
ಮಡಿಕೇರಿ ಏ.10 NEWS DESK : ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ಏ.11 ರಿಂದ ಏ.20ರವರೆಗೆ ಆಯೋಜಿಸಿದೆ. ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನ ಪುತ್ತೂರು. ಹಾಸನ ಮತ್ತು ಸುಳ್ಯ ಶಾಖೆಗಳಲ್ಲಿ ಮಾತ್ರ “ವರುಷದ ಹರುಷ” ಶಾಪಿಂಗ್ ಹಬ್ಬವಿರುತ್ತದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500 ರವರೆಗೆ ರಿಯಾಯಿತಿ ನೀಡಲಾಗುವುದು. ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್ ಗೆ ರೂ.7000 ರವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6000 ರಿಯಾಯಿತಿ ನೀಡಲಾಗುವುದು. ಅಲ್ಲದೆ 916 ಚಿನ್ನಾಭರಣಕ್ಕಿಂತ 2400 ರೂಪಾಯಿ ಅಂದಾಜು ಕಡಿಮೆ ಬೆಲೆಯಲ್ಲಿ 18ಕ್ಯಾರೆಟ್ ಹಾಲ್ಮಾರ್ಕ್ ಚಿನ್ನಾಭರಣಗಳು ದೊರೆಯುತ್ತದೆ. ಇದು ದಿನನಿತ್ಯದ ಬಳಕೆಗೆ ಸೂಕ್ತವಾಗಿರುತ್ತದೆ. ಹೊಸ ಚಿನ್ನ ಖರೀದಿ ಮಾಡುವವರಿಗೆ ಹೊಸ ಪರಿಯಾಯವಾಗಿರುತ್ತದೆ. ಆಭರಣ ಚಿನ್ನದ ಬೆಲೆ ಪ್ರತೀ ಗ್ರಾಂಗೆ 17,000 ಕ್ಕೆ ಏರಿದ್ದು, ಈಗ ಚಿನ್ನದ ದರದಲ್ಲಿ ಇಳಿಕೆಯಾಗಿರುವುದರಿಂದ ಗ್ರಾಹಕರಿಗೆ ಚಿನ್ನ ಖರೀದಿಸಲು ಇದು ಒಂದು ಸುವರ್ಣಾವಕಾಶವಾಗಿದೆ. ವಿವಿಧ ಬಗೆಯ ಚಿನ್ನಾಭರಣಗಳ ಅಮೋಘ ಸಂಗ್ರಹವಿದ್ದು, ಸಾಂಪ್ರದಾಯಿಕ ಹಾಗೂ ಆಧುನಿಕ ವಿನ್ಯಾಸಗಳ ಚಿನ್ನಾಭರಣಗಳು, ಬೆಳ್ಳಿ ಮತ್ತು ವಜ್ರಾಭರಣಗಳ ವೈವಿಧ್ಯಮಯ ಸಂಗ್ರಹ ಲಭ್ಯವಿದ್ದು, ಎಲ್ಲಾ ವಯೋಮಾನದ ಗ್ರಾಹಕರ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಸಮಾಜದ ಎಲ್ಲಾ ವರ್ಗದ ಜನರ ಅಭಿರುಚಿಗೆ ತಕ್ಕಂತೆ ಚಿನ್ನ,ಬೆಳ್ಳಿ ಮತ್ತು ವಜ್ರಾಭರಣಗಳ ವಿನೂತನ ಕಲೆಕ್ಷನ್ಗಳು ಇಲ್ಲಿ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಪರಿಪೂರ್ಣತೆ ಮತ್ತು ಅಸಾಧಾರಣ ಕರಕುಶಲತೆಯ ನೈಪುಣ್ಯತೆಯಿಂದ ಹೊರಹೊಮ್ಮಿರುವ ಈ ವಿಶಿಷ್ಟ ಸಂಗ್ರಹ ಎಲ್ಲರ ಕಣ್ಮನ ಸೆಳೆಯುತ್ತದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.









