
ಗೋಣಿಕೊಪ್ಪ ಮೇ 6 NEWS DESK : “ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ರಾಷ್ಟ್ರೀಯ ಕಾರ್ಯಕ್ರಮ ಸಂಯೋಜಕ ನಿರ್ದೇಶಕರಾಗಿ ಬಿ.ಎನ್ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ. ಸೀನಿಯರ್ ಚೇಂಬರ್ ಇಂಟನ್ರ್ಯಾಷನಲ್ ರಾಷ್ಟ್ರೀಯ ಅಧ್ಯಕ್ಷ ವಾಸುದೇವನ್ ನೇಮಕಾತಿ ಆದೇಶವನ್ನು ನೀಡಿದ್ದಾರೆ. ಕೇರಳದ ಕ್ಯಾಲಿಕೆಟ್ ನಲ್ಲಿ ಪ್ಯಾರಾ ಮೌಂಟ್ ಟವರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದೇಶವನ್ನು ರಾಷ್ಟ್ರೀಯ ಅಧ್ಯಕ್ಷರು ವಲಯ ಅಧ್ಯಕ್ಷರ ಸಮ್ಮುಖದಲ್ಲಿ ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಬಿ.ಎನ್.ಪ್ರಕಾಶ್ ಅವರು ಗೋಣಿಕೊಪ್ಪ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ 2025-26ನೇ ಸಾಲಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗೋಣಿಕೊಪ್ಪಲು ಗ್ರಾಮ ಪಂಚಾಯಿತಿಯ ಸದಸ್ಯರಾಗಿ, ಪೊನ್ನಂಪೇಟೆ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಅಧ್ಯಕ್ಷರಾಗಿ, ಚೇಂಬರ್ ಆಫ್ಕಾಮರ್ಸ್ ನಿರ್ದೇಶಕರಾಗಿ, ಮಚೆರ್ಂಟ್ ಬ್ಯಾಂಕ್ ನಿರ್ದೇಶಕರಾಗಿ ಮತ್ತು ಇತರ ಪ್ರಮುಖವಾದ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.









