
ಮಡಿಕೇರಿ ಜೂ.1 NEWS DESK : ಹೂಗುಚ್ಛ ಮತ್ತು ಸಿಹಿಯನ್ನು ನೀಡುವುದರೊಂದಿಗೆ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಡಿಕೇರಿ ಪಿಎಂಶ್ರೀ ಶಾಲೆ ವತಿಯಿಂದ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹೂಗುಚ್ಛ ಮತ್ತು ಸಿಹಿಯನ್ನು ವಿತರಿಸುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತದ ಮೂಲಕ ಬರಮಾಡಿಕೊಳ್ಳಲಾಯಿತು. ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಸರ್ಕಾರಿ ಶಾಲೆಗೆ ಬರುವುದರಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ತಿಳಿಸಿದರು. ಹಾಗೆಯೇ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಮಾಡಿದಾಗ ವಿದ್ಯಾರ್ಥಿಗಳು ತುಂಬಾ ಸಂತಸದಿಂದ ಶಾಲೆಗೆ ಬಂದಿದ್ದೇವೆ ಎಂಬ ಮಾತನ್ನು ವ್ಯಕ್ತಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಎಸ್ಡಿಎಂಸಿ ಅಧ್ಯಕ್ಷರಾದ ಜಗದೀಶ್, ಶಾಲಾ ಮುಖ್ಯೋಪಾಧ್ಯಾಯನಿ ಭವಾನಿ, ಉಪ ನಿರ್ದೇಶಕರ ಕಚೇರಿಯ ಡಿಪಿಇಒ ಶ್ರೀನಿವಾಸ್, ಡಿವೈಪಿಸಿ ಕೃಷ್ಣಪ್ಪ, ವಿಷಯ ಪರಿವೀಕ್ಷಕರಾದ ಬಿಂದು, ಕ್ಷೇತ್ರ ಸಮನ್ವಯ ಅಧಿಕಾರಿ ಶರ್ಮಿಳ, ಡಾ.ಸದಾಶಿವಯ್ಯ ಎಸ್ ಪಲ್ಲೆದ್, ಶಾಲಾ ಶಿಕ್ಷಕರು ಮತ್ತು ಪೆÇೀಷಕರು ಒಳಗೊಂಡಂತೆ ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು.









