Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ*
  • *ಮೇ 19 ರಂದು ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ*
  • *ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*
  • *2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*
  • *ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*
  • *ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*
  • *ರಾಯ್ ಡೇವಿಡ್ ನಿಧನ*
  • *ಜಮೀಲಗೆ ಮಹಾತಾಯಿ ಪ್ರಶಸ್ತಿ ಪ್ರದಾನ*
  • *ವಿದ್ಯಾರ್ಥಿಗಳಿಗೆ ಪುಸ್ತಕ ಉತ್ತಮ ಸಹಚರರಾಗಿರಬೇಕು : ಪ್ರೊ.ಬಿ.ನಂಜುಂಡ ಸ್ವಾಮಿ*
  • *ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*

ಮೇ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಮೇ 16 NEWS DESK : ಮಡಿಕೇರಿ ತಾಲ್ಲೂಕಿನ 12ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 20 ರಂದು ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ಕಡಂಗ ಗ್ರಾಮದ ಸರ್ಕಾರಿ ಹಿರಿಯ  ಪ್ರಾಥಮಿಕ ಶಾಲಾ ಮೈದಾನದಲ್ಲಿ  ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಸಮ್ಮೇಳನದ ಕುರಿತು ಮಾಹಿತಿ ನೀಡಿದರು. ಜಾನಪದ ತಜ್ಞರಾದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ, ಕೊಡವ ಕೌಟುಂಬಿಕ ಹಾಕಿಯ ಸಂಸ್ಥಾಪಕರಾದ ಪಾಂಡಂಡ ಕುಟ್ಟಣಿ ಸಭಾ ಮಂಟಪದಲ್ಲಿ ನಡೆಯಲಿದೆ. *11 ಪ್ರವೇಶ ದ್ವಾರಗಳು* ಕನ್ನಡದ ಹಬ್ಬದ ಅಂಗವಾಗಿ ಕಡಂಗ ಪಟ್ಟಣದಲ್ಲಿ 11 ಮಂದಿ ಹಿರಿಯರ ನೆನಪಿನ ದ್ವಾರಗಳನ್ನು ರಚಿಸಲಾಗಿದೆ. ಅವುಗಳೆಂದರೆ ಕುಲ್ಲಚಂಡ ದಿ.ಲಾಲು ಮೇದಯ್ಯ ಮತ್ತು ದಿ.ದೇವಕ್ಕ ಪ್ರವೇಶ ದ್ವಾರ, ಕೋಡಿರ ದಿ.ಮನು ಮೊಣ್ಣಪ್ಪ ನೆನಪಿನ ದ್ವಾರ, ದೇಯಿರ ಕುಟುಂಬಸ್ಥರ ನೆನಪಿನ ಪ್ರವೇಶ ದ್ವಾರ, ಮೇದುರ ದಿ.ನಂಜಪ್ಪ ಹಾಗೂ ದಿ.ಸೀತಮ್ಮ ನೆನಪಿನ ಪ್ರವೇಶ ದ್ವಾರ, ಕೋಡಿರ ದಿ.ಮುತ್ತಣ್ಣ ಹಾಗೂ ದಿ.ಸುನಂಧಿ ಮುತ್ತಣ್ಣ ನೆನಪಿನ ಪ್ರವೇಶ ದ್ವಾರ, ಚಲ್ಮಂಡ ದಿ.ಸುಬ್ಬಯ್ಯ ಹಾಗೂ ದಿ.ಕಾಮವ್ವ ನೆನಪಿನ ಪ್ರವೇಶ ದ್ವಾರ, ನಂಬಿಯಪಂಡ ದಿ.ಅಪ್ಪಣ್ಣ ಹಾಗೂ ದಿ.ಕಾಮವ್ವ ನೆನಪಿನ ಪ್ರವೇಶ ದ್ವಾರ, ಮುಕ್ಕಾಟಿರ ದಿ.ಚಂಗಪ್ಪ ಹಾಗೂ ದಿ.ಕಾಂಜವ್ವ ನೆನಪಿನ ಪ್ರವೇಶ ದ್ವಾರ, ಅನ್ನಂಬಿರ ದಿ. ಉತ್ತಪ್ಪ ಹಾಗೂ ದಿ.ಪಾರ್ವತಿ ನೆನಪಿನ ಪ್ರವೇಶ ದ್ವಾರ ಮತ್ತು ದಿ.ಪಾಲಚಂಡ ಮಿಟ್ಟು ಕಾವೇರಪ್ಪ ಹಾಗೂ ದಿ.ಬೋಜಕ್ಕಿ ನೆನಪಿನ ಪ್ರವೇಶ ದ್ವಾರಗಳನ್ನು ಅಂದು ಬೆಳಗ್ಗೆ ಉದ್ಘಾಟಿಸಲಾಗುತ್ತದೆ. ಇದರೊಂದಿಗೆ ಶಾಲೆಗೆ ಸ್ಥಳ ದಾನ ಮಾಡಿದ ಕಣಿಯರ ದಿ.ಬೆಳ್ಯಪ್ಪ ಮತ್ತು ಕಣಿಯರ ದಿ.ಜೋಯಪ್ಪ ನೆನಪಿನ ದ್ವಾರ ಮತ್ತು ರಾವ್ ಬಹದ್ದೂರ್ ಕೋಡಿರ ಟಿ.ಉತ್ತಪ್ಪ ಅವರ ನೆನಪಿನ ಮಹಾದ್ವಾರವನ್ನು ಉದ್ಘಾಟಿಸಲಾಗುತ್ತದೆಂದರು. ಇದೇ ಸಂದರ್ಭ ನಡಿಕೇರಿಯಂಡ ಚಿಣ್ಣಪ್ಪ ನೆನಪಿನ ಪುಸ್ತಕ ಮಳಿಗೆ, ದಿ.ಪಾಲಚಂಡ ಪೊನ್ನು ತಿಮ್ಮಯ್ಯ ನೆನಪಿನ ಸ್ತ್ರೀಶಕ್ತಿ ಮಳಿಗೆಗಳನ್ನು ಗಣ್ಯರು ಉದ್ಘಾಟಿಸಲಿದ್ದಾರೆಂದರು. *ಸಮ್ಮೇಳನಾಧ್ಯಕ್ಷರ ಮೆರವಣಿಗೆ* ಸಮ್ಮೇಳನದಂದು ಬೆಳಗ್ಗೆ 9ಗಂಟೆಗೆ ಕಡಂಗದ ವಿಜಯ ಪ್ರೌಢಶಾಲೆಯಿಂದ ಸಮ್ಮೇಳನ ನಡೆಯುವ ಜಿಎಂಪಿ ಶಾಲಾ ಮೈದಾನದವರೆಗೆ ವಿವಿಧ ಕಲಾ ತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷ ಐತಿಚಂಡ ರಮೇಶ್ ಉತ್ತಪ್ಪರ ಮೆರವಣಿಗೆಯನ್ನು ಆಯೋಜಿಸಿರುವುದಾಗಿ ಮಾಹಿತಿಯನ್ನಿತ್ತರು. *ಉದ್ಘಾಟನೆ*
 ಕನ್ನಡ ಸಾಹಿತ್ಯ ಸಮ್ಮೇಳನದ ಸಭಾ ಕಾರ್ಯಕ್ರಮವನ್ನು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಐತಿಚಂಡ ರಮೇಶ್ ಉತ್ತಪ್ಪ ವಹಿಸಲಿದ್ದಾರೆ. ನಿಕಟ ಪೂರ್ವ ಸಮ್ಮೇಳನಾಧ್ಯಕ್ಷರಾದ ಡಾ.ವಿಜಯ್ ಪೂಣಚ್ಚ ತಂಬಂಡ ಉಪಸ್ಥಿತರಿರಲಿದ್ದಾರೆ. ಸ್ಮರಣ ಸಂಚಿಕೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಕಡಂಗದ ಸಿ.ವಿ.ಮೊಹಮ್ಮದ್ ನಿಝಾರ್ ಸಖಾಫಿ ಅವರು ರಚಿಸಿರುವ “ಕಡಂಗ ನೆನಪಿನಂಗಳದಲ್ಲಿ” ಪುಸ್ತಕವನ್ನು ಅನಾವರಣಗೊಳಿಸಲಿದ್ದಾರೆಂದು ವಿವರಗಳನ್ನು ನೀಡಿದರು. ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 1 ಗಂಟೆಗೆ ಕನ್ನಡ ಗೀತ ಗಾಯನ, ಮಧ್ಯಾಹ್ನ 3 ಗಂಟೆಗೆ ಕವಿಗೋಷ್ಠಿ, ವಿಚಾರಗೋಷ್ಠಿ ನಡೆಯಲಿದೆ. *ಸನ್ಮಾನ* ಸಮ್ಮೇಳನದ ಬಹಿರಂಗ ಅಧಿವೇಶನ ಮಧ್ಯಾಹ್ನ 3.30 ಗಂಟೆಗೆ ತಾಲ್ಲೂಕು ಕಸಾಪ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬಳಿಕ 15 ಮಂದಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಸಂಜೆ 5 ಗಂಟೆಗೆ ಸಮಾರೋಪ ನಂತರ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಟಿ.ಪಿ.ರಮೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕಾರ್ಯದರ್ಶಿ ಲಕ್ಷು ಸೋಮಣ್ಣ ಗುಡ್ಡೇರ, ಸಮ್ಮೇಳನದ ಉಪಾಧ್ಯಕ್ಷರು ಹಾಗೂ ಹಣಕಾಸು ಸಮಿತಿ ಅಧ್ಯಕ್ಷ ಕೋಡೀರ ವಿನೋದ್ ನಾಣಯ್ಯ, ಸಾಂಸ್ಕøತಿಕ ಸಮಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ಸಮ್ಮೇಳನದ ಆಹಾರ ಮತ್ತು ವೇದಿಕೆ ಸಮಿತಿ ಪದಾಧಿಕಾರಿ ಅಚ್ಚಾಂಡಿರ ತಾರಾ ಉದಯ ಉಪಸ್ಥಿತರಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ*

ಮೇ 16, 2026

*ಮೇ 19 ರಂದು ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ*

ಮೇ 16, 2026

*ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*

ಮೇ 16, 2026

*ಮೇ 19 ರಂದು ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ*

ಮೇ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 16 NEWS DESK  : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರ ಮಗ್ಗುಲದಲ್ಲಿ ಮೇ 19…

*ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸ್ಥಳ ಪರಿಶೀಲನೆ*

ಮೇ 16, 2026

*2ನೇ ಮೊಣ್ಣಂಗೇರಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಮಂತರ್ ಗೌಡ ಅವರಿಂದ 35 ಲಕ್ಷ ರೂ.ಅನುದಾನ*

ಮೇ 16, 2026

*ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ’ :  ಪ್ರಥಮ ಬಾರಿಗೆ ವಿಶೇಷ ಲೋಕ್ ಅದಾಲತ್ ಆಯೋಜನೆ*

ಮೇ 16, 2026

*ಮೇ 20 ರಂದು ಮಡಿಕೇರಿ ತಾಲ್ಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮ*

ಮೇ 16, 2026

*ರಾಯ್ ಡೇವಿಡ್ ನಿಧನ*

ಮೇ 16, 2026

*ಜಮೀಲಗೆ ಮಹಾತಾಯಿ ಪ್ರಶಸ್ತಿ ಪ್ರದಾನ*

ಮೇ 15, 2026

*ವಿದ್ಯಾರ್ಥಿಗಳಿಗೆ ಪುಸ್ತಕ ಉತ್ತಮ ಸಹಚರರಾಗಿರಬೇಕು : ಪ್ರೊ.ಬಿ.ನಂಜುಂಡ ಸ್ವಾಮಿ*

ಮೇ 15, 2026

*ಮಡಿಕೇರಿ ಕೊಡವ ಸಮಾಜಕ್ಕೆ ಕೊಡವ ಹೆರಿಟೇಜ್ ಕೇಂದ್ರ ಹಸ್ತಾಂತರಿಸಲು ಮನವಿ*

ಮೇ 15, 2026

*ಮಡಿಕೇರಿ : 272 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮೇ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.