
ಮಡಿಕೇರಿ NEWS DESK ಮೇ 8 : ಮುಂಬರುವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ಸಂಭವನೀಯ ಭೂಕುಸಿತ, ನದಿ ಪ್ರವಾಹದಂತಹ ವಿಕೋಪದ ಸಮಯದಲ್ಲಿ ಜನರ ಪ್ರಾಣ, ಆಸ್ತಿ ರಕ್ಷಿಸುವ ನಿಟ್ಟಿನಲ್ಲಿ ಕ್ಷಿಪ್ರವಾಗಿ ಸ್ಪಂದಿಸುವ ಸಲುವಾಗಿ ಮತ್ತು ಇತರ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಪೊಲೀಸ್, ಜಿಲ್ಲಾ ವಿಪತ್ತು ನಿಯಂತ್ರಣ ಕೇಂದ್ರ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳ ಸಭೆ ಕರೆದು ಜಿಲ್ಲೆಯಲ್ಲಿ ತುರ್ತು ಸಂದರ್ಭದಲ್ಲಿ ಲಭ್ಯವಿರುವ ಜೀವ ರಕ್ಷಣಾ ಸಾಮಗ್ರಿಗಳು, ವಾಹನಗಳು, ಸ್ವಯಂಸೇವಕರ ಸಹಕಾರ, ಬದಲಿ ರಸ್ತೆ ಮಾರ್ಗಗಳ ಗುರುತಿಸುವಿಕೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.









