Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಬಾಲಕಿಯರ ನಿಲಯದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*
  • *ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*
  • *ಮೇ 7 ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ*
  • *ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*
  • *ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*
  • ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂನ್ 23 ರಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ… ಅರಮೇರಿ ಶ್ರೀ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ…*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂನ್ 23 ರಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ… ಅರಮೇರಿ ಶ್ರೀ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ…*

ಏಪ್ರಿಲ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಕುಶಾಲನಗರ, NEWS DESK ಏ.06 : ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮುಂಬರುವ ಜೂನ್ 23 ರಂದು ಮಂಗಳವಾರ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಜಿಲ್ಲಾ ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು ಕುಶಾಲನಗರದ ಸರ್ವರೂ ಸಮ್ಮೇಳನದ ಭಾಗವಾಗಬೇಕೆಂದು ಪರಿಷತ್ತಿನ ಗೌರವ ಅಧ್ಯಕ್ಷರೂ ಆದ ವಿರಾಜಪೇಟೆ ತಾಲ್ಲೂಕು ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕರೆಕೊಟ್ಟರು.
ಕುಶಾಲನಗರದ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,
ಶರಣ ಸಾಹಿತ್ಯ ಸಮ್ಮೇಳನ ಕೇವಲ ಸಮುದಾಯವೊಂದಕ್ಕೆ ಸೀಮಿತವಾದುದಲ್ಲ.
ಇದು ಜನಪರವಾದ ಜೀವಪರವಾದ ಅಭಿವ್ಯಕ್ತಿ.
ಸಮ ಸಮಾಜ ನಿರ್ಮಾಣದ ಪರಿಕಲ್ಪನೆ.
ಹನ್ನೆರಡನೆ ಶತಮಾನದಲ್ಲಿ ಸಮಾಜದಲ್ಲಿದ್ದ ಅಂಕು ಡೊಂಕುಗಳು – ಮೇಲು ಕೀಳು ಬೇಧಗಳನ್ನು ಬುಡಸಹಿತ ಕಿತ್ತೊಗೆಯಲು ರಚನೆಯಾದ ವಚನಗಳು ಹಾಗೂ ಶರಣ ಸಾಹಿತ್ಯವನ್ನು ಹಳ್ಳಿ – ಪೇಟೆ, ನಗರಗಳ ಪ್ರತಿ ಮನೆ ಮನೆಗಳಿಗೆ ಜನಸಾಮಾನ್ಯರ ಮನ ಮನಕ್ಕೆ ತಲುಪಿಸುವ ಉದ್ದೇಶವೇ ಶರಣ ಸಾಹಿತ್ಯ ಸಮ್ಮೇಳನದ ಮೂಲ ಧ್ಯೆಯ ಎಂದು ಶ್ರೀ ಗಳು ಹೇಳಿದರು.
ಸಮ್ಮೇಳನದ ಯಶಸ್ವಿಗೆ ವಿವಿಧ ಸಮಿತಿಗಳನ್ನು ಮಾಡಿಕೊಂಡು ಶಿಸ್ತು ಬದ್ಧವಾಗಿ, ಸಮಯ ಪಾಲನೆಯೊಂದಿಗೆ ಶರಣ ಸಾಹಿತ್ಯ ಸಮ್ಮೇಳನ ರೂಪುಗೊಳ್ಳಬೇಕೆಂದು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕರೆಕೊಟ್ಟರು.
ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮತನಾಡಿ, ಇದೇ ಮೊದಲ ಬಾರಿಗೆ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಆಯೋಜನೆಯಾಗುತ್ತಿದ್ದು
ಎಲ್ಲರೂ ಸೇರಿ ಸಮ್ಮೇಳನ ಯಶಸ್ವಿಗೊಳಿಸಬೇಕು.
ಸಮಯಪಾಲನೆಗೆ ಒತ್ತು ಕೊಡಬೇಕು.
ಕೊಡಗು ಜಿಲ್ಲೆಗೆ ಆಗಮಿಸುವ ಸುತ್ತೂರು ಶ್ರೀಗಳನ್ನು ಅಷ್ಟೇ ಭಕ್ತಿ ಹಾಗೂ ಗೌರವಗಳಿಂದ ಆದರಿಸಿ ಬೀಳ್ಕೊಡಬೇಕಿದೆ ಎಂದರು.
ತೊರೆನೂರು ವಿರಕ್ತ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಶರಣ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಜಾತಿ ವರ್ಗಗಳ ಜನರು ಸೇರುವ ಮೂಲಕ ಶರಣ ವಿಚಾರಗಳನ್ನು ಅರಿಯಲು ಉತ್ತಮ ವೇದಿಕೆ ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಎಸ್. ಶಿವಾನಂದ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎ.ಎಸ್.ಮಹೇಶ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಸರೋಜಾ ಆರಾಧ್ಯ, ಕುಶಾಲನಗರ ತಾಲ್ಲೂಕು ಅಧ್ಯಕ್ಷೆ ಹೇಮಲತಾ,
ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಹಕ್ಕೆ ಮೋಹನ್, ಉಪಾಧ್ಯಕ್ಷ ಕೆ.ಜಿ.ರಾಜಶೇಖರ, ಕೊಡ್ಲಿಪೇಟೆ ಗಂಗಾ ವೀರಶೈವ ಮಹಿಳಾ ಸಮಾಜದ ಅಧ್ಯಕ್ಷೆ ಮಂಜುಳಾ ಸುರೇಶ, ಕುಶಾಲನಗರ ಚೌಡೇಶ್ವರಿ ದೇವಾಲಯ ಸಮಿತಿ ಅಧ್ಯಕ್ಷ ಡಿ.ವಿ.ರಾಜೇಶ್,
ಪ್ರಮುಖರಾದ ಸದಾಶಿವಯ್ಯ ಪಲ್ಲೇದ, ಟಿ.ಜಿ.ಪ್ರೇಮಕುಮಾರ್, ಎಸ್.ನಂದೀಶ್, ಎಂ.ಕೆ.ಧನರಾಜು, ಎಂ.ಬಿ.ಸುರೇಶ್, ಶಿವಲಿಂಗ, ಜಿ.ಬಿ.ಲೋಕೇಶ್,
ವಿಜಯಪಾಲಾಕ್ಷ, ಪರಮೇಶ್ ಮೊದಲಾದವರಿದ್ದರು.
ಸಮಿತಿಗಳ ರಚನೆ :
ಹಣಕಾಸು ಸಮಿತಿಯ ಅಧ್ಯಕ್ಷರಾಗಿ ಶಾಂಬಶಿವಯ್ಯ,
ಸಂಚಾಲಕರಾಗಿ ಧನರಾಜು,
ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ರಾಗಿ ಎಸ್.ನಂದೀಶ್, ಸಂಚಾಲಕರಾಗಿ ಶಿವಲಿಂಗ,
ಆಹಾರ ಸಮಿತಿ ಅಧ್ಯಕ್ಷ ರಾಗಿ ಎಂ.ಎಸ್.ಗಣೇಶ್, ಸಂಚಾಲಕರಾಗಿ ಉದಯಕುಮಾರ್, ಧ್ವಜಾರೋಹಣ ಸಮಿತಿ ಅಧ್ಯಕ್ಷರಾಗಿ ಸದಾಶಿವಯ್ಯ ಪಲ್ಲೇದ್,
ವೇದಿಕೆ ಸಮಿತಿ ಅಧ್ಯಕ್ಷರಾಗಿ ಎಸ್.ಬಿ. ಹೇಮಲತಾ, ಸಂಚಾಲಕರಾಗಿ ಡಾ.ಹೇಮಲತಾ,
ಮೆರವಣಿಗೆ ಸಮಿತಿ ಅಧ್ಯಕ್ಷರಾಗಿ ಹೆಚ್.ಎಂ.ಮಧುಸೂದನ್, ಸಂಚಾಲಕರಾಗಿ ಧರ್ಮೇಂದ್ರ,
ಅತಿಥಿ ಸತ್ಕಾರ ಸಮಿತಿ ಅಧ್ಯಕ್ಷರಾಗಿ ಜಿ.ಬಿ.ಲೋಕೇಶ್, ಸಂಚಾಲಕರಾಗಿ ಎಂ.ಬಿ.ಸುರೇಶ್,
ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹುಲುಸೆ ಶಿವನಂಜಪ್ಪ,
ಸಂಚಾಲಕ ರಾಗಿ ಮರೂರು ಮಹದೇವ್ ಅವರನ್ನು ನೇಮಕ ಮಾಡಲಾಯಿತು.
ಹಾಗೆಯೇ ಅಷ್ಟೂ ಸಮಿತಿಯವರು ಪ್ರತ್ಯೇಕ ಸಮಿತಿ ಮಾಡಿಕೊಂಡು ತಂಡವಾಗಿ ಕಾರ್ಯನಿರ್ವಹಿಸುವ ಮೂಲಕ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು ಎಂದು ಸಭಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನಿರ್ದೇಶನ ನೀಡಿದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ ಬಾಲಕಿಯರ ನಿಲಯದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ*

ಏಪ್ರಿಲ್ 6, 2026

*ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*

ಏಪ್ರಿಲ್ 6, 2026

*ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*

ಏಪ್ರಿಲ್ 6, 2026

*ಸುಂಟಿಕೊಪ್ಪದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ : ಮಾದಕವಸ್ತು ಸೇವನೆ ತಡೆಗಟ್ಟಲು ಶಾಸಕ ಡಾ.ಮಂತರ್ ಗೌಡ ಕರೆ*

ಏಪ್ರಿಲ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಏ.6 NEWS DESK : ಮಾದಕ ವಸ್ತುಗಳ ಸೇವನೆಯನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರು ಪಣತೊಡಬೇಕು ಎಂದು ಮಡಿಕೇರಿ ಕ್ಷೇತ್ರದ…

*ಕೊಡಗರಹಳ್ಳಿ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಉತ್ಸವ*

ಏಪ್ರಿಲ್ 6, 2026

*ಮೇ 7 ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ*

ಏಪ್ರಿಲ್ 6, 2026

*ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*

ಏಪ್ರಿಲ್ 6, 2026

*ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಏಪ್ರಿಲ್ 6, 2026

*ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 6, 2026

*ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*

ಏಪ್ರಿಲ್ 6, 2026

ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.7 ರ ಪಂದ್ಯಗಳು*

ಏಪ್ರಿಲ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.