Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*
  • *ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*
  • *ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*
  • *ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*
  • *ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.22 NEWS DESK : ಸೋಮವಾರಪೇಟೆಯ ಖಾಸಗಿ ಕಲ್ಯಾಣ ಮಂಟದಲ್ಲಿ ಪರಿಶಿಷ್ಟ ಜನಾಂಗದವರ ಕುಂದುಕೊರತೆ ಆಲಿಸುವ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪರಿಶಿಷ್ಟ ಜನಾಂಗದವರ ಕುಂದುಕೊರತೆ ಸಭೆಯಲ್ಲಿ ಸುಮಾರು 48 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ದುರಸ್ತಿ, ಹಕ್ಕುಪತ್ರ ವಿತರಿಸುವುದು, ಮನೆ ದಾಖಲಾತಿ, ಅಕ್ರಮ ಸಕ್ರಮ, ಜಾಗ ಅತಿಕ್ರಮಣ ತೆರವುಗೊಳಿಸುವುದು, ಜಮೀನಿಗೆ ತೆರಳಲು ದಾರಿ ಬಿಡಿಸುವುದು, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪೊಲೀಸ್, ಕೃಷಿ, ಆಹಾರ, ಸೆಸ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹೀಗೆ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿ, ಹಕ್ಕುಪತ್ರ, ನಿವೇಶನ ಒದಗಿಸುವುದು, ಮನೆ ನಿರ್ಮಾಣ, ಕೃಷಿ ಭೂಮಿ ಅತಿಕ್ರಮಣ ಮಾಡಿಕೊಂಡಿರುವುದು ಇಂದಿನ ಕುಂದುಕೊರತೆ ಸಭೆಯಲ್ಲಿ ಹೆಚ್ಚಾಗಿ ಕೇಳಿಬಂದವು. ಈ ಸಂದರ್ಭದಲ್ಲಿ ಮಾತನಾಡಿದ ಕುಂಬೂರಿನ ಸೋಮಪ್ಪ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಲವು ಸಮಸ್ಯೆಗಳಿದ್ದು, ಇವುಗಳನ್ನು ಪರಿಹರಿಸಬೇಕು. ಇಂದಿಗೂ ಸಹ ನಿವೇಶನ ಹಾಗೂ ಹಕ್ಕುಪತ್ರ ಇಲ್ಲದೆ ಮನೆ ನಿರ್ಮಾಣ ಕಷ್ಟವಾಗಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದು ಕೋರಿದರು. ಭೂಮಿ ಇರುವವರಿಗೆ ಹಕ್ಕುಪತ್ರ ನೀಡಬೇಕು. ಭೂಮಿ ಅತಿಕ್ರಮಣ ಮಾಡಿಕೊಂಡಿರುವವರನ್ನು ತೆರವುಗೊಳಿಸಬೇಕು. ಪರಿಶಿಷ್ಟರು ಇತರರಂತೆ ಬದುಕು ಕಟ್ಟಿಕೊಳ್ಳಲು ಅವಕಾಶ ಮಾಡಬೇಕು ಎಂದು ಕೋರಿದರು. ಬಸವಯ್ಯ ಅವರು ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಇಂದಿಗೂ ಸಹ ಸಂಕಷ್ಟದಲ್ಲಿ ಜೀವನ ದೂಡುತ್ತಿದ್ದು, ಇವರಿಗೆ ಕನಿಷ್ಠ ಮೂಲ ಸೌಲಭ್ಯವನ್ನಾದರೂ ಒದಗಿಸಬೇಕು ಎಂದು ಅವರು ಮನವಿ ಮಾಡಿದರು. ಕೊಡ್ಲಿಪೇಟೆ, ಶನಿವಾರಸಂತೆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟರು ಇದ್ದು, ಈ ಜನರಿಗೆ ನಿವೇಶನ ಹಾಗೂ ಜಮೀನು ಒದಗಿಸಬೇಕು. ಆ ನಿಟ್ಟಿನಲ್ಲಿ ಸಮಸ್ಯೆಗಳನ್ನು ಪರಿಹರಿಸುವಂತಾಗಬೇಕು ಎಂದು ಕೋರಿದರು.
ಸಾರ್ವಜನಿಕರೊಬ್ಬರು ಮಾತನಾಡಿ ಕಂದಾಯ, ಅರಣ್ಯ ಹಾಗೂ ಭೂ ದಾಖಲೆಗಳ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸದೆ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ಮೂರು ಇಲಾಖೆಗಳು ಒಟ್ಟಾಗಿ ಕೆಲಸ ಮಾಡಿದಾಗ ಸಾರ್ವಜನಿಕರಿಗೆ ಸುಲಭವಾಗಿ, ಸುಲಲಿತವಾಗಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ. ಆ ನಿಟ್ಟಿನಲ್ಲಿ ಇನ್ನೂ ಮುಂದಾದರೂ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು ಎಂದರು. ಭೂಮಿ ಒತ್ತುವರಿ ಸಂಬಂಧ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಸಮಸ್ಯೆ ಇತ್ಯರ್ಥವಾಗಿಲ್ಲ. ನಿಜವಾದ ಅರ್ಹರಿಗೆ ಭೂಮಿ ಸೇರಬೇಕು. ಆ ನಿಟ್ಟಿನಲ್ಲಿ ಕೂಲಂಕಷವಾಗಿ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು. ರಾಜು ಅವರು ಮಾತನಾಡಿ ಕುಶಾಲನಗರ ಬಳಿಯ ಸಿದ್ದಲಿಂಗಪುರ ಬಳಿ ಸರ್ಕಾರಿ ಭೂಮಿ ಇದ್ದು, ಆ ಭೂಮಿಯಲ್ಲಿ ಇತರರು ಅತಿಕ್ರಮಣ ಮಾಡಿಕೊಂಡು ವಾಸ ಮಾಡುತ್ತಿದ್ದಾರೆ. ಇದನ್ನು ತೆರವುಗೊಳಿಸುವಂತಾಗಬೇಕು. ಹಾಗೆಯೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಕಾಲದಲ್ಲಿ ಸಾಲ ಸೌಲಭ್ಯ ನೀಡಬೇಕು ಎಂದು ಅವರು ಮನವಿ ಮಾಡಿದರು. ಉದಯ ಕುಮಾರ್ ಅವರು ಮಾತನಾಡಿ ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಪೊಲೀಸ್ ಇಲಾಖೆಯ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯವರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಿದ್ದಲ್ಲಿ ಹಲವು ಸಮಸ್ಯೆಗಳನ್ನು ಪರಿಹರಿಸಬಹುದಾಗಿದೆ. ಆ ನಿಟ್ಟಿನಲ್ಲಿ ನಡೆದುಕೊಳ್ಳುವಂತಾಗಬೇಕು ಎಂದು ಕೋರಿದರು. ಕುಂದುಕೊರತೆ ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಹಶೀಲ್ದಾರ್ ಮತ್ತು ತಾ.ಪಂ.ಇಒಗಳು ತಿಂಗಳಿಗೊಮ್ಮೆಯಾದರೂ ಪರಿಶಿಷ್ಟರ ಕುಂದುಕೊರತೆ ಸಭೆಯನ್ನು ಏರ್ಪಡಿಸುವಂತಾಗಬೇಕು ಎಂದು ನಿರ್ದೇಶನ ನೀಡಿದರು. ಹೋಬಳಿ ಮಟ್ಟದಲ್ಲಿಯೂ ಸಹ ಕುಂದುಕೊರತೆ ಸಭೆ ಏರ್ಪಡಿಸಿ ಸಮಸ್ಯೆಗಳನ್ನು ಆಲಿಸಿದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆ ನಿಟ್ಟಿನಲ್ಲಿ ಇಚ್ಛಾಶಕ್ತಿ ಹಾಗೂ ಬದ್ಧತೆಯಿಂದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿದ್ದು, ಹೋಬಳಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಕಾಲದಲ್ಲಿ ಕರ್ತವ್ಯ ನಿರ್ವಹಿಸಿದಲ್ಲಿ ಹಲವು ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿ ಪರಿಹರಿಸಬಹುದು. ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ತಹಶೀಲ್ದಾರರಾದ ಕೃಷ್ಣಮೂರ್ತಿ, ಕಿರಣ್ ಗೌರಯ್ಯ, ತಾ.ಪಂ.ಇಒ ಪರಮೇಶ್ ಅವರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. ತಾಲ್ಲೂಕು ಮಟ್ಟದ ಅಧಿಕಾರಿಗಳು, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನ ಸಾರ್ವಜನಿಕರು ಪಾಲ್ಗೊಂಡು ಲಿಖಿತವಾಗಿ ಮಾಹಿತಿ ನೀಡಿ ಗಮನ ಸೆಳೆದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಬೆಂಗಳೂರು NEWS DESK ಏ.22 : ಕೊಡಗು ಜಿಲ್ಲೆಯ ಕುಟ್ಟ ಪ್ರದೇಶದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ (𝗛𝗼𝗺𝗲𝘀𝘁𝗮𝘆) ಅಮೆರಿಕಾ ಮೂಲದ ಮಹಿಳೆಯೊಬ್ಬರ…

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*

ಏಪ್ರಿಲ್ 22, 2026

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.