Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*
  • *ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*
  • *ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ನಿಂದ ವಿವಿಧ ಕ್ರೀಡಾಕೂಟ*
  • *ವೀರಭದ್ರ ಹಾಗೂ ಸಪರಿವಾರ ದೇವರುಗಳ ದೇವಾಲಯ ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ,ಭಕ್ತಿಯಿಂದ ನೆರವೇರಿತು*
  • *ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ*
  • *ಕುಟ್ಟ ಹೋಂಸ್ಟೇ ಪ್ರಕರಣ ಎಚ್ಚರಿಕೆಯ ಗಂಟೆ : ಸೂಕ್ತ ನಿಯಮ ರೂಪಿಸಲು ಹೋಂಸ್ಟೇ ಅಸೋಸಿಯೇಷನ್ ಆಗ್ರಹ*
  • *’ನಮ್ಮ ಗ್ರೋಮೋರ್’ 1200ನೇ ಮಳಿಗೆ ಉದ್ಘಾಟನೆ*
  • *ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*
  • *10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*
  • *ರೋಟರಿ ವುಡ್ಸ್ ನಿಂದ ಚಾಮಾ೯ಡಿ ಬೈಕ್ ರೈಡ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಟ್ಟ ಹೋಂಸ್ಟೇ ಪ್ರಕರಣ ಎಚ್ಚರಿಕೆಯ ಗಂಟೆ : ಸೂಕ್ತ ನಿಯಮ ರೂಪಿಸಲು ಹೋಂಸ್ಟೇ ಅಸೋಸಿಯೇಷನ್ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಟ್ಟ ಹೋಂಸ್ಟೇ ಪ್ರಕರಣ ಎಚ್ಚರಿಕೆಯ ಗಂಟೆ : ಸೂಕ್ತ ನಿಯಮ ರೂಪಿಸಲು ಹೋಂಸ್ಟೇ ಅಸೋಸಿಯೇಷನ್ ಆಗ್ರಹ*

ಏಪ್ರಿಲ್ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.24 : ದಕ್ಷಿಣ ಕೊಡಗಿನ ಕುಟ್ಟ ಗ್ರಾಮದ ಹೋಂಸ್ಟೇಯೊoದರಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿದೆ ಎನ್ನಲಾಗಿರುವ ಲೈಂಗಿಕ ಕಿರುಕುಳ ಪ್ರಕರಣ ಅತ್ಯಂತ ವಿಷಾದಕರ. ಈ ಪ್ರಕರಣ ಎಚ್ಚರಿಕೆಯ ಗಂಟೆಯಾಗಿದ್ದು, ಸರಕಾರ ತಕ್ಷಣ ಪ್ರವಾಸೋದ್ಯಮ ನಿಯಮವನ್ನು ರೂಪಿಸಿ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಆದ್ಯತೆ ನೀಡಬೇಕೆಂದು ಕೂರ್ಗ್ ಹೋಂಸ್ಟೇ ಅಸೋಸಿಯೇಷನ್ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ನ ಅಧ್ಯಕ್ಷರಾದ ಮೋಂತಿ ಗಣೇಶ್ ಕುಟ್ಟ ಹೋಂಸ್ಟೇ ಪ್ರಕರಣಕ್ಕೆ ಸಂಬoಧಿಸಿದoತೆ ಹೋಂಸ್ಟೇಯ ಪರವಾನಗಿಯನ್ನು ಜಿಲ್ಲಾಧಿಕಾರಿಗಳು ರದ್ದು ಮಾಡಿರುವುದು ಸರಿಯಾದ ಕ್ರಮವಲ್ಲ. ಪ್ರಕರಣ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗುವಲ್ಲಿಯವರೆಗೆ ಪರವಾನಗಿಯನ್ನು ಅಮಾನತಿನಲ್ಲಿಡಬಹುದಾಗಿತ್ತು ಎಂದು ಅಭಿಪ್ರಾಯಪಟ್ಟರು. ಹೋಂಸ್ಟೇ ಮಾಲೀಕರು ಅಸೋಸಿಯೇಷನ್ ನ ಸದಸ್ಯರಾಗಿದ್ದು, ಇವರ ವಿರುದ್ಧದ ಆರೋಪದ ಕುರಿತು ಸಮಗ್ರ ತನಿಖೆಯಾಗಲಿ, ಹೋಂಸ್ಟೇಯಲ್ಲಿರುವ ಸಿಸಿ ಕ್ಯಾಮರಾದ ದೃಶ್ಯಗಳನ್ನು ಮತ್ತು ವೈಫೈ ವ್ಯವಸ್ಥೆಗಳನ್ನು ತನಿಖೆಗೆ ಒಳಪಡಿಸಲಿ ಎಂದು ಒತ್ತಾಯಿಸಿದರು. ಹೋಂಸ್ಟೇ ಪರಿಕಲ್ಪನೆಯಿಂದ ಕೊಡಗಿನಲ್ಲಿ ಪ್ರವಾಸೋದ್ಯಮ ಹೆಚ್ಚು ಅಭಿವೃದ್ಧಿ ಹೊಂದುತ್ತಿದ್ದು, ಪ್ರತಿಯೊಂದು ಕ್ಷೇತ್ರದ ವ್ಯಕ್ತಿಗೂ ಇದರಿಂದ ಲಾಭವಾಗುತ್ತಿದೆ ಮತ್ತು ಉದ್ಯೋಗ ಸೃಷ್ಟಿಯಾಗುತ್ತಿದೆ. ಕೂರ್ಗ್ ಹೋಂಸ್ಟೇ ಅಸೋಸಿಯೇಷನ್ 2006 ರಿಂದ ಕಾರ್ಯನಿರ್ವಹಿಸುತ್ತಿದ್ದು, ಕೊಡಗಿನ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ನಿಯಮಗಳನ್ನು ಪಾಲಿಸಿಕೊಂಡು ಬಂದಿದೆ.
ಹೋಂಸ್ಟೇ ನಡೆಸುತ್ತಿರುವವರಿಗೆ ಸದಸ್ಯತ್ವವನ್ನು ಪಡೆದು ಪ್ರವಾಸೋದ್ಯಮದ ನಿಯಮ ಪಾಲಿಸುವಂತೆ ಮನವಿ ಮಾಡಿಕೊಳ್ಳುತ್ತಾ ಬಂದಿದ್ದೇವೆ. ಆದರೆ ಹಲವು ಹೋಂಸ್ಟೇಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿವೆ. ಈ ಹೋಂಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿಯಮ ರಚನೆಯಾಗದೆ ಇರುವುದರಿಂದ ಪೊಲೀಸರು ಕ್ರಮಕ್ಕೆ ಮುಂದಾಗುತ್ತಿಲ್ಲ. ಆದ್ದರಿಂದ ಸರಕಾರ ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ಸೂಕ್ತ ರೀತಿಯ ಹೋಂಸ್ಟೇ ನಿಯಮವನ್ನು ರೂಪಿಸಬೇಕೆಂದು ಮೋಂತಿ ಗಣೇಶ್ ಆಗ್ರಹಿಸಿದರು. ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ ಕೆ.ಎಂ.ಕರುoಬಯ್ಯ ಅವರು ಮಾತನಾಡಿ ಜಿಲ್ಲೆಯಲ್ಲಿ 2478 ಹೋಂಸ್ಟೇಗಳು ಪರವಾನಗಿ ಪಡೆದುಕೊಂಡಿವೆ, 2 ರಿಂದ 3 ಸಾವಿರ ಹೋಂಸ್ಟೇಗಳು ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿವೆ. ಇವುಗಳ ವಿರುದ್ಧ ಪ್ರವಾಸೋದ್ಯಮ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿ ಎಂದರು. ಕೊಡಗಿನಲ್ಲಿ ಪ್ರವಾಸೋದ್ಯಮ ದೊಡ್ಡ ಮಟ್ಟದಲ್ಲಿ ಬೆಳೆದಿದ್ದು, ಸಮಸ್ಯೆಗಳ ನಿವಾರಣೆಗೆ ಪ್ರವಾಸೋದ್ಯಮ ಇಲಾಖೆಗೆ ಉಪ ನಿರ್ದೇಶಕರ ಅಗತ್ಯವಿದೆ. ಆದ್ದರಿಂದ ಸರಕಾರ ತಕ್ಷಣ ಉಪ ನಿರ್ದೇಶಕರನ್ನು ನೇಮಿಸಿ ಪ್ರವಾಸೋದ್ಯಮ ನಿಯಮ ರೂಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಮೀನಾ ಕಾರ್ಯಪ್ಪ ಅವರು ಮಾತನಾಡಿ ಅಸೋಸಿಯೇಷನ್ ನಿರಂತರ ಸಭೆಗಳನ್ನು ನಡೆಸುತ್ತಾ ಹೋಂಸ್ಟೇ ಮಾಲೀಕರು ನಿಯಮ ಪಾಲಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಜಿಲ್ಲೆಯಲ್ಲಿ ಅನಧಿಕೃತ ಹೋಂಸ್ಟೇಗಳು ಕಾರ್ಯನಿರ್ವಹಿಸುತ್ತಿವೆ, ಇವುಗಳ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಅಸೋಸಿಯೇಷನ್ ನ ಉಪಾಧ್ಯಕ್ಷ ನವೀನ್ ಅಂಬೆಕಲ್ ಮಾತನಾಡಿ ಕುಟ್ಟ ಹೋಂಸ್ಟೇ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಶೀಘ್ರ ಸತ್ಯಾಂಶ ಹೊರ ಬೀಳಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಅಧ್ಯಕ್ಷ ಮದನ್ ಸೋಮಣ್ಣ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*

ಏಪ್ರಿಲ್ 24, 2026

*ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*

ಏಪ್ರಿಲ್ 24, 2026

*ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ನಿಂದ ವಿವಿಧ ಕ್ರೀಡಾಕೂಟ*

ಏಪ್ರಿಲ್ 24, 2026

*ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*

ಏಪ್ರಿಲ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.24 : ಅಖಿಲ ಅಮ್ಮ ಕೊಡವ ಸಮಾಜದ ವತಿಯಿಂದ ಬಾನಂಡ ಕುಟುಂಬದ ಸಹಯೋಗದಲ್ಲಿ ಮೇ1 ರಿಂದ…

*ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ನಿಂದ ವಿವಿಧ ಕ್ರೀಡಾಕೂಟ*

ಏಪ್ರಿಲ್ 24, 2026

*ವೀರಭದ್ರ ಹಾಗೂ ಸಪರಿವಾರ ದೇವರುಗಳ ದೇವಾಲಯ ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ,ಭಕ್ತಿಯಿಂದ ನೆರವೇರಿತು*

ಏಪ್ರಿಲ್ 24, 2026

*ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ*

ಏಪ್ರಿಲ್ 24, 2026

*ಕುಟ್ಟ ಹೋಂಸ್ಟೇ ಪ್ರಕರಣ ಎಚ್ಚರಿಕೆಯ ಗಂಟೆ : ಸೂಕ್ತ ನಿಯಮ ರೂಪಿಸಲು ಹೋಂಸ್ಟೇ ಅಸೋಸಿಯೇಷನ್ ಆಗ್ರಹ*

ಏಪ್ರಿಲ್ 24, 2026

*’ನಮ್ಮ ಗ್ರೋಮೋರ್’ 1200ನೇ ಮಳಿಗೆ ಉದ್ಘಾಟನೆ*

ಏಪ್ರಿಲ್ 23, 2026

*ಕೊಡಗು ವಿದ್ಯಾಲಯದಲ್ಲಿ ಸಮಾಪನಗೊಂಡ ಸಮಾಗಮ ಬೇಸಿಗೆ ಶಿಬಿರ*

ಏಪ್ರಿಲ್ 23, 2026

*10ನೇ ತರಗತಿ ಫಲಿತಾಂಶ : ರೆನಿತ್ ಸಾಧನೆ*

ಏಪ್ರಿಲ್ 23, 2026

*ರೋಟರಿ ವುಡ್ಸ್ ನಿಂದ ಚಾಮಾ೯ಡಿ ಬೈಕ್ ರೈಡ್*

ಏಪ್ರಿಲ್ 23, 2026

*ಕೊಡಗು : 10ನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು*

ಏಪ್ರಿಲ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.