Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*
  • *ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*
  • *ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*
  • *ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*
  • *ರಸ್ತೆ ಗುಂಡಿ ಮುಚ್ಚಿದ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್*
  • *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ 50 ವಿದ್ಯಾರ್ಥಿಗಳಿಗೆ 2.26 ಲಕ್ಷ ರೂ. ವಿದ್ಯಾನಿಧಿ ವಿತರಣೆ : ಆರೋಗ್ಯ ಮತ್ತು ಶಿಕ್ಷಣವನ್ನು ಖರೀದಿಸುವಂತಾಗಿದೆ : ನಾರಾಯಣ ಗೌಡ ಬೇಸರ*
  • *ಕೊಡವರ ಕೋವಿ ಹಕ್ಕನ್ನು “ಅತ್ಯಗತ್ಯ ಧಾರ್ಮಿಕ ಚಟುವಟಿಕೆಗಳ ಕಾಯ್ದೆ”ಯ ವ್ಯಾಪ್ತಿಗೆ ತರಲು ಸಿಎನ್‌ಸಿ ಒತ್ತಾಯ*
  • *ಸ್ನೇಹಿತರ ಒಕ್ಕೂಟದಿಂದ ಕೊಡಗು ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*

ಜೂನ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.13 : ಅಹಂ ಮತ್ತು ತಾನೇ ಶ್ರೇಷ್ಠ ಎಂಬ ಮನೋಭಾವದಿಂದ ಹೊರ ಬಂದಾಗ ಮಾತ್ರವೇ ಸುಖ ಸಂಸಾರ ನಡೆಸಲು ಸಾಧ್ಯ. ಇದನ್ನು ಗೌಡ ಸಮುದಾಯದ ಇಂದಿನ ಯುವ ಪೀಳಿಗೆ ಮನಗಾಣಬೇಕು, ಪೋಷಕರು ಕೂಡ ಈ ಕುರಿತು ಮಕ್ಕಳಿಗೆ ತಿಳಿ ಹೇಳಬೇಕು ಎಂದು ಮೈಸೂರು ಗೌಡ ಸಮಾಜದ ಅಧ್ಯಕ್ಷರು ಹಾಗೂ ನಿವೃತ್ತ ಪ್ರಾಂಶುಪಾಲ ಕೊಂಬಾರನ ಬಸಪ್ಪ ಕರೆ ನೀಡಿದ್ದಾರೆ. ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ 10 ಕುಟುಂಬ 18 ಗೋತ್ರದ ಗೌಡ ಸಮುದಾಯದ ವಧು ವರರ ಸಮಾವೇಶ ನಡೆಯಿತು.
ಸಮಾವೇಶವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿದ ಅವರು ದಾಂಪತ್ಯ ಎಂಬುವುದು ಪತಿ-ಪತ್ನಿ ನಡುವಿನ ಹೊಂದಾಣಿಕೆಯಾಗಿದೆ. ಹಿಂದಿನ ಕಾಲಘಟ್ಟದಲ್ಲಿ ಪೋಷಕರು ಗುರುತಿಸಿದ ವಧು ವರನ ನಡುವೆ ವಿವಾಹಗಳು ನಡೆಯುತ್ತಿತ್ತು. ಇಂತಹ ಮದುವೆಗಳಿಂದ ದಾಂಪತ್ಯ ಜೀವನವೂ ಸುಖಕರವಾಗಿರುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಸಮಾಜಿಕ ಜಾಲತಾಣಗಳ ಪ್ರಭಾವ ಯುವ ಸಮುದಾಯದ ಮೇಲೆ ಗಾಢ ಪರಿಣಾಮ ಬೀರಿದ್ದು, ಸಂಸಾರದಲ್ಲಿ ಹೊಂದಾಣಿಕೆಯ ಕೊರತೆ ಎದುರಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಂಸಾರ, ದಾಂಪತ್ಯ ಜೀವನದ ಬಗ್ಗೆ ಪೋಷಕರು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು. ನಮ್ಮ ಸಂಸ್ಕೃತಿ, ಆಚಾರ ವಿಚಾರ, ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಮುಂದಾಗಬೇಕು ಎಂದು ಕರೆ ನೀಡಿದರು.
ಕೊಡಗು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ನಿವೃತ್ತ ಪೌರಾಯುಕ್ತೆ ಮೂಟೇರ ಪುಷ್ಪಾವತಿ ಅವರು ಮಾತನಾಡಿ, ಇಂದು ಮಹಾ ನಗರಗಳಲ್ಲಿ ಕೆಲಸದಲ್ಲಿರುವ ವಧು-ವರನ ಹುಡುಕಿ ಮದುವೆ ಸಂಬoಧ ಬೆಸೆಯುವ ಮನಸ್ಥಿತಿ ಕಂಡು ಬರುತ್ತಿರುವುದು ದೊಡ್ಡ ದುರಂತವಾಗಿದೆ. ಹುಟ್ಟಿದ ಊರಲ್ಲಿ ಕೃಷಿ, ತೋಟಗಳನ್ನು ಮಾಡುತ್ತಿರುವ ಯುವ ಸಮುದಾಯಕ್ಕೆ ಹೆಣ್ಣು ನೀಡಲು ಹಿಂದೇಟು ಹಾಕಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಅಂಕಿ ಅಂಶಗಳಲ್ಲಿ ಸ್ತ್ರೀ ಲಿಂಗ ಅನುಪಾತವೂ ಕ್ಷೀಣಿಸುತ್ತಿರುವುದು ಕಂಡು ಬರುತ್ತಿದೆ. ಇಂದು ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರ ಲಾಭದಾಯಕ ಆಗಿದ್ದು ನಗರ ಪ್ರದೇಶದ ಆದಾಯಕ್ಕಿಂತಲೂ ಅಧಿಕ ಲಾಭ ಮತ್ತು ಸುಸ್ಥಿರ ಬದುಕು ಗ್ರಾಮೀಣ ಭಾಗಗಳಲ್ಲಿದೆ. ಕೃಷಿ ಗೌಡ ಸಮುದಾಯದ ಪರಂಪರೆಯಾಗಿದ್ದು, ಮದುವೆ ಎನ್ನುವುದು ಭವಿಷ್ಯ ಮತ್ತು ಸಮುದಾಯದ ಬೆಳವಣಿಗೆಯ ಸಂಕೇತವಾಗಿದೆ ಎಂಬುವುದನ್ನು ಯಾರೂ ಮರೆಯಬಾರದು ಎಂದು ಕಿವಿ ಮಾತು ಹೇಳಿದರು. ಕೊಡಗು ಗೌಡ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ನಿವೃತ್ತ ಎಸ್.ಪಿ. ಚೊಕ್ಕಾಡಿರ ಅಪ್ಪಯ್ಯ ಅವರು ಮಾತನಾಡಿ, 2002ರಲ್ಲಿ ಸಂಘ ಅಸ್ತಿತ್ವಕ್ಕೆ ಬಂದಿದ್ದು, ನಿರಂತರವಾಗಿ ಗೌಡ ಸಮುದಾಯದ ವಧುವರರ ಸಮಾವೇಶ ಆಯೋಜಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷವೂ ಸಮಾವೇಶದಲ್ಲಿ ನೋಂದಣಿ ಸಂಖ್ಯೆ ಏರಿಕೆ ಕಾಣುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ವಧು-ವರರ ಸಮಾವೇಶದಲ್ಲಿ ಯುವಕ ಯುವತಿಯರೂ ಪಾಲ್ಗೊಳ್ಳಬೇಕು. ಇದರಿಂದ ಪರಸ್ಪರ ಪರಿಚಯವಾಗಿ ವಿವಾಹ ಸಂಬoಧಗಳು ಮೂಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಮಾಜ ಬದಲಾಗುತ್ತಿದ್ದು, ವರದಕ್ಷಿಣೆ ಪಿಡುಗು ಕೂಡ ದೂರವಾಗಬೇಕು. ಇಂತಹ ಸಮಾವೇಶಗಳನ್ನು ಸಮುದಾಯದ ಬಂಧುಗಳು ಸದುಪಯೋಗಪಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಕೊಂಬಾರನ ಬಸಪ್ಪ ಹಾಗೂ ನಿವೃತ್ತ ಪೌರಾಯುಕ್ತೆ ಮೂಟೇರ ಪುಷ್ಪಾವತಿ ಅವರನ್ನು ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಉಪಾಧ್ಯಕ್ಷ ಶೆಟ್ಟಿಜನ ಗಣಪತಿ, ಕಾರ್ಯದರ್ಶಿ ಕುಂಜಿಲನ ರತ್ನ ಕುಮಾರಿ, ಖಜಾಂಚಿ ಕುಯ್ಯಮುಡಿ ಅಶ್ವಿನ್ ಕುಮಾರ್, ಸಹ ಕಾರ್ಯದರ್ಶಿ ಕಟ್ರತನ ಲಲಿತಾ ಅಯ್ಯಣ್ಣ, ನಿರ್ದೇಶಕರಾದ ಪುದಿಯನೆರವನ ರೇವತಿ ರಮೇಶ್, ಸೂದನ ರತ್ನಾವತಿ, ಕರ್ಣಯ್ಯನ ಬಸಪ್ಪ, ಕೆದಂಬಾಡಿ ಮುಕುಂದ, ತಳೂರು ಕಾಳಪ್ಪ, ಸೂರ್ತಲೆ ರಾಮಚಂದ್ರ, ಪೂಜಾರಿರ ಜಗದೀಶ್, ಕೊಡಗು ಗೌಡ ಸಮಾಜ ಅಧ್ಯಕ್ಷ ದಂಬೆಕೋಡಿ ಆನಂದ, ಕೊಡಗು ಗೌಡ ವಿದ್ಯಾ ಸಂಘದ ಅಂಬೇಕಲ್ ನವೀನ್, ಬೆಂಗಳೂರು ಕೊಡಗು ಗೌಡ ಸಮಾಜ ಅಧ್ಯಕ್ಷ ಅಯ್ಯೇಟಿ ಮೋಹನ್ ಕುಮಾರ್, ಪ್ರಮುಖರಾದ ಕೋರನ ವಿಶ್ವನಾಥ್, ಕುದುಪಜೆ ಬೋಜಪ್ಪ, ಚೊಕ್ಕಾಡಿ ಪ್ರೇಮ ರಾಘವಯ್ಯ ಮತ್ತಿತ್ತರ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*

ಜೂನ್ 13, 2026

*ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*

ಜೂನ್ 13, 2026

*ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*

ಜೂನ್ 13, 2026

*ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*

ಜೂನ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.13 NEWS DESK  : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ…

*ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*

ಜೂನ್ 13, 2026

*ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*

ಜೂನ್ 13, 2026

*ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*

ಜೂನ್ 13, 2026

*ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*

ಜೂನ್ 13, 2026

*ರಸ್ತೆ ಗುಂಡಿ ಮುಚ್ಚಿದ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್*

ಜೂನ್ 13, 2026

*ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ 50 ವಿದ್ಯಾರ್ಥಿಗಳಿಗೆ 2.26 ಲಕ್ಷ ರೂ. ವಿದ್ಯಾನಿಧಿ ವಿತರಣೆ : ಆರೋಗ್ಯ ಮತ್ತು ಶಿಕ್ಷಣವನ್ನು ಖರೀದಿಸುವಂತಾಗಿದೆ : ನಾರಾಯಣ ಗೌಡ ಬೇಸರ*

ಜೂನ್ 13, 2026

*ಕೊಡವರ ಕೋವಿ ಹಕ್ಕನ್ನು “ಅತ್ಯಗತ್ಯ ಧಾರ್ಮಿಕ ಚಟುವಟಿಕೆಗಳ ಕಾಯ್ದೆ”ಯ ವ್ಯಾಪ್ತಿಗೆ ತರಲು ಸಿಎನ್‌ಸಿ ಒತ್ತಾಯ*

ಜೂನ್ 13, 2026

*ಸ್ನೇಹಿತರ ಒಕ್ಕೂಟದಿಂದ ಕೊಡಗು ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ*

ಜೂನ್ 12, 2026

*ಪ್ರವಾಸಿತಾಣ ಮಾಂದಲಪಟ್ಟಿಗೆ 60 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ರಸ್ತೆ*

ಜೂನ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.