
ಮಡಿಕೇರಿ NEWS DESK ಏ.15 : ವಾರ್ಷಿಕ ಪೂಜೋತ್ಸವದಲ್ಲಿ ತೊಡಗಿದ್ದ ಭಕ್ತರ ಮೇಲೆ ಹೆಜ್ಜೇನು ಹುಳಗಳು ದಾಳಿ ಮಾಡಿರುವ ಘಟನೆ ಕಣಿವೆಯ ಹೊಸಪಟ್ಟಣ ಗ್ರಾಮದ ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವಾಲಯದ ಬಳಿ ನಡೆದಿದೆ. ಶ್ರೀ ಬಸವೇಶ್ವರ ಹಾಗೂ ಕನ್ನಂಬಾಡಮ್ಮ ದೇವಾಲಯದ ವಾರ್ಷಿಕೋತ್ಸವದ ಪ್ರಯುಕ್ತ ದೇವರ ಉತ್ಸವ ಮೂರ್ತಿಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಿ ಗಂಗಾಪೂಜೆ ನೆರವೇರಿಸಲಾಗುತ್ತಿತ್ತು. ಈ ಸಂದರ್ಭ ಏಕಾಏಕಿ ಹೆಜ್ಜೇನು ಹುಳಗಳು ಗ್ರಾಮಸ್ಥರ ಮೇಲೆ ದಾಳಿ ಮಾಡಿತು. ಬಹುತೇಕ ಮಂದಿ ದೇವಾಲಯದತ್ತ ಮತ್ತು ತಮ್ಮ ತಮ್ಮ ಮನೆಗಳಿಗೆ ಓಡಿ ನಿಟ್ಟುಸಿರುಬಿಟ್ಟರು. ಕೆಲವರು ದೇವರಿಗೆ ತಪ್ಪು ಕಾಣಿಕೆ ಹಾಕಿ ಪ್ರಾರ್ಥಿಸಿದರು, ಅದೃಷ್ಟವಶಾತ್ ಭಕ್ತರು ಪ್ರಾಣಾಪಾಯದಿಂದ ಪಾರಾದರು.








