Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ*
  • *ಕಿರಣ್ ಗೆ ಕಾಯಕರತ್ನ ಪ್ರಶಸ್ತಿ*
  • *ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಹಾಗೂ ಸಾಹಿತ್ಯ ಪರಿಷತ್ತು ಉಪಾಧ್ಯಕ್ಷರಾಗಿ ಗಣೇಶ್ ನಿಲವಾಗಿಲು ಅಧಿಕಾರ ಸ್ವೀಕಾರ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಹೆಗ್ಗಳ ಬೂದಿಮಾಳ ಶ್ರೀ ಕಿರಾತೇಶ್ವರ ದೇವರ ಮಹಾಪೂಜೆ*
  • *ಬೇಟೋಳಿ ರಾಮನಗರದಲ್ಲಿ ಯಶಸ್ವಿಯಾಗಿ ಜರುಗಿದ ವೈದಿಕ ಶಿಬಿರ*
  • *ಕೊಡಗು : ಮನೆ ಮನೆ ಗಣತಿ ಕಾರ್ಯ ಶೀಘ್ರ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೇಂದ್ರ ಸರಕಾರಕ್ಕೆ ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲ : ಮಹಿಳಾ ಕಾಂಗ್ರೆಸ್ ಟೀಕೆ : 10 ಲಕ್ಷ ಸಹಿ ಸಂಗ್ರಹ*
  • *ಏ.29, 30 ಮತ್ತು ಮೇ 1 ರಂದು ಗುರುಭ್ಯೋ ಮುನೀಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ*
  • *ಕೊಡಗು ಪತ್ರಿಕಾ ಭವನ ಟ್ರಸ್ಟ್‌ನಿಂದ ಶೈಕ್ಷಣಿಕ ನೆರವು : ಅರ್ಜಿ ಆಹ್ವಾನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.28 ರಂದು ನಡೆಯುವ ಪುರುಷರ ಕ್ವಾರ್ಟರ್ ಫೈನಲ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇಂದ್ರ ಸರಕಾರಕ್ಕೆ ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲ : ಮಹಿಳಾ ಕಾಂಗ್ರೆಸ್ ಟೀಕೆ : 10 ಲಕ್ಷ ಸಹಿ ಸಂಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೇಂದ್ರ ಸರಕಾರಕ್ಕೆ ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲ : ಮಹಿಳಾ ಕಾಂಗ್ರೆಸ್ ಟೀಕೆ : 10 ಲಕ್ಷ ಸಹಿ ಸಂಗ್ರಹ*

ಏಪ್ರಿಲ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.27 NEWS DESK : ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವಲ್ಲಿ ವಿಫಲವಾಗಿದೆ. ಈ ವಿಚಾರದಲ್ಲಿ ಸುಳ್ಳು ಹೇಳುತ್ತಿರುವ ಕೇಂದ್ರ ಸರಕಾರ ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಯತ್ನ ಮಾಡುತ್ತಿದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಮಹಿಳಾ ಕಾಂಗ್ರೆಸ್ ನ ಕೊಡಗು ಉಸ್ತುವಾರಿ ಮಮತಾ ಗಟ್ಟಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಳಾ ಮೀಸಲಾತಿ ಪರ ಸುಮಾರು 10ಲಕ್ಷ ಸಹಿ ಸಂಗ್ರಹದ ಗುರಿಯೊಂದಿಗೆ ಮಹಿಳಾ ಕಾಂಗ್ರೆಸ್ ರಾಜ್ಯವ್ಯಾಪಿ ಅಭಿಯಾನ ನಡೆಸುತ್ತಿದೆ ಎಂದರು. ಭಾರತದ ರಾಜಕೀಯ ಮತ್ತು ಸಾಮಾಜಿಕ ಇತಿಹಾಸದಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡುವಲ್ಲಿ ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಿದೆ. ಆದರೆ ಮಹಿಳಾ ಸಬಲೀಕರಣಕ್ಕೆ ಯಾವುದೇ ಕೊಡುಗೆ ನೀಡದ ಪ್ರಧಾನಿ ಮೋದಿ ನೇತೃತ್ವದ ಸರಕಾರ ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ನೀಡಿದ ಮಹಿಳಾ ಸಬಲೀಕರಣದ ಕಾರ್ಯಕ್ರಮಗಳಿಂದಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ಇಂದು ಮಹಿಳೆಯರು ಸಮಾನ ಅವಕಾಶಗಳನ್ನು ಪಡೆಯುತ್ತಿದ್ದಾರೆ. ಇಂದಿರಾ ಗಾಂಧಿ ಅವರ ಪರಿಕಲ್ಪನೆಯ ಅಂಗನವಾಡಿಗಳಿಂದ ಲಕ್ಷಾಂತರ ಮಂದಿ ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಸ್ವಸಹಾಯ ಸಂಘಗಳ ರಚನೆಯಿಂದ ಮಹಿಳೆಯರು ಸಂಘಟಿತರಾಗಿದ್ದಾರೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಕಾಂಗ್ರೆಸ್ ಸರಕಾರ ಒತ್ತು ನೀಡಿದ ಪರಿಣಾಮವಾಗಿ ಇಂದು ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಸಾಗಿಸುತ್ತಿದ್ದಾರೆ. ರಾಜಕೀಯವಾಗಿಯೂ ಸಬಲರಾಗಿ ಅಧಿಕಾರದಲ್ಲಿದ್ದಾರೆ. ಆದರೆ ಮಹಿಳೆಯರ ಬಗ್ಗೆ ಕಾಳಜಿಯೇ ಇಲ್ಲದ ಈಗಿನ ಕೇಂದ್ರ ಸರಕಾರ ಶೇ.33 ಮೀಸಲಾತಿಯ ವಿಧೇಯಕಕ್ಕೆ ಸೋಲಾಗುತ್ತದೆ ಎಂದು ತಿಳಿದುಕೊಂಡೇ ಕ್ಷೇತ್ರ ಪುನರ್ ವಿಂಗಡಣೆಯ ವಿಚಾರವನ್ನು ಕೂಡ ಪ್ರಸ್ತಾಪಿಸಿತು. ಆದರೆ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಅಷ್ಟೊಂದು ಸುಲಭವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ಬಹಳ ಹಿಂದಿನಿಂದಲೂ ಮಹಿಳಾ ಸಮಾನತೆ ಮತ್ತು ಶೇ.33ರ ಮೀಸಲಾತಿ ಪರ ಇದ್ದು, ಅಧಿಕಾರದಲ್ಲಿ ಇದ್ದಾಗಲೆಲ್ಲ ಮಹಿಳಾ ಸಬಲೀಕರಣಕ್ಕೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಮಂತ್ರಿ ಮೋದಿ ಅವರಿಗೆ ಈ ದೇಶದ ಮಹಿಳೆಯರ ಬಗ್ಗೆ ನೈಜ ಕಾಳಜಿ ಇದ್ದರೆ ಸುಳ್ಳು ಹೇಳುವುದನ್ನು ಬಿಟ್ಟು ಶೀಘ್ರ ಶೇ.33 ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲಿ ಎಂದು ಮಮತಾ ಗಟ್ಟಿ ಒತ್ತಾಯಿಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮಹಿಳಾ ಮೀಸಲಾತಿ ಕುರಿತು ಸುಳ್ಳು ಆರೋಪಗಳನ್ನು ಮಾಡಿ ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುತ್ತಿದ್ದಾರೆ. ಕಾಂಗ್ರೆಸ್ ಹಾಕಿಕೊಟ್ಟ ಮಹಿಳಾ ಸಬಲೀಕರಣದ ಅಡಿಪಾಯವೇ ಶೋಭಾ ಅವರು ಇಂದು ಸಚಿವರಾಗಿ ಅಧಿಕಾರದಲ್ಲಿರಲು ಕಾರಣವಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಪ್ರಾಮಾಣಿಕತೆ ಇದ್ದರೆ ಮಹಿಳೆಯರ ಪರ ಧ್ವನಿ ಎತ್ತಲಿ ಎಂದು ಸವಾಲು ಹಾಕಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಅವರು ಮಾತನಾಡಿ ಶೇ.33ರ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲಾಗಿರುವುದರಿಂದ ಪಕ್ಷಾತೀತವಾಗಿ ದೇಶದ ಸರ್ವ ಮಹಿಳೆಯರಿಗೆ ಬೇಸರವಾಗಿದೆ. ಮಹಿಳಾ ಸಮಾನತೆಗಾಗಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಅಪಾರ ಕೊಡುಗೆಯನ್ನು ನೀಡಿದ್ದಾರೆ. ಪ್ರಸ್ತುತ ಇರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಿಳೆಯರ ಬಗ್ಗೆ ನೈಜ ಪ್ರೀತಿಯೇ ಇಲ್ಲವೆಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಜಿ.ಆರ್, ಪ್ರಧಾನ ಕಾರ್ಯದರ್ಶಿ ರೂಪ ಭೀಮಯ್ಯ, ಉಪಾಧ್ಯಕ್ಷೆ ಶೀಲಾ ಡಿಸೋಜ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಜೆ.ಫಿಲೋಮಿನಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ*

ಏಪ್ರಿಲ್ 27, 2026

*ಕಿರಣ್ ಗೆ ಕಾಯಕರತ್ನ ಪ್ರಶಸ್ತಿ*

ಏಪ್ರಿಲ್ 27, 2026

*ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಹಾಗೂ ಸಾಹಿತ್ಯ ಪರಿಷತ್ತು ಉಪಾಧ್ಯಕ್ಷರಾಗಿ ಗಣೇಶ್ ನಿಲವಾಗಿಲು ಅಧಿಕಾರ ಸ್ವೀಕಾರ*

ಏಪ್ರಿಲ್ 27, 2026

*ಕಿರಣ್ ಗೆ ಕಾಯಕರತ್ನ ಪ್ರಶಸ್ತಿ*

ಏಪ್ರಿಲ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.27 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತು ರಾಜ್ಯ ಘಟಕ…

*ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಹಾಗೂ ಸಾಹಿತ್ಯ ಪರಿಷತ್ತು ಉಪಾಧ್ಯಕ್ಷರಾಗಿ ಗಣೇಶ್ ನಿಲವಾಗಿಲು ಅಧಿಕಾರ ಸ್ವೀಕಾರ*

ಏಪ್ರಿಲ್ 27, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಹೆಗ್ಗಳ ಬೂದಿಮಾಳ ಶ್ರೀ ಕಿರಾತೇಶ್ವರ ದೇವರ ಮಹಾಪೂಜೆ*

ಏಪ್ರಿಲ್ 27, 2026

*ಬೇಟೋಳಿ ರಾಮನಗರದಲ್ಲಿ ಯಶಸ್ವಿಯಾಗಿ ಜರುಗಿದ ವೈದಿಕ ಶಿಬಿರ*

ಏಪ್ರಿಲ್ 27, 2026

*ಕೊಡಗು : ಮನೆ ಮನೆ ಗಣತಿ ಕಾರ್ಯ ಶೀಘ್ರ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 27, 2026

*ಕೇಂದ್ರ ಸರಕಾರಕ್ಕೆ ಮಹಿಳೆಯರ ಬಗ್ಗೆ ನೈಜ ಕಾಳಜಿ ಇಲ್ಲ : ಮಹಿಳಾ ಕಾಂಗ್ರೆಸ್ ಟೀಕೆ : 10 ಲಕ್ಷ ಸಹಿ ಸಂಗ್ರಹ*

ಏಪ್ರಿಲ್ 27, 2026

*ಏ.29, 30 ಮತ್ತು ಮೇ 1 ರಂದು ಗುರುಭ್ಯೋ ಮುನೀಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ*

ಏಪ್ರಿಲ್ 27, 2026

*ಕೊಡಗು ಪತ್ರಿಕಾ ಭವನ ಟ್ರಸ್ಟ್‌ನಿಂದ ಶೈಕ್ಷಣಿಕ ನೆರವು : ಅರ್ಜಿ ಆಹ್ವಾನ*

ಏಪ್ರಿಲ್ 27, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.28 ರಂದು ನಡೆಯುವ ಪುರುಷರ ಕ್ವಾರ್ಟರ್ ಫೈನಲ್ಸ್*

ಏಪ್ರಿಲ್ 27, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ : ಏ.27 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.