Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು..*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು*
  • *ಗೋಪಾಲಪುರ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೆ*
  • *ಕುಶಾಲನಗರದಲ್ಲಿ ಜನ ಗಣತಿದಾರರಿಗೆ ತರಬೇತಿ :  ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ* 
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.5ರ ಪಂದ್ಯಗಳು*
  • *ಏ.05 ರಂದು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*
  • *ಏ.08 ರಂದು ಮಿನಿ ಉದ್ಯೋಗ ಮೇಳ*
  • *ಏ.05 ರಂದು ವಿದ್ಯುತ್ ವ್ಯತ್ಯಯ*
  • *ಪ್ರತಿಷ್ಟಿತ ಶಾಲೆಗೆ ದಾಖಲು; ಅರ್ಜಿ ಆಹ್ವಾನ*
  • *ಸ್ಕ್ಯಾನಿಂಗ್ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಲು ಸಮಿತಿ ಸಭೆ ತೀರ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಜನ ಗಣತಿದಾರರಿಗೆ ತರಬೇತಿ :  ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಜನ ಗಣತಿದಾರರಿಗೆ ತರಬೇತಿ :  ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ* 

ಏಪ್ರಿಲ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಏ.4 NEWS DESK : ಜನಗಣತಿ ಕಾರ್ಯವು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಕಾನೂನು‌ ಬದ್ಧ ಕೆಲಸವಾಗಿದೆ. ಶಿಕ್ಷಕರು ಉತ್ತಮ ಕರ್ತವ್ಯದೊಂದಿಗೆ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿಸಿ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ಶನಿವಾರ ಮನವಿ ಮಾಡಿದರು. ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ವತಿಯಿಂದ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮೇಲ್ವಿಚಾರಕರು ಹಾಗೂ ಗಣತಿದಾರರಿಗೆ ಮೂರು ದಿನಗಳ ಕಾಲ ಮನೆಪಟ್ಟಿ ಹಾಗೂ ಜನಗಣತಿ ಕಾರ್ಯದ ಕುರಿತು
ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನಗಣತಿ ಕಾರ್ಯವನ್ನು ಶಿಕ್ಷಕರು ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 164 ಬ್ಲಾಕ್ ಗಳನ್ನು ಗುರುತಿಸಿದ್ದು,
30 ಮಂದಿ ಮೇಲ್ವಿಚಾರಕರು ಹಾಗೂ 174 ಗಣತಿದಾರರು ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನೇಮಕಗೊಂಡಿರುವ ಗಣತಿದಾರರು ಮೊದಲ ಹಂತದ ಮನೆ ಪಟ್ಟಿ ಕಾರ್ಯದಲ್ಲಿ ನಿಗದಿ ಪಡಿಸುವ ಪ್ರದೇಶಗಳ ನಕ್ಷೆಯನ್ನು ಸಮರ್ಪಕವಾಗಿ ತಯಾರಿಸಿಕೊಂಡರೆ ಜನಗಣತಿ ಕಾರ್ಯ ಸುಲಭವಾಗುತ್ತದೆ ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ಹೇಳಿದರು. ರಾಷ್ಟ್ರೀಯ ಜನಗಣತಿಯ ಮೊದಲ ಭಾಗವಾಗಿ ಮನೆ ಮನೆಗಳ ಪಟ್ಟಿ ಸರ್ವೇ ಕಾರ್ಯ ಏಪ್ರಿಲ್‌ 16ರಿಂದ ಪ್ರಾರಂಭಗೊಂಡು ಮೇ 15 ಕ್ಕೆ ಮುಕ್ತಾಯಗೊಳ್ಳಲಿದೆ. ‌ಪ್ರತಿಯೊಬ್ಬ ಗಣತಿದಾರರು ನಿಗದಿಪಡಿಸುವ ಪ್ರದೇಶಗಳ ಮನೆಗಳನ್ನು ಗುರುತಿಸುವ ನಕ್ಷೆ ಕಾರ್ಯವನ್ನು ಕಡ್ಡಾಯವಾಗಿ ಪೂರ್ಣಗೊಳಿಸುವ ಮೂಲಕ ಮಹತ್ವದ ಯೋಜನೆಯ ಯಶಸ್ಸಿ‌ಗೆ ಶ್ರಮಿಸಿ’ ಎಂದು ಸಲಹೆ ನೀಡಿದರು. ಇಂದಿನ ಡಿಜಿಟಲ್ ಯುಗದಲ್ಲಿ ಜನಗಣತಿ ಕಾರ್ಯವನ್ನು ಸುಲಭಗೊಳಿಸಲು ಆನ್‌ಲೈನ್ ಅಪ್ಲಿಕೇಶನ್ ವ್ಯವಸ್ಥೆ ಮಾಡಲಾಗಿದೆ. 1872 ರಲ್ಲಿ ಆರಂಭವಾದ ಜನಗಣತಿ ಈಗ ಅದು 16 ನೇ ಜನಗಣತಿಯಾಗಿದ್ದು, ಸ್ವಾತಂತ್ರ್ಯ ನಂತರದ 8 ನೇ ರಾಷ್ಟ್ರೀಯ ಜನಗಣತಿ ಯಾಗಿ ಬಹಳ ಪ್ರಾಮುಖ್ಯತೆ ಪಡೆದಿದೆ‌. ದೇಶದ ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿಖರವಾದ ಅಂಕಿ- ಅಂಶಗಳ ಆಧಾರದ ಮೇಲೆ ಸರ್ಕಾರ ಯೋಜನೆಗಳನ್ನು ರೂಪಿಸಲು ಮೂಲ ಆಧಾರವಾಗಲಿದೆ ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ಹೇಳಿದರು. ಗಣತಿದಾರರು ಮನೆ ಮನೆಗೆ ಭೇಟಿ ನೀಡುವ ಸಮಯದಲ್ಲಿ ಕೇಳುವ 33 ಪ್ರಶ್ನೆಗಳಿಗೆ ಸರಿಯಾದ ಉತ್ತರ ಪಡೆಯಬೇಕು. ಉತ್ತರ ನೀಡಲು ಕೆಲವು ಮಂದಿ ನಿರಾಕರಿಸಿದರೆ ಅವರೊಂದಿಗೆ ಸಂಯಮದಿಂದ ಮಾತನಾಡಿ ಗಣತಿಯ ಮಹತ್ವವನ್ನು ಅವರಿಗೆ ಅರ್ಥ ಮಾಡಿಸಿ ಮಾಹಿತಿ ಪಡೆಯುವಂತೆ ತಹಶೀಲ್ದಾರ್ ಕಿರಣ್ ಗೌರಯ್ಯ ಸಲಹೆ ನೀಡಿದರು. ಗಣತಿ ಕಾರ್ಯದಲ್ಲಿ ಗಣತಿದಾರರಿಗೆ ಏನೇ ಸಮಸ್ಯೆ ಎದುರಾದರೆ ತಕ್ಷಣವೇ ಮೇಲ್ವಿಚಾರಕರು ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿದರೆ ಸಮಸ್ಯೆಗಳಿಗೆ ತಕ್ಷಣದಲ್ಲಿ ಸೂಕ್ತ ಪರಿಹಾರ ನೀಡಲಾಗುತ್ತದೆ’ ಎಂದು ತಿಳಿಸಿದರು. ತರಬೇತಿ ಕಾರ್ಯಾಗಾರದಲ್ಲಿ ಉಪ ತಹಶೀಲ್ದಾರ್ ಎಂ.ಪಿ.ಪ್ರೀತು , ಕಂದಾಯ ನಿರೀಕ್ಷಕ ಎಚ್.ಎಸ್.ಸಂತೋಷ್, ಕಂದಾಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು/ಸಿಬ್ಬಂದಿ ಇದ್ದರು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಎಸ್.ಪಿ.ಪರಮೇಶ್, ಎಸ್.ಎನ್. ಲೋಕೇಶ್, ಕೆ.ಶಾಂತಕುಮಾರ್, ಪಿ.ಎಸ್.ರವಿಕೃಷ್ಣ , ಮನೆ ಸಮೀಕ್ಷೆ ಹಾಗೂ ಜನಗಣತಿ ಸಮೀಕ್ಷಾ ಕಾರ್ಯ ನಡೆಸುವ ಕುರಿತು ಪಿ.ಪಿ.ಟಿ.ಮೂಲಕ ಪೂರಕ ಮಾಹಿತಿ ನೀಡಿದರು. ತರಬೇತಿ ಕಾರ್ಯಕ್ರಮದಲ್ಲಿ ಜನಗಣತಿ ಕಾರ್ಯದ ವಿಧಾನಗಳು, ಅಪ್ಲಿಕೇಶನ್ ಬಳಕೆ, ಮಾಹಿತಿ ಸಂಗ್ರಹಣೆಯ ನಿಯಮಗಳು ಹಾಗೂ ಜನರೊಂದಿಗೆ ಸಂವಹನ ಮಾಡುವ ವಿಧಾನಗಳ ಕುರಿತು ವಿವರವಾಗಿ ತಿಳಿಸಲಾಯಿತು. ತರಬೇತಿಯಲ್ಲಿ ಜನಗಣತಿಗೆ ಪೂರಕವಾಗಿ ಮೊದಲ ಹಂತದ ಮನೆಪಟ್ಟಿ ಕಾರ್ಯಾಚರಣೆ ಮಾಡುವ ಬಗ್ಗೆ ವಿವರ ಮಾಹಿತಿ ನೀಡಲಾಯಿತು.ಹಾಗಾಗಿ ಮೂರು ದಿನಗಳ ಕಾಲ ತರಬೇತಿ ಪಡೆದು ಜನಗಣತಿ ಕಾರ್ಯವನ್ನು ಯಶಸ್ವಿಯಾಗಿಸಿ ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು..*

ಏಪ್ರಿಲ್ 4, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು*

ಏಪ್ರಿಲ್ 4, 2026

*ಗೋಪಾಲಪುರ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೆ*

ಏಪ್ರಿಲ್ 4, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4 ರ ವಿಜೇತ ತಂಡಗಳು*

ಏಪ್ರಿಲ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.4 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ಆಯೋಜಿಸಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್…

*ಗೋಪಾಲಪುರ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೆ*

ಏಪ್ರಿಲ್ 4, 2026

*ಕುಶಾಲನಗರದಲ್ಲಿ ಜನ ಗಣತಿದಾರರಿಗೆ ತರಬೇತಿ :  ಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ತಹಶೀಲ್ದಾರ್ ಕಿರಣ್ ಗೌರಯ್ಯ ಮನವಿ* 

ಏಪ್ರಿಲ್ 4, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.5ರ ಪಂದ್ಯಗಳು*

ಏಪ್ರಿಲ್ 4, 2026

*ಏ.05 ರಂದು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*

ಏಪ್ರಿಲ್ 4, 2026

*ಏ.08 ರಂದು ಮಿನಿ ಉದ್ಯೋಗ ಮೇಳ*

ಏಪ್ರಿಲ್ 4, 2026

*ಏ.05 ರಂದು ವಿದ್ಯುತ್ ವ್ಯತ್ಯಯ*

ಏಪ್ರಿಲ್ 4, 2026

*ಪ್ರತಿಷ್ಟಿತ ಶಾಲೆಗೆ ದಾಖಲು; ಅರ್ಜಿ ಆಹ್ವಾನ*

ಏಪ್ರಿಲ್ 4, 2026

*ಸ್ಕ್ಯಾನಿಂಗ್ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಲು ಸಮಿತಿ ಸಭೆ ತೀರ್ಮಾನ*

ಏಪ್ರಿಲ್ 4, 2026

*ಕಾರು ಅವಘಡ : ವ್ಯಕ್ತಿ ಸಾವು*

ಏಪ್ರಿಲ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.