
ಮಡಿಕೇರಿ ಏ.7 NEWS DESK : ವಿರಾಜಪೇಟೆ ತಾಲೂಕಿನ ಕಾನೂರು ಗ್ರಾಮದ ಬ್ರಹ್ಮಗಿರಿಪುರದಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಮುತ್ತಪ್ಪ ದೇವರ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಭಾನುವಾರ ಸಂಜೆ 6 ಗಂಟೆಗೆ ಮುತ್ತಪ್ಪನ ವೆಳ್ಳಾಟಂನೊಂದಿಗೆ ಆರಂಭಗೊಂಡಿತು. ರಾತ್ರಿ ಭಗವತಿ ದೇವರ ತೆರೆಯು ನೆರೆದಿದ್ದ ಭಕ್ತಾಧಿಗಳನ್ನು ಹಿಡಿದುಕೊಳ್ಳುವ ರೀತಿಯಲ್ಲಿ ಅಟ್ಟಾಡಿಸುತ್ತಿದ್ದದ್ದು ಎಲ್ಲರ ಗಮನ ಸೆಳೆಯಿತು. ಮಂಗಳವಾರ ಗುಳಿಗ ದೇವರ ತೆರೆ, ಕುಟ್ಟಿಚಾತನ್, ಮುತ್ತಪ್ಪ ಮತ್ತು ತಿರುವಪ್ಪ ದೇವರ ತೆರೆ ನಡೆಯಿತು. ಮುತ್ತಪ್ಪ, ತಿರುವಪ್ಪ, ಸಾಸ್ತಪ್ಪನ್, ಕುಟ್ಟಿಚಾತನ್, ವಸೂರಿಮಲೆ, ಭಗವತಿ, ಗುಳಿಗನ್, ಕಂಡಕರ್ಣ ಹೀಗೆ ವಿವಿಧ ರೀತಿಯ ತೆರೆಗಳನ್ನು ಕಟ್ಟಲಾಗಿತ್ತು. ಉತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಮುತ್ತಪ್ಪ ದೇವಾಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಈಶ್ವರ, ಕಾರ್ಯದರ್ಶಿ ಕಾರ್ತಿಕ್, ಸದಸ್ಯರಾದ ವಿನು, ರವಿ, ರಾಜೇಶ್, ವಿಜಯ್, ಸುನಿ, ಅನಿ, ಸಂತೋಷ್, ಮಂಜುನಾಥ್, ಮಣಿ, ರಘು ಸೇರಿದಂತೆ ಇತರರು ಇದ್ದರು.









