Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17  NEWS DESK : ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಾಗೂ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘವ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟರ್ಫ್ ‘ಸೌಹಾರ್ದ ಕಪ್’ ಪಂದ್ಯಾವಳಿಯಲ್ಲಿ ಮೀಡಿಯಾ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸಿದ್ದಾಪುರದ ಟರ್ಫ್ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ 8 ತಂಡಗಳು ಪಾಲ್ಗೊಂಡಿತ್ತು. ಫೈನಲ್ ಪಂದ್ಯಾವಳಿಯಲ್ಲಿ ಕಾವೇರಿ ತಂಡದ ಪರವಾಗಿ ಜಯಪ್ರಕಾಶ್ ಅವರ 26 ರನ್ ಗಳ ಸಹಾಯದಿಂದ ತಂಡ 49 ರನ್ ಗಳಿಸಿತು. ಮೀಡಿಯಾ ಸೂಪರ್ ಕಿಂಗ್ಸ್ ತಂಡದ ಇಸ್ಮಾಯಿಲ್28, ರೆಜಿತ್ 18 ರನ್ ಗಳನ್ನು ಗಳಿಸಿ ಸುಲಭ ಜಯ ಸಾಧಿಸಿತು. ಇದಕ್ಕೂ ಮೊದಲು ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ಕಾವೇರಿ ಮಿಡಿಯಾ ತಂಡ ಮಿಡಿಯಾ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತು. ಎಲಿಮಿನೇಟರ್ ಪಂದ್ಯದಲ್ಲಿ ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ ತಂಡ ಮೀಡಿಯಾ ರೋಯಲ್ಸ್ ತಂಡವನ್ನು ಮಣಿಸಿತು. ಎರಡನೇ ಕ್ಲಾಲಿಫೈಯರ್ ಪಂದ್ಯದಲ್ಲಿ ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ ಹಾಗೂ ಮೀಡಿಯಾ ಸೂಪ್ ಕಿಂಗ್ಸ್ ತಂಡದ ನಡುವಿನ ಪಂದ್ಯವು ಸಮಬಲ ಆಗಿದ್ದು, ಸೂಪರ್ ಓವರ್ ನಲ್ಲಿ ಮೀಡಿಯಾ ಸೂಪರ್ ಕಿಂಗ್ಸ್ ಜಯ ಸಾಧಿಸಿತು. ಪಂದ್ಯಾವಳಿಯ ಫೈನಲ್‌ಪಂದ್ಯದ ಪಂದ್ಯ ಪುರುಷೋತ್ತಮ ರೆಜಿತ್ ಕುಮಾರ್ ಗುಹ್ಯ, ಬೆಸ್ಟ್ ಬ್ಯಾಟ್ಸ್ ಮನ್ ಇಸ್ಮಾಯಿಲ್ ಕಂಡಕ್ಕರೆ, ಬೆಸ್ಟ್ ಬೌಲರ್ ಯುಗ ದೇವಯ್ಯ, ಬೆಸ್ಟ್ ಕೀಪರ್ ಜಯಪ್ರಕಾಶ್, ಬೆಸ್ಟ್ ಕ್ಯಾಚ್ ಪ್ರದೀಪ್, ಸರಣಿ ಶ್ರೇಷ್ಠ ಆದರ್ಶ್, ಉತ್ತಮ ಮಹಿಳಾ ಆಟಗಾರರಾಗಿ ಪ್ರಮಿಳಾ ನಾಚಯ್ಯ, ಉತ್ತಮ ಹಿರಿಯ ಆಟಗಾರ ಹನೀಫ್ ಕೊಡ್ಲಿಪೇಟೆ, ಬೆಸ್ಟ್ ಫೀಲ್ಡರ್ ವಿನು ಕುಶಾಲಪ್ಪ ಪಡೆದುಕೊಂಡರು. ಪಂದ್ಯಾವಳಿಯಲ್ಲಿ ನನ್ನ ಧ್ವನಿ, ಕಾಪಿನಾಡ್, ಗೋಣಿಕೊಪ್ಪ ಮೀಡಿಯಾ ಕಿಂಗ್ಸ್, ಟೀಮ್ ಅಯರ ತಂಡಗಳು ಪಾಲ್ಗೊಂಡಿತು. :: ಒತ್ತಡದ ಬದುಕಿಗೆ ಕ್ರೀಡಾಕೂಟ ಅತ್ಯಗತ್ಯ : ಮಾದಂಡ ತಿಮ್ಮಯ್ಯ ::  ಪಂದ್ಯಾವಳಿಯನ್ನು ಅಂತರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪತ್ರಕರ್ತರು ಸದಾ ಒತ್ತಡದ ಬದುಕಿನಲ್ಲಿದ್ದು, ಕ್ರೀಡೆಯ ಮೂಲಕ ಉತ್ತಡಕ್ಕೆ ವಿರಾಮವನ್ನು ಕಂಡುಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಜಿಲ್ಲೆಯಲ್ಲಿ ಕ್ರೀಡೆಯ ಬೆಳವಣಿಗೆಗೆ ಪತ್ರಕರ್ತರ ಕೊಡುಗೆಯೂ ಅಪಾರವಾಗಿದೆ ಎಂದರು. ಯುವ ಮುಖಂಡ ಎಡಿಕೇರಿ ಪ್ರಸನ್ನ ಮಾತನಾಡಿ, ಕ್ರೀಡೆಯು ದೈಹಿಕ ಆರೋಗ್ಯವನ್ನು ಹೆಚ್ಚಿಸಲು ಉಪಯುಕ್ತವಾಗಲಿದೆ. ಪತ್ರಕರ್ತರು ಸಮಾಜದ ಪ್ರತಿಯೊಂದು ವಿಷಯದಲ್ಲೂ ಗಮನ ಹರಿಸುತ್ತಿದ್ದು, ತಮ್ಮ ಆರೋಗ್ಯದ ಕಡೆಯೂ ಗಮನಹರಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜೀರ ಬಿ ಅಯ್ಯಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಬಿ.ಆರ್ ಸವಿತಾ ರೈ, ಅಯರ ತಂಡದ ಮಾಲೀಕರಾದ ಪಿ.ವಿಷ್ಣು, ಸಮಾಜ ಸೇವಕರಾದ ಎ.ಎನ್ ಪದ್ಮನಾಭ ಹಾಜರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ವಹಿಸಿದ್ದರು. :: ಜಿಲ್ಲಾ ಕೇಂದ್ರದಲ್ಲಿ ಟರ್ಫ್ ಮೈದಾನ ಅಗತ್ಯ ::  ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ ಮಾತನಾಡಿ, ಪತ್ರಕರ್ತರಲ್ಲಿ ಉತ್ತಮ ಕ್ರಿಕೆಟ್ ಆಟಗಾರರನ್ನು ಹೊಂದಿದ್ದು, ವೃತ್ತಿಪರ ಆಟಗಾರರಂತೆ ಆಡುತ್ತಿರುವುದು ಶ್ಲಾಘನೀಯ. ಜಿಲ್ಲಾ ಕೇಂದ್ರದಲ್ಲಿಯೂ ಟರ್ಫ್ ಮೈದಾನ ಅಗತ್ಯವಾಗಿದೆ .ಎಲ್ಲರೂ ಆರೋಗ್ಯದ ಕಡೆ ಗಮನ ಹರಿಸಬೇಕೆಂದರು. ಉದ್ಯಮಿ ಮುದ್ದಂಡ ರಶಿನ್ ಸುಬ್ಬಯ್ಯ ಮಾತನಾಡಿ, ಧರ್ಮ ಜನರನ್ನು ಒಡೆಯುತ್ತದೆ. ಆದರೇ ಕ್ರೀಡೆ ಹಾಗೂ ವ್ಯಾಪಾರ ಎಲ್ಲರನ್ನು ಒಗ್ಗೂಡಿಸುತ್ತದೆ. ಕ್ರೀಡೆಯ ಮೂಲಕ ಪತ್ರಕರ್ತರು ಒಗ್ಗಟ್ಟು ಹೆಚ್ಚುತ್ತದೆ. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಚೈಯಂಡ ಸತ್ಯ ಗಣಪತಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜೀರ ಬಿ ಅಯ್ಯಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಬಿ.ಆರ್ ಸವಿತಾ ರೈ ಹಾಜರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರೆಜಿತ್ ಕುಮಾರ್ ವಹಿಸಿದ್ದರು. :: ಭಾಗವಹಿಸಿದ ತಂಡಗಳು : : ಇಸ್ಮಾಯಿಲ್ ಕಂಡಕ್ಕರೆ ಮಾಲೀಕರಾಗಿ ನೌಫಲ್ ಕಡಂಗ ನಾಯಕರಾಗಿರುವ ಮೀಡಿಯ ಸೂಪರ್ ಕಿಂಗ್ಸ್, ಸಂತೋಷ್ ರೈ ಹಾಗೂ ಸವಿತಾ ರೈ ಮಾಲಿಕತ್ವದ ಎ.ಎಸ್ ಮುಸ್ತಫ ನಾಯಕನಾರಾಗಿರುವ ಮೀಡಿಯಾ ರಾಯಲ್ಸ್, ಎಂ.ಎನ್ ಚಂದ್ರಮೋಹನ್ ಮಾಲೀಕರಾಗಿ ಹೆಚ್.ಸಿ ಜಯಪ್ರಕಾಶ್ ನಾಯಕರಾಗಿರುವ ಕಾವೇರಿ ಮೀಡಿಯಾ ಕ್ರಿಕೆಟರ್ಸ್, ಸಣ್ಣುವಂಡ ಕಿಶೋರ್ ನಾಚಪ್ಪ ಹಾಗೂ ವಿ.ವಿ ಅರುಣ್ ಕುಮಾರ್ ಮಾಲಿಕತ್ವದ ಮಂಡೇಡ ಅಶೋಕ್ ನಾಯಕರಾಗಿರುವ ಗೋಣಿಕೊಪ್ಪ ಮೀಡಿಯಾ ಕಿಂಗ್ಸ್, ವಿರಾಜಪೇಟೆಯ ಉದ್ಯಮಿ ಪಿ.ವಿಷ್ಣು ಮಾಲಿಕತ್ವದ ಡಾ.ಹೇಮಂತ್ ಕುಮಾರ್ ನಾಯಕರಾಗಿರುವ ಟೀಮ್ ಅಯರ, ಅನಿವಾಸಿ ಬಾರತೀಯ ಎ.ಎನ್ ಪದ್ಮನಾಭ ಮಾಲೀಕತ್ವದ ಪ್ರೇಮ್ ನಾಯಕತ್ವದ ನನ್ನ ಧ್ವನಿ, ಚೆಯ್ಯಂಡ ಸತ್ಯ ಮಾಲಿಕತ್ವದ ಆದರ್ಶ್ ನಾಯಕರಾಗಿರುವ ಬ್ರಾಡ್ ಕಾಸ್ಟ್ ಇಬ್ನಿ ಬ್ಲಾಸ್ಟರ್ಸ್ , ಮಚ್ಚಮಾಡ ಅನೀಶ್ ಮಾದಪ್ಪ ಮಾಲಿಕತ್ವದ ದಿವಾಕರ್ ಜಾಕಿ ನಾಯಕರಾಗಿರುವ ಟೀಂ ಕಾಫಿ ನಾಡ್ ಈ ಎಂಟು ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಂಡಿತ್ತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.