
ಕುಶಾಲನಗರ ಜು.13 NEWS DESK : ಕುಶಾಲನಗರ ಇನ್ನರ್ ವೀಲ್ ಕ್ಲಬ್ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಸೀತಾಲಕ್ಷ್ಮಿ ಆಯ್ಕೆಯಾಗಿದ್ದಾರೆ. 2026-27ನೇ ಅವಧಿಯ ನೂತನ ತಂಡದ ಪದಗ್ರಹಣ ಸಮಾರಂಭ ನಡೆಯಿತು. ಮಾಜಿ ಅಧ್ಯಕ್ಷರಾದ ಅಶ್ವಿನಿ ರೈ ಅವರು ಪ್ರಮಾಣವಚನ ಬೋಧಿಸಿದರು. ನೂತನ ಸಾಲಿನ ಕಾರ್ಯದರ್ಶಿಯಾಗಿ ಶಾಲಿನಿ ನರೇಂದ್ರ, ಖಜಾಂಚಿ ಕುಸುಮ ನಟೇಶ ಮತ್ತು ಜಾಸ್ಮಿನ್ ಪ್ರಕಾಶ್, ಚಿತ್ರ ರಮೇಶ್ ಅಧಿಕಾರ ವಹಿಸಿಕೊಂಡರು. ಡಿ ಚೆನ್ನಮ್ಮ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಹಾರ್ದಿಕ ಸಹಾಯದ ಜೊತೆಗೆ ಲೇಖನಿ ಸಾಮಾಗ್ರಿಗಳನ್ನು ವಿತರಿಸಲಾಯಿತು. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಇನ್ನರ್ ವೀಲ್ ಲೋಪಮುದ್ರ ಪತ್ರಿಕೆಯನ್ನು ರೋಟರಿ ಅಧ್ಯಕ್ಷ ರುದ್ರೇಶ್ ಪಟೇಲ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರು ಸಮಿತಿಯ ಸದಸ್ಯರು ಇದ್ದರು.










