
ಮಡಿಕೇರಿ NEWS DESK ಜು.10 : ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ವಿಕಾಸ್ ಕುಮಾರ್ ಅವರು ಜಿಲ್ಲಾ ಪೊಲೀಸ್ ಕಚೇರಿಯ ಪರಿವೀಕ್ಷಣೆ ನಡೆಸಿ ವಾಹನ ವಿಭಾಗ, ಸಿಬ್ಬಂದಿಗಳ ಸಮಸ್ಯೆ, ವಸತಿ ಗೃಹ ಸಮಸ್ಯೆಗಳನ್ನು ಪರಿಶೀಲಿಸಿದರು. ನಂತರ ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಮಯ ಪ್ರಕೃತಿ ವಿಕೋಪವನ್ನೆದುರಿಸುವ ಬಗ್ಗೆ ಎನ್ಡಿಆರ್ಎಫ್ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.









