Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*

ಏಪ್ರಿಲ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.23 NEWS DESK : ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.96.54 ರಷ್ಟು ಫಲಿತಾಂಶ ಪಡೆದು, ರಾಜ್ಯದಲ್ಲಿ 8 ನೇ ಸ್ಥಾನ ಹೊಂದಿದೆ. ಕೊಡಗು ಜಿಲ್ಲೆ ಕಳೆದ ಬಾರಿ ಶೇ.82 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4ನೇ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ಫಲಿತಾಂಶ ಹೆಚ್ಚಳವಾಗಿದ್ದರೂ ಸಹ, ಫಲಿತಾಂಶ ಸ್ಥಾನದಲ್ಲಿ ಪಲ್ಲಟವಾಗಿದೆ. ಸ್ಥಾನದಲ್ಲಿ ಬದಲಾವಣೆ ಕಂಡು ಬಂದಿದ್ದರೂ ಸಹ ಕಳೆದ ಬಾರಿಗಿಂತ ಈ ಬಾರಿ ಶೇ.14.54 ರಷ್ಟು ಫಲಿತಾಂಶ ವೃದ್ಧಿಯಾಗಿರುವುದು ಕಂಡು ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ 2904 ಬಾಲಕರಲ್ಲಿ 2776 ಉತ್ತೀರ್ಣರಾಗಿ ಶೇ.95.59 ರಷ್ಟು ಫಲಿತಾಂಶ ಪಡೆದಿದ್ದಾರೆ. ಹಾಗೆಯೇ ಪರೀಕ್ಷೆ ಬರೆದಿದ್ದ 3044 ಬಾಲಕಿಯರಲ್ಲಿ 2966 ಬಾಲಕಿಯರು ಉತ್ತೀರ್ಣರಾಗಿ ಶೇ.97.44 ರಷ್ಟು ಫಲಿತಾಂಶ ಪಡೆದಿದ್ದಾರೆ. ತಾಲ್ಲೂಕುವಾರು ಶೇಕಡ ಫಲಿತಾಂಶ ಗಮನಿಸಿದಾಗ ಮಡಿಕೇರಿ ತಾಲ್ಲೂಕು ಶೇ.95.35, ಸೋಮವಾರಪೇಟೆ ಶೇ.97.50, ವಿರಾಜಪೇಟೆ ಶೇ.96.25 ರಷ್ಟು ಫಲಿತಾಂಶ ಬಂದಿದೆ. ಎಸ್ಸೆಸ್ಸೆಲ್ಸಿಯ ಒಟ್ಟು 625 ಅಂಕಕ್ಕೆ 621 ಅಂಕವನ್ನು ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಪಡೆದು ಪ್ರಥಮ ಸ್ಥಾನ ಹೊಂದಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢ ಶಾಲೆಯ ಲಿನ್ಸಿ ದೇಚಮ್ಮ ಟಿ.ಟಿ. ಅವರು 621, ಹಾಗೆಯೇ ಕೊಡಗರಹಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ಸಿಂಚನ ಕೆ.ಐ. ಅವರು 621 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಉಳಿದಂತೆ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ಡೀನ್ ಸೆಲ್ವ ಡಿ’ಸೋಜ 620, ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ಪ್ರೌಢ ಶಾಲೆಯ ಶಿವಾನಿ ಶಾರದಮಣಿ, ವಿರಾಜಪೇಟೆಯ ಕಾವೇರಿ ಪ್ರೌಢಶಾಲೆಯ ಯು.ಎಸ್.ಶ್ರೀವತ್ಸ, ಗೋಣಿಕೊಪ್ಪ ಕಳತ್ಮಾಡುವಿನ ಲಯನ್ಸ್ ಪ್ರೌಢ ಶಾಲೆಯ ಸಿದ್ಧಾರ್ಥ ಕಾವೇರಪ್ಪ ಇವರು 619 ಅಂಕ ಪಡೆದಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢ ಶಾಲೆಯ ಸೋನಶ್ರೀ ಕೆ.ಇ., ಗೋಣಿಕೊಪ್ಪ ಸೆಂಟ್ ಥಾಮಸ್ ಪ್ರೌಢ ಶಾಲೆಯ ನಮನ ಈ ಇಬ್ಬರು 618 ಅಂಕ ಪಡೆದಿದ್ದಾರೆ. ಉಳಿದಂತೆ ಸೋಮವಾರಪೇಟೆಯ ಅವರ್ ಲೇಡಿ ಆಫ್ ವಿಕ್ಟೋರಿಯಸ್ ಪ್ರೌಢ ಶಾಲೆಯ ತಾನ್ವಿ, ವಿರಾಜಪೇಟೆಯ ಶ್ರೀ ಕಾವೇರಿ ಪ್ರೌಢ ಶಾಲೆಯ ಮೊಹಮ್ಮದ್ ಶಿಫಾನ್, ಕೊಡಗರಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ರೆನಿತ್ ಈ ಮೂವರು 617 ಅಂಕ ಪಡೆದಿದ್ದಾರೆ. ಜಿಲ್ಲೆಯಲ್ಲಿ 140 ಪ್ರೌಢ ಶಾಲೆಗಳಲ್ಲಿ 84 ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿರುವುದು ವಿಶೇಷವಾಗಿದೆ. ಇದರಲ್ಲಿ ಸರ್ಕಾರಿ ಪ್ರೌಢ ಶಾಲೆಯ 47 ರಲ್ಲಿ 37 ಪ್ರೌಢ ಶಾಲೆಗಳು ಶೇ.100 ರಷ್ಟು ಫಲಿತಾಂಶ, ಅನುದಾನಿತ 40 ಪ್ರೌಢ ಶಾಲೆಗಳಲ್ಲಿ 10 ಶಾಲೆಗಳು ಶೇ.100 ರಷ್ಟು, ಅನುದಾನ ರಹಿತ 53 ಪ್ರೌಢ ಶಾಲೆಯಲ್ಲಿ 37 ಪ್ರೌಢ ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿವೆ. ಒಟ್ಟಾರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 5,948 ವಿದ್ಯಾರ್ಥಿಗಳಲ್ಲಿ 5742 ವಿದ್ಯಾರ್ಥಿಗಳು ಉತ್ತೀರ್ಣರಾಗಿ, 206 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.