
ಮಡಿಕೇರಿ NEWS DESK ಏ.12 : ಚಲನಚಿತ್ರ ಮತ್ತು ಕಿರುತೆರೆಯ ನಟ ಕೊಡಗಿನ 7ನೇ ಹೊಸಕೋಟೆಯ ಕಲ್ಲೂರು ನಿವಾಸಿ ಹರೀಶ್(42) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಕುಶಾಲನಗರ ಮಾರ್ಗವಾಗಿ ಕಲ್ಲೂರಿಗೆ ತೆರಳುತ್ತಿದ್ದ ಸಂದರ್ಭ ಆನೆಕಾಡಿನ 275 ರಾಷ್ಟ್ರೀಯ ಹೆದ್ದಾರಿಯಲ್ಲಿ ಹರೀಶ್ ಸಂಚರಿಸುತ್ತಿದ್ದ ಕಾರು ನಿಂತಿದ್ದ ಗೊಬ್ಬರ ತುಂಬಿದ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊoಡಿದ್ದು, ಗಂಭೀರವಾಗಿ ಗಾಯಗೊಂಡ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








