲೇ ಸಮಿತಿಯಿಂದ ಸುಮಾರು ರೂ. 36 ಲಕ್ಷದ ಅಭಿವೃದ್ಧಿ ಯೋಜನೆಯನ್ನು ಆಂಜನೇಯ ದೇವಾಲಯ ಆವರಣದಲ್ಲಿ ಕೈಗೊಂಡು ಅದು ಮುಕ್ತಾಯ ಹಂತದಲ್ಲಿದೆ. ದೇವಾಲಯ ಸುತ್ತಲೂ ನೆಲಹಾಸು ಹಾಗೂ ಛಾವಣಿಯನ್ನು ನಿರ್ಮಿಸಲಾಗಿದೆ. ಆಂಜನೇಯ ದೇವಾಲಯದ ಹೊರ ಆವರಣವನ್ನು ವಿಸ್ತರಿಸಲಾಗಿದೆ. ಅಲ್ಲದೆ ದೇವಾಲಯ ಆವರಣದಲ್ಲಿ ನೂತನವಾಗಿ ನವಗ್ರಹಗಳನ್ನು ಪ್ರತಿಷ್ಠಾಪಿಸಲು ಕಾರ್ಯೋನ್ಮುಖವಾಗಿರುವುದಾಗಿ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ತಿಳಿಸಿದ್ದಾರೆ.
ಈಗಾಗಲೇ ನವಗ್ರಹ ಮೂರ್ತಿಗಳನ್ನು ಶಿಲ್ಪಿಗಳಿಂದ ನಿರ್ಮಿಸಿ ತರಿಸಲಾಗಿದ್ದು. ಏಪ್ರಿಲ್, 25 ರಂದು ಕ್ಷೇತ್ರ ತಂತ್ರಿಯವರಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರ‍್ರಿಯವರು ಆಂಜನೇಯ ದೇಗುಲದ ಆವರಣದಲ್ಲಿ ಪ್ರತಿಷ್ಠಾಪನಾ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಿದ್ದಾರೆ ಎಂದರು.
ಈ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ಒಟ್ಟು ರೂ. 5 ಕೋಟಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು ಈ ಪೈಕಿ ಸರಕಾರದ ಮೂಲಕ ರೂ. 1 ಕೋಟಿಯನ್ನು ಶಾಸಕರು ಒದಗಿಸುವ ಭರವಸೆ ನೀಡಿದ್ದಾರೆ.
ಇನ್ನುಳಿದಂತೆ ಕೈಗೊಳ್ಳಬೇಕಾದ ಬೃಹತ್ ಯೋಜನೆಗಳಿಗಾಗಿ ಕೊಡಗಿನ ಉದಾರ ದಾನಿಗಳಿಂದಲೂ ಹಣ ಸಂಗ್ರಹಿಸಲು ಸಹಕಾರ ಕೋರಲಾಗಿದೆ.
ಈ ಯೋಜನೆಗಳೆಂದರೆ, ದೇವಾಲಯಗಳ ಮುಂಭಾಗ ಮಹಾದ್ವಾರ ನಿರ್ಮಾಣ, ಓಂಕಾರೇಶ್ವರ ದೇವಾಲಯ ಒಳ ಆವರಣದಲ್ಲಿರುವ ಪೌಳಿಗಳ ದುರಸ್ತಿ, ಹೊರ ಆವರಣದಲ್ಲಿರುವ ಕಲ್ಯಾಣಿ ಕೆರೆ ದುರಸ್ತಿ ಮತ್ತು ನೂತನ ಗ್ರಿಲ್ ಅಳವಡಿಕೆ, ದೇವಾಲಯ ಹೊರ ಆವರಣದ ಸುತ್ತಲೂ ಕಲ್ಲಿನ ಹಾಸು ಅಳವಡಿಕೆ, ಓಂಕಾರ ಸದನದ ದ್ವ್ವಿತೀಯ ಅಂತಸ್ತು ನಿರ್ಮಾಣ, ಸಿಬ್ಬಂದಿಗಳಿಗೆ ವಾಸಿಸಲು ಅತ್ಯಗತ್ಯವಾದ ವಸತಿ ಗೃಹ ನಿರ್ಮಾಣ ಮೊದಲಾದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.


ಅಲ್ಲದೆ, ಮಡಿಕೇರಿಯ ಐತಿಹಾಸಿಕ ಕೋಟೆ ಗಣಪತಿ ದೇವಾಲಯಕ್ಕೆ ನೂತನ ಮೇಲ್ಛಾವಣಿ ನಿರ್ಮಿಸಲು ಹಾಗೂ ನೆಲ ಭಾಗಕ್ಕೆ ಇಂಟರ್ ಲಾಕ್ ಅಳವಡಿಸಲು ಯೋಜಿಸಿದ್ದು, ಈ ದೇವಾಲಯದ ಪರಿಧಿಯು ವಾಸ್ತು ಪುರಾತತ್ವ ಇಲಾಖೆಗೆ ಒಳಪಡುವುದರಿಂದ ಕಾರ್ಯ ನಿರ್ವಹಿಸಲು ಇಲಾಖೆಯಿಂದ ಅನುಮತಿ ಕೋರಲಾಗಿದೆ ಎಂದು ಅಧ್ಯಕ್ಷ ಚುಮ್ಮಿ ದೇವಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*

ಏಪ್ರಿಲ್ 1, 2026

*ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*

ಏಪ್ರಿಲ್ 1, 2026

*ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*

ಏಪ್ರಿಲ್ 1, 2026

*ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*

ಏಪ್ರಿಲ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.1 NEWS DESK : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

*ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*

ಏಪ್ರಿಲ್ 1, 2026

*ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದಿಂದ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿ ಆಚರಣೆ*

ಏಪ್ರಿಲ್ 1, 2026

*ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ : ಯಶಸ್ಸಿಗೆ ಕೈ ಜೋಡಿಸಲು ಮನವಿ*

ಏಪ್ರಿಲ್ 1, 2026

*ದಾವಣಗೆರೆ ಉಪ ಚುನಾವಣೆ : ಚುನಾವಣಾ ಪ್ರಚಾರ ಕಚೇರಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ*

ಏಪ್ರಿಲ್ 1, 2026

*ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧಕ ಅರೆಯಡ ಗಿರೀಶ್*

ಏಪ್ರಿಲ್ 1, 2026

*ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ*

ಏಪ್ರಿಲ್ 1, 2026

*ಏ.6 ಮತ್ತು 7 ರಂದು ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಆಟಗಾರರ ಆಯ್ಕೆ ಪ್ರಕ್ರಿಯೆ*

ಏಪ್ರಿಲ್ 1, 2026

*ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*

ಏಪ್ರಿಲ್ 1, 2026

*ವಿಶ್ವ ಗ್ರಾಹಕರ ದಿನಾಚರಣೆ : ಗ್ರಾಹಕರು ಯಾವುದೇ ವಸ್ತು-ಪದಾರ್ಥ ಕೊಳ್ಳುವಾಗ ಎಚ್ಚರ ವಹಿಸಿ : ನಿತಿನ್ ಚಕ್ಕಿ*

ಏಪ್ರಿಲ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.