Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದೆಮಹೇಶ್ವರ ವಿದ್ಯಾಸಂಸ್ಥೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ*
  • ಸಂಸ್ಥೆಯ ಬೆಳವಣಿಗೆ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಮುಖ್ಯ : ಎಂ.ಎಸ್.ಮುತ್ತಣ್ಣ
  • *ನಿಶಾನಿ ಮೇಲೇರಿ ಸಂಭ್ರಮಿಸಿದ ಚಿಣ್ಣರು*
  • *ಬಿಳಿಗೇರಿ ಶ್ರೀ ಅರ್ಧನಾರೀಶ್ವರ ದೇಗುಲದ ವಾರ್ಷಿಕ ಉತ್ಸವ : ಪೂಜಾ ಕಾರ್ಯಗಳೊಂದಿಗೆ ಉತ್ಸವಕ್ಕೆ ಚಾಲನೆ*
  • *ಕ್ಷೇತ್ರ ಪುನರ್ ವಿಂಗಡಣೆಯ ಹಿಂದೆ ಕೇಂದ್ರದ ದುರುದ್ದೇಶವಿದೆ : ಎಂ.ಲಕ್ಷ್ಮಣ್ ಟೀಕೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿಯ 6ನೇ ಆವೃತ್ತಿ : ಬಿಡ್ಡಿಂಗ್ ಪ್ರಕ್ರಿಯೆ*
  • *ಮೇ 1 ಕ್ಕೆ ಬಂಟರ ಭವನಕ್ಕೆ ಶಂಕು ಸ್ಥಾಪನೆ : ರೂ.15 ಕೋಟಿಯ ಯೋಜನೆ*
  • *ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಮೊದಲ ಸಾಹಿತ್ಯ ಸಮ್ಮೇಳನ : ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ : ಸ್ಪೀಕರ್ ಯು.ಟಿ.ಖಾದರ್*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ನಡೆಯುವ ಪುರುಷರ ಹಾಗೂ ಮಹಿಳೆಯರ ಸೆಮಿಫೈನಲ್ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.28 ರಂದು ನಡೆದ ಪುರುಷರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಿಶಾನಿ ಮೇಲೇರಿ ಸಂಭ್ರಮಿಸಿದ ಚಿಣ್ಣರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಿಶಾನಿ ಮೇಲೇರಿ ಸಂಭ್ರಮಿಸಿದ ಚಿಣ್ಣರು*

ಏಪ್ರಿಲ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.28 NEWS DESK  : ಆರು ಕಿ.ಮೀ.ಗಳ ಬಸ್‌ನಲ್ಲಿನ ಪಯಣ., ನಂತರ ಅಲ್ಲಿಂದ ಮೂರು ಕಿ.ಮೀ.ನಷ್ಟು ರಸ್ತೆಯಲ್ಲೇ ನಡಿಗೆ., ಬಳಿಕ ಕಾಡಿನೊಳಗೆ ಕಠಿಣ ಹಾದಿಯಲಿ ಮೂರು ಕಿ.ಮೀ.ಗಳಷ್ಟು ನಡಿಗೆ., ಕೊನೆಗೆ ತಲಪಿದ್ದು ನಿಸರ್ಗದ ಸಿರಿಯ ತುತ್ತ ತುದಿಯ ನಿಶಾನಿ ಮೊಟ್ಟೆಗೆ..! ಇಲ್ಲಿ ನಡೆದದ್ದು ಹವ್ಯಾಸಿ ಚಾರಣಿಗರಲ್ಲ., ಪುಟಾಣಿ ಮಕ್ಕಳು.., ಬೆಟ್ಟವನ್ನೇರಿ ಪ್ರಕೃತಿಯ ಸೊಬಗನ್ನು ಸವಿದ ಮಕ್ಕಳ ಸಂಭ್ರಮ ಹೇಳತೀರದ್ದಾಗಿತ್ತು., ದಣಿವು ಎಂಬ ಪದದ ಅರ್ಥವೇ ಇಲ್ಲಿ ಮಾಯವಾಗಿತ್ತು..! ಈ ಒಂದು ಸುಂದರ ಚಿತ್ರಣ ಕಂಡುಬಂದಿದ್ದು ಮಡಿಕೇರಿಯ ವಾಂಡರರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಏರ್ಪಡಿಸಲಾಗಿದ್ದ ಮಕ್ಕಳ ಚಾರಣ ಕಾರ್ಯಕ್ರಮದಲ್ಲಿ., ವಾಂಡರ‍್ರ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ. ಶಂಕರ್ ಸ್ವಾಮಿ ಸ್ಮರಣಾರ್ಥ ನಡೆಯುತ್ತಿರುವ ಮಕ್ಕಳ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರದ ಅಂಗವಾಗಿ ಮಕ್ಕಳಿಗೆ ನಿಶಾನಿ ಮೊಟ್ಟೆಗೆ ಚಾರಣ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕ್ರೀಡಾಂಗಣದಿಂದ ೧೧೫ ಮಂದಿಯನ್ನು ಹೊತ್ತುಕೊಂಡು ಹೊರಟ ಕೊಡಗು ವಿದ್ಯಾಲಯದ ಎರಡು ಬಸ್‌ಗಳು ಮದೆನಾಡು ಬಳಿಯ ಎರಡನೇ ಮೊಣ್ಣಂಗೇರಿಯಲ್ಲಿ ಮಕ್ಕಳನ್ನು ಇಳಿಸಿತು. ಅಲ್ಲಿಂದ ರಸ್ತೆ ಮೂಲಕ ಮೊಣ್ಣಂಗೇರಿ ಶಾಲೆವರೆಗೆ ನಡೆದು ಅಲ್ಲಿ ಕೊಂಚ ವಿಶ್ರಾಂತಿ ಪಡೆದು ಮುಂದಕ್ಕೆ ಸಾಗಿ ‘ಕುಡಿಯ ಹಾರಿದ ಕಲ್ಲಿನ’ ಪ್ರದೇಶದಲ್ಲಿ ಸೇರಿದರು. ಇಲ್ಲಿಗೆ ಮೂರು ಕಿ.ಮೀ. ಕ್ರಮಿಸಿಯಾಗಿತ್ತು. ಲಘು ಪಾನೀಯ, ತಿನಿಸುಗಳಾದ ಬಳಿಕ ಯೋಗ ಗುರು ಕೆ.ಕೆ. ಮಹೇಶ್ ಕುಮಾರ್ ಕುಡಿಯ ಹಾರಿದ ಕಲ್ಲಿನ ವಿಶೇಷತೆ ಬಗ್ಗೆ ಮಕ್ಕಳಿಗೆ ವಿವರಿಸಿ ಮಾಹಿತಿ ನೀಡಿದರು. ಕಠಿಣ ಮಾರ್ಗದ ಪಯಣ ::  ಇಲ್ಲಿಂದ ಕಠಿಣ ಹಾದಿಯ ಪಯಣ ಆರಂಭವಾಯಿತು. ಕೆಲವು ಪುಟಾಣಿಗಳು ಕಡಿದಾದ ಮಾರ್ಗವನ್ನು ಏರಲಾಗದೆ ಹಿಂದಕ್ಕೆ ಸರಿದರು. ಕೆಲವು ಪೋಷಕರು ಹಿಂದೇಟು ಹಾಕಿದರು. ಆದರೆ, ಇನ್ನುಳಿದ ಎಲ್ಲರೂ ಉತ್ಸಾಹ ಭರಿತರಾಗಿ ನೋಡ ನೋಡುತ್ತಿದ್ದಂತೆಯೇ ಬೆಟ್ಟದ ತುತ್ತ ತುದಿಗೆ ಏರಿಯೇಬಿಟ್ಟರು. ದೂರದಿಂದ ನೋಡುವಾಗ ಬೆಟ್ಟದ ಮೇಲೆ ಸಾಲು ಸಾಲಾಗಿ ಬಣ್ಣ ಬಣ್ಣದ ಹೂಗಳು ಅರಳಿ ನಗುತ್ತಿರುವಂತೆ ಭಾಸವಾಗುತ್ತಿತ್ತು..! 70ರ ಹರಯದವರ ಉತ್ಸಾಹ..! ::  ಚಾರಣದಲ್ಲಿ ಮಕ್ಕಳೊಂದಿಗೆ ಪೋಷಕರು, ತರಬೇತುದಾರರೂ ಭಾಗವಹಿಸಿದ್ದರು. ಅದರಲ್ಲೂ ೭೦ವರ್ಷ ದಾಟಿದ ವಾಂಡರರ‍್ಸ್ ಕ್ಲಬ್ ಅಧ್ಯಕ್ಷ ಕೋಟೇರ ಮುದ್ದಯ್ಯ ಹಾಗೂ ಸಂಚಾಲಕ ಬಾಬು ಸೋಮಯ್ಯ ಅವರುಗಳು ಕೂಡ ತಾವೂ ಯಾರಿಗೂ ಕಡಿಮೆ ಇಲ್ಲವೆಂಬಂತೆ, ಮಕ್ಕಳನ್ನು ನಾಚಿಸುವಂತೆ ಬೆಟ್ಟವನ್ನೇರಿ ಇಳಿದು ಅಚ್ಚರಿ ಮೂಡಿಸಿದರು..! :: ಭೋಜನದ ವ್ಯವಸ್ಥೆ ::  ಚಾರಣದಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಮೊಣ್ಣಂಗೇರಿಯ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯವರಿಂದ ಭಜನಾ ಮಂಡಳಿಯಲ್ಲಿ ವಿಶ್ರಮಿಸಲು ಅವಕಾಶ ಮಾಡಿಕೊಡಲಾಯಿತು. ಮಧ್ಯಾಹ್ನದ ವೇಳೆ ಭೋಜನಕ್ಕೆ ಸ್ಥಳೀಯರಾದ ತಿರುಮಲೇಶ್ ಅವರ ಮನೆಯ ಪ್ರಾಂಗಣದಲ್ಲಿ ವ್ಯವಸ್ಥೆ ಮಾಡಿ ಸಹಕರಿಸಿದರು. :: ನೀರಾಟ ಆಡಿದರು..! ::  ಬೆಟ್ಟದಿಂದ ಇಳಿದ ಬಳಿಕ ಜೋಡುಪಾಲದಲ್ಲಿರುವ ಜಲಪಾತದ ಬಳಿ ನೀರಿಗಿಳಿದ ಮಕ್ಕಳು ನೀರಾಟವಾಡಿ ಸಂಭ್ರಮಿಸಿದರು. ಬೆಳಿಗ್ಗೆಯಿಂದ ಸಂಜೆವರೆಗೆ ನಡೆದುದೆಲ್ಲವನ್ನೂ ಬದಿಗಿಟ್ಟು ನೀರಿನಲ್ಲಿ ಆಟವಾಡಿ ಉಲ್ಲಾಸಭರಿತರಾದರು..! ಬೆಟ್ಟ ಹತ್ತಿಳಿದ ಸಂದರ್ಭ ಕಾಡಿನಲ್ಲಿ ಸಿಕ್ಕ ವಿವಿಧ ಕಾಡು ಹಣ್ಣಿನ ರುಚಿಯನ್ನೂ ಸವಿದರು..! ಸ್ಥಳೀಯರಾದ ವೆಂಕಪ್ಪ ಅವರು ಮಾರ್ಗದರ್ಶಕರಾಗಿ ಮಕ್ಕಳನ್ನು ಮುನ್ನಡೆಸಿದರೆ, ವಾಂಡ ರರ‍್ಸ್ ತರಬೇತುದಾರರುಗಳಾದ ಬೊಪ್ಪಂಡ ಶಾಂ ಪೂಣಚ್ಚ, ಕೋಟೇರ ನಾಣಯ್ಯ, ಕುಡೆಕಲ್ ಸಂತೋಷ್, ಲೋಕೇಶ್ ನಾಯ್ಡು, ಪೋಷಕರಾದ ಜನಾರ್ದನ್ ಇತರರು ಮಕ್ಕಳ ಬಗ್ಗೆ ಕಾಳಜಿ ವಹಿಸಿದ್ದರು. :: ಆಪತ್ಭಾಂಧವರು..! ::  ಚಾರಣದ ಸಂದರ್ಭದಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟ ಸರಬರಾಜು ಮಾಡಲು ಬಂದಿದ್ದ ವಾಹನವೊಂದು ಸಂಜೆ ಹಿಂತಿರುಗುವ ವೇಳೆಗೆ ಮಾರ್ಗ ತಪ್ಪಿ ಇಳಿಜಾರು ಪ್ರದೇಶಕ್ಕೆ ಹೋಗಿ ಸಿಲುಕಿಕೊಂಡಿತು. ಎಷ್ಟೇ ಪ್ರಯತ್ನಪಟ್ಟರೂ ಮಣ್ಣು ರಸ್ತೆಯಲ್ಲಿ ವಾಹನ ಮುಂದೆ ಸಾಗುತ್ತಿರಲಿಲ್ಲ. ಈ ಸಂದರ್ಭದಲ್ಲಿ ಅಲ್ಲಿನ ಮರಾಟಿ ನಾಯಕ ಸಮುದಾಯಕ್ಕೆ ಸೇರಿದ ಚಂದಪ್ಪ, ಕೆ.ಕೆ. ಲೋಕೇಶ್, ಕೆ.ಎಸ್. ಅನುರಾಧ, ಪುನಿತ್ ಹಾಗೂ ವೇದಾವತಿ ಅವರುಗಳು ಹಗ್ಗ ಬಳಸಿ ವಾಹನವನ್ನು ಎಳೆದು ಮುಖ್ಯ ರಸ್ತೆಗೆ ಸರಿಸುವಲ್ಲಿ ಸಹಕಾರಿಯಾದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮದೆಮಹೇಶ್ವರ ವಿದ್ಯಾಸಂಸ್ಥೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ*

ಏಪ್ರಿಲ್ 28, 2026

ಸಂಸ್ಥೆಯ ಬೆಳವಣಿಗೆ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಮುಖ್ಯ : ಎಂ.ಎಸ್.ಮುತ್ತಣ್ಣ

ಏಪ್ರಿಲ್ 28, 2026

*ಬಿಳಿಗೇರಿ ಶ್ರೀ ಅರ್ಧನಾರೀಶ್ವರ ದೇಗುಲದ ವಾರ್ಷಿಕ ಉತ್ಸವ : ಪೂಜಾ ಕಾರ್ಯಗಳೊಂದಿಗೆ ಉತ್ಸವಕ್ಕೆ ಚಾಲನೆ*

ಏಪ್ರಿಲ್ 28, 2026

ಸಂಸ್ಥೆಯ ಬೆಳವಣಿಗೆ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಮುಖ್ಯ : ಎಂ.ಎಸ್.ಮುತ್ತಣ್ಣ

ಏಪ್ರಿಲ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.28 NEWS DESK : ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಾ ಮುಂದಕ್ಕೆ ಸಾಗಲು ಅಲ್ಲಿನ ಸಿಬ್ಬಂದಿಗಳ ನಿಷ್ಠಾವಂತ…

*ನಿಶಾನಿ ಮೇಲೇರಿ ಸಂಭ್ರಮಿಸಿದ ಚಿಣ್ಣರು*

ಏಪ್ರಿಲ್ 28, 2026

*ಬಿಳಿಗೇರಿ ಶ್ರೀ ಅರ್ಧನಾರೀಶ್ವರ ದೇಗುಲದ ವಾರ್ಷಿಕ ಉತ್ಸವ : ಪೂಜಾ ಕಾರ್ಯಗಳೊಂದಿಗೆ ಉತ್ಸವಕ್ಕೆ ಚಾಲನೆ*

ಏಪ್ರಿಲ್ 28, 2026

*ಕ್ಷೇತ್ರ ಪುನರ್ ವಿಂಗಡಣೆಯ ಹಿಂದೆ ಕೇಂದ್ರದ ದುರುದ್ದೇಶವಿದೆ : ಎಂ.ಲಕ್ಷ್ಮಣ್ ಟೀಕೆ*

ಏಪ್ರಿಲ್ 28, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿಯ 6ನೇ ಆವೃತ್ತಿ : ಬಿಡ್ಡಿಂಗ್ ಪ್ರಕ್ರಿಯೆ*

ಏಪ್ರಿಲ್ 28, 2026

*ಮೇ 1 ಕ್ಕೆ ಬಂಟರ ಭವನಕ್ಕೆ ಶಂಕು ಸ್ಥಾಪನೆ : ರೂ.15 ಕೋಟಿಯ ಯೋಜನೆ*

ಏಪ್ರಿಲ್ 28, 2026

*ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಮೊದಲ ಸಾಹಿತ್ಯ ಸಮ್ಮೇಳನ : ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ : ಸ್ಪೀಕರ್ ಯು.ಟಿ.ಖಾದರ್*

ಏಪ್ರಿಲ್ 28, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ನಡೆಯುವ ಪುರುಷರ ಹಾಗೂ ಮಹಿಳೆಯರ ಸೆಮಿಫೈನಲ್ ಪಂದ್ಯಗಳು*

ಏಪ್ರಿಲ್ 28, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.28 ರಂದು ನಡೆದ ಪುರುಷರ ಕ್ವಾರ್ಟರ್ ಫೈನಲ್ಸ್ ನಲ್ಲಿ ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 28, 2026

*ಕಾಡಾನೆ ದಾಳಿಗೆ ಹಸು ಬಲಿ*

ಏಪ್ರಿಲ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.