
ಮಡಿಕೇರಿ NEWS DESK ಜೂ.5 : ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, “ಶಕ್ತಿ” ದಿನ ಪತ್ರಿಕೆಯ ಸೇವೆಯನ್ನು ಪರಿಗಣಿಸಿ ಗೌರವಿಸುತ್ತಿದೆ. ಜೂ.6 ರಂದು ತುಮಕೂರುವಿನಲ್ಲಿ ನಡೆಯಲಿರುವ ಸಂಸ್ಥೆಯ ರಾಜ್ಯಮಟ್ಟದ ಸಮ್ಮೇಳನದಲ್ಲಿ, ಕೊಡಗು ಜಿಲ್ಲೆಯಲ್ಲಿ 7 ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ “ಶಕ್ತಿ” ದಿನ ಪತ್ರಿಕೆಯನ್ನು ಸನ್ಮಾನದ ಮೂಲಕ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷೆ ಉಮಾ ರೆಡ್ಡಿ ತಿಳಿಸಿದ್ದಾರೆ.








