

ಮಡಿಕೇರಿ NEWS DESK ಮೇ 15 : ವೈಯುಕ್ತಿಕ ಕಾರಣದಿಂದಾಗಿ ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೋಳಿಬೈಲು ವೆಂಕಟೇಶ್ ರವರು ಇತ್ತೀಚಿಗೆ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಇಂದು ಭಾಗಮಂಡಲಕ್ಕೆ ಕಾರ್ಯನಿಮಿತ್ತ ಆಗಮಿಸಿದ್ದ ಮಾನ್ಯ ಶಾಸಕರು, ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ವೆಂಕಟೇಶ್ ರವರೊಂದಿಗೆ ಮಾತನಾಡಿ, ಪಕ್ಷದ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುವಂತೆ ಕೇಳಿಕೊಂಡ ಮೇರೆಗೆ, ಶಾಸಕರ ಹಾಗೂ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ತಮ್ಮ ನಿಲುವನ್ನು ಬದಲಾಯಿಸಿ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.









