
ಮಡಿಕೇರಿ ಜೂ.8 NEWS DESK : ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಮಾಜ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಯುವ ಘಟಕದ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ, ಸಿದ್ಧಗಂಗಾ ಮಠದ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ ಜಯಂತಿ, ಜಗದ್ಗುರು ರೇಣುಕಾಚಾರ್ಯ ಜಯಂತಿ 250 ವರ್ಷ ಕೊಡಗನ್ನು ಆಳಿದ ಹಾಲೇರಿ ಅರಸರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹೆಮ್ಮನೆ ಪುಟ್ಟಬಸಪ್ಪ(ಕಲ್ಯಾಣಸ್ವಾಮಿ) ಅವರ ಸಂಸ್ಕರಣೋತ್ಸವ ಕಾರ್ಯಕ್ರಮ ಜೂ.13 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಪೆÇೀಕ್ಷೇತ್ರ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮಿಗಳು ಶನಿವಾರ ಶನಿವಾರಸಂತೆಯ ಗುಡುಗಳಲೆ ಜಯದೇವ ಜಾತ್ರಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಬೆಳಿಗ್ಗೆ 8 ಗಂಟೆಗೆ ಮದ್ಯಪೇಟೆ ವಿಶ್ವೇಶ್ವರ ದೇವಾಲಯದಿಂದ ಗುಡುಗಳಲೆ ಜಾತ್ರಾ ಮೈದಾನದವರೆಗೆ ಶ್ರೀ ರೇಣುಕಾಚಾರ್ಯರ, ಜಗಜ್ಯೋತಿ ಬಸವೇಶ್ವರರ, ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳವರ, ಮನೆಹಳ್ಳಿ ಮಠದ ಅನಘ ನಿರಂಜನ ಶ್ರೀ ಗುರು ಸಿದ್ಧವೀರೇಶ್ವರ ಸ್ವಾಮಿಗಳ ಪ್ರಸ್ತುತ ಕೊಡಗಿನ ವೀರಶೈವ ಲಿಂಗಾಯತ ಮಠಗಳ ಪೂಜ್ಯರುಗಳ, ಹಾಲೇರಿ ಅರಸರ ಮತ್ತು ಸ್ವಾಂತತ್ರ್ಯ ಹೋರಾಟಗಾರ ಹೆಮ್ಮನೆ ಶ್ರೀ ಪುಟ್ಟಬಸಪ್ಪನವರ ಭಾವಚಿತ್ರಗಳೊಂದಿಗೆ ಹಾಗೂ ಕಳಸ-ಕನ್ನಡಿ, ಷಟಸ್ಥಲ ಧ್ವಜ, ವೀರಗಾಸೆ ಕುಣಿತ ಹಾಗೂ ವಾದ್ಯ-ವೈಭವಗಳೊಂದಿಗೆ ಆಕರ್ಷಕ ಮೆರವಣಿಗೆ ಸಾಗಲಿದೆ. ಬೆಳಿಗ್ಗೆ 10.30 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ತುಮಕೂರು ಶ್ರೀ ಸಿದ್ದಗಂಗಾ ಮಠದ ಶಿವ ಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮಹಾಂತ ಶಿವಲಿಂಗ ಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗ್ರಾಮಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಂತಮಲ್ಲಿಕಾರ್ಜುನ ಮಹಾಸ್ವಾಮಿ, ಚನ್ನಬಸವ ದೇಶೀಕೇಂದ್ರ ಮಹಾಸ್ವಾಮಿ, ಮಹಾಂತ ಮಹಾಸ್ವಾಮಿ, ಸದಾಶಿವ ಮಹಾಸ್ವಾಮಿ, ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ, ಇಮ್ಮಡಿ ಶಿವಲಿಂಗ ಮಹಾಸ್ವಾಮಿಗಳವರು, ಮಲ್ಲೇಶ ಮಹಾಸ್ವಾಮಿ, ಸ್ವತಂತ್ರ ಬಸವಲಿಂಗ ಮಹಾಸ್ವಾಮಿ, ರುದ್ರಮುನಿ ಮಹಾಸ್ವಾಮಿ, ನಿಶ್ಚಲ ನಿರಂಜನ ದೇಶೀಕೇಂದ್ರ ಮಹಾಸ್ವಾಮಿ ಮತ್ತಿತರ ಪ್ರಮುಖರು ಉಪಸ್ಥಿತರಿರುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರು ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪುಸ್ತಕ ಬಿಡುಗಡೆ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಭಾವಚಿತ್ರ ಅನಾವರಣ ಮಾಡಲಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಹಾಂತ ಶಿವಲಿಂಗ ಸ್ವಾಮಿಗಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಮಾಯಮುಡಿ ಸುರೇಶ್, ಕಾರ್ಯದರ್ಶಿ ಸೋಹನ್ ಸಿ.ಎನ್, ಖಜಾಂಚಿ ಭರತ್ ಸಿ.ಎನ್ ಹಾಗೂ ಯುವ ಘಟಕದ ಅಧ್ಯಕ್ಷ ಮೋಕ್ಷಿಕ್ ರಾಜ್ ಉಪಸ್ಥಿತರಿದ್ದರು.









