Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತೆರಿಗೆ ಸಂಗ್ರಹ ಕ್ಯಾಂಪ್ ಗೆ ಆಗ್ರಹ* 
  • *ಕೂಡಿಗೆ : ನಂದಿತಾಗೆ ಸನ್ಮಾನ*
  • *ಬೆಟ್ಟದಪುರದ ಅನಿಕೇತನ ಕಾಲೇಜಿಗೆ ಶೇ.92 ಫಲಿತಾಂಶ*
  • *ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿಗೆ ಶೇ.100 ಫಲಿತಾಂಶ*
  • *ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*
  • *ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*
  • *ಅಂತರ್ಜಲ ಪ್ರಾಧಿಕಾರದ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಲೋಕಸಭಾ ಕ್ಷೇತ್ರ ಹೆಚ್ಚಳ ಮಾಡದೇ ಮಹಿಳಾ ಮೀಸಲಾತಿ ನೀಡಬೇಕು : ಕೊಡಗಿನ ವಿಧಾನಸಭಾ ಕ್ಷೇತ್ರಗಳು 5ಕ್ಕೆ ಏರಿಕೆಯಾಗಬೇಕು*
  • *ಏ.16 ಮತ್ತು 17 ರಂದು ಕಾಂತೂರು ಶ್ರೀಪನ್ನಂಗಾಲ ತಾಯಿಯ ವಾರ್ಷಿಕೋತ್ಸವ*
  • *ಕುಶಾಲನಗರದ *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೈನಿಕ ಶಾಲೆ ಕೊಡಗು: 2026-27ನೇ ಸಾಲಿನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೈನಿಕ ಶಾಲೆ ಕೊಡಗು: 2026-27ನೇ ಸಾಲಿನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ*

ಏಪ್ರಿಲ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, NEWS DESK ಏಪ್ರಿಲ್ 06: ಸೈನಿಕ ಶಾಲೆ ಕೊಡಗಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭವನ್ನು ಶಾಲೆಯ ಕುವೆಂಪು ವಿವಿದೊದ್ದೇಶ ಸಭಾಂಗಣದಲ್ಲಿ ಅತ್ಯಂತ ಹೆಮ್ಮೆ ಮತ್ತು ಗಾಂಭೀರ್ಯದಿಂದ ಆಯೋಜಿಸಲಾಗಿತ್ತು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿವಿಧ ಜವಾಬ್ದಾರಿಗಳನ್ನು ಶಾಲೆಯ ಅಧಿಕಾರಿಗಳು ಹಸ್ತಾಂತರಿಸುವ ಮೂಲಕ ಶಾಲೆಯ ನಾಯಕತ್ವದ ಪರಂಪರೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದರು.
ಸಮಾರಂಭವು ಜ್ಞಾನ, ಸಮಗ್ರತೆ ಮತ್ತು ಸೇವೆಯ ಮನೋಭಾವದ ಸಂಕೇತವಾಗಿ ಸಾಂಪ್ರದಾಯಿಕ ದೀಪ ಬೆಳಗುವುದರೊಂದಿಗೆ ಪ್ರಾರಂಭವಾಯಿತು. ಶಾಲೆಯ ಪ್ರಾಚಾರ್ಯರಾದ ಕರ್ನಲ್ ಅಮರ್ ಜೀತ್ ಸಿಂಗ್, ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ. ಪ್ರಕಾಶ್ ರಾವ್, ಉಪ ಪ್ರಾಚಾರ್ಯರಾದ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ ಮತ್ತು ಹಿರಿಯ ಶಿಕ್ಷಕರಾದ ಶ್ರೀ ಎನ್. ವಿಬಿನ್ ಕುಮಾರ್ ಅವರು ಶಾಲೆಯ ಹಿರಿಯ ವಿದ್ಯಾರ್ಥಿಗಳ ನಾಯಕರಿಗೆ ಭುಜದ ಮೇಲಿನ ಬ್ಯಾಡ್ಜಗಳನ್ನ ಅನಾವರಣಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಜವಾಬ್ದಾರಿಗಳನ್ನು ಹಸ್ತಾಂತರಿಸಿದರು.
ಇದರೊಂದಿಗೆ ವಿವಿಧ ನಿಲಯಗಳ ನಾಯಕರ ನೇಮಕಾತಿಗಳನ್ನು ಸಹ ಮಾಡಲಾಯಿತು. ವಿವಿಧ ನಿಲಯಗಳ ನಿಲಯ ಶಿಕ್ಷಕರು ಶಾಲೆಯ ಪ್ರಾಚಾರ್ಯರೊಂದಿಗೆ ಸೇರಿ ವಿದ್ಯಾರ್ಥಿಗಳಿಗೆ ಹೆಗಲ ಬ್ಯಾಡ್ಜ್‌ಗಳನ್ನು ಧರಿಸಿ ಅವರವರ ನಿಲಯಗಳ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು.
ಇದರ ನಂತರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಶಾಲಾ ನಾಯಕನಾಗಿ ಆಯ್ಕೆಯಾದ ಕೆಡೆಟ್ ಚಿನ್ಮಯ ಖಾನಾವಲ್ಲಿ ಮಾರ್ಗದರ್ಶನದಲ್ಲಿ ನೂತನ ವಿದ್ಯಾರ್ಥಿ ನಾಯಕರು ಶಾಲೆಯ ಮೌಲ್ಯಗಳು, ಶಿಸ್ತು ಮತ್ತು ಗೌರವವನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದರು.

ಶಾಲಾ ನಾಯಕನಾಗಿ ಕೆಡೆಟ್ ಚಿನ್ಮಯ ಖನವಲ್ಲಿ, ಶಾಲೆಯ ಶಿಸ್ತಿನ ನಾಯಕನಾಗಿ ಕೆಡೆಟ್ ಭರತ್ ಚೌಧರಿ, ಕ್ರೀಡಾ ನಾಯಕನಾಗಿ ಕೆಡೆಟ್ ಸೋಹಮ್ ಬಾಗೇವಾಡಿ, ಶೈಕ್ಷಣಿಕ ವಿಭಾಗದ ನಾಯಕನಾಗಿ ಕೆಡೆಟ್ ಅಕ್ಷತ್ ಗೈರೋಲಾ, ಸಾಂಸ್ಕೃತಿಕ ನಾಯಕನಾಗಿ ಕೆಡೆಟ್ ಗಿತೇಶ್ ಆರ್, ಭೋಜನಾಲಯದ ನಾಯಕನಾಗಿ ಕೆಡೆಟ್ ಪೂರ್ವಿಕ್ ಆರ್, ಐಟಿ ನಾಯಕನಾಗಿ ಕೆಡೆಟ್ ನೀರಜ್ ಧರಣಿ ಆಯ್ಕೆಯಾದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಾಚಾರ್ಯರಾದ ಕರ್ನಲ್ ಅಮರ್ ಜೀತ್ ಸಿಂಗ್ ರವರು ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಮತ್ತು ನಾಯಕತ್ವ ಹಾಗೂ ಜವಾಬ್ದಾರಿಯ ಸಾರವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಕರ್ತವ್ಯನಿಷ್ಠರಾಗಿ ತಮ್ಮ ‘ನಾಯಕತ್ವ ಧರ್ಮ’ವನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ನಿರ್ವಹಿಸುವಂತೆ ಅವರು ಕರೆ ನೀಡಿದರು. ಜವಾಬ್ದಾರಿಯು ಕೇವಲ ಸೌಲಭ್ಯವಲ್ಲ, ಅದೊಂದು ಕರ್ತವ್ಯ ಎಂದು ತಿಳಿಸಿದ ಅವರು, ಆಯ್ಕೆಯಾದ ನೂತನ ನಾಯಕರು ಮುಂಚೂಣಿಯಲ್ಲಿ ನಿಂತು ಶಾಲೆಯ ಎಲ್ಲಾ ಚಟುವಟಿಕೆಗಳನ್ನು ಮುನ್ನಡೆಸಬೇಕು. ಸಮಗ್ರತೆಯನ್ನು ಕಾಪಾಡಿಕೊಂಡು ಕೊಡಗಿನ ಸೈನಿಕ ಶಾಲೆಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಪ್ರೋತ್ಸಾಹಿಸಿದರು. ನಿಜವಾದ ನಾಯಕರು ಮಾದರಿಯಾಗಿ ನಿಂತು ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಾರೆಂದು ನೆನಪಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಹೆಮ್ಮೆ ಮತ್ತು ನವಚೈತನ್ಯದೊಂದಿಗೆ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಬೋಧಕ – ಭೋಧಕೇತರ ಸಿಬ್ಬಂದಿ, ಎನ್‌ಸಿಸಿ ಸಿಬ್ಬಂದಿ, ಧೈಹಿಕ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತೆರಿಗೆ ಸಂಗ್ರಹ ಕ್ಯಾಂಪ್ ಗೆ ಆಗ್ರಹ* 

ಏಪ್ರಿಲ್ 11, 2026

*ಕೂಡಿಗೆ : ನಂದಿತಾಗೆ ಸನ್ಮಾನ*

ಏಪ್ರಿಲ್ 11, 2026

*ಬೆಟ್ಟದಪುರದ ಅನಿಕೇತನ ಕಾಲೇಜಿಗೆ ಶೇ.92 ಫಲಿತಾಂಶ*

ಏಪ್ರಿಲ್ 11, 2026

*ಕೂಡಿಗೆ : ನಂದಿತಾಗೆ ಸನ್ಮಾನ*

ಏಪ್ರಿಲ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.11 NEWS DESK : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲಾ ಮಟ್ಟದ ಕಲಾ ವಿಭಾಗದಲ್ಲಿ ಕೂಡಿಗೆ ಪದವಿಪೂರ್ವ ಕಾಲೇಜಿನ…

*ಬೆಟ್ಟದಪುರದ ಅನಿಕೇತನ ಕಾಲೇಜಿಗೆ ಶೇ.92 ಫಲಿತಾಂಶ*

ಏಪ್ರಿಲ್ 11, 2026

*ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿಗೆ ಶೇ.100 ಫಲಿತಾಂಶ*

ಏಪ್ರಿಲ್ 11, 2026

*ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*

ಏಪ್ರಿಲ್ 11, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಏಪ್ರಿಲ್ 11, 2026

*ಅಂತರ್ಜಲ ಪ್ರಾಧಿಕಾರದ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 11, 2026

*ಲೋಕಸಭಾ ಕ್ಷೇತ್ರ ಹೆಚ್ಚಳ ಮಾಡದೇ ಮಹಿಳಾ ಮೀಸಲಾತಿ ನೀಡಬೇಕು : ಕೊಡಗಿನ ವಿಧಾನಸಭಾ ಕ್ಷೇತ್ರಗಳು 5ಕ್ಕೆ ಏರಿಕೆಯಾಗಬೇಕು*

ಏಪ್ರಿಲ್ 11, 2026

*ಏ.16 ಮತ್ತು 17 ರಂದು ಕಾಂತೂರು ಶ್ರೀಪನ್ನಂಗಾಲ ತಾಯಿಯ ವಾರ್ಷಿಕೋತ್ಸವ*

ಏಪ್ರಿಲ್ 11, 2026

*ಕುಶಾಲನಗರದ *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 11, 2026

*ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.