
ವಿರಾಜಪೇಟೆ ಏ.27 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಹಾಗೂ ಸಾಹಿತ್ಯ ಪರಿಷತ್ತುನ ರಾಜ್ಯ ಹಾಗೂ ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಪಾಟೀಲ್ ಪುಟ್ಟಪ್ಪ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾಗಿ ವಿರಾಜಪೇಟೆ ಉಪ ಖಜಾನೆಯ ಅಧೀಕ್ಷಕ ಗಣೇಶ್ ನಿಲವಾಗಿಲು ಅವರು ಅಧಿಕಾರ ಸ್ವೀಕರಿಸಿದರು. ಸಾಹಿತ್ಯ, ಚಿತ್ರಕಲೆ, ಸಂಗೀತ, ನಾಟಕ, ನೃತ್ಯ ಹಾಗೂ ಮೊದಲಾದ ಲಲಿತ ಕಲೆಗಳ ಸಮಾರಂಭ, ಕಾರ್ಯಾಗಾರ ಹಾಗೂ ಸಾಂಸ್ಕೃತಿಕ ಸಮ್ಮೇಳನಗಳನ್ನು ರಾಜ್ಯವಾರು ಹಮ್ಮಿಕೊಳ್ಳಲು ಮತ್ತು ಸಮಾಜಮುಖಿ ಕಾರ್ಯನಿರ್ವಹಣೆಗೆ ಆದೇಶದಲ್ಲಿ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ಗಣೇಶ್ ಅವರನ್ನು ಉಪಸ್ಥಿತರಿದ್ದ ಗಣ್ಯರು ಅಭಿನಂದಿಸಿದರು.









