
ಸೋಮವಾರಪೇಟೆ ಜು.14 NEWS DESK : ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಕಚೇರಿ ಕಾರ್ಯಾರಂಭವಾಯಿತು. ಸಂಘದ ಅಧ್ಯಕ್ಷ ಎಸ್.ಬಿ.ಭರತ್ಕುಮಾರ್ ಉದ್ಘಾಟಿಸಿದರು. ಸರ್ವ ಸದಸ್ಯರ ಅಪೇಕ್ಷೆಯಂತೆ 1.50 ಕೋಟಿ ರೂ,ವೆಚ್ಚದಲ್ಲಿ ಸಂಘದ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. 1956ನೇ ಇಸವಿಯಲ್ಲಿ ಅನೇಕ ಗಣ್ಯರ ಶ್ರಮದಿಂದ ಸಹಕಾರ ಸಂಘ ಪ್ರಾರಂಭವಾಗಿದ್ದು, ಅಂದಿನಿಂದ ಇಲ್ಲಿಯ ವರೆಗೆ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಎಚ್.ಎಸ್. ನೇತ್ರಾವತಿ, ನಿರ್ದೇಶಕರುಗಳಾದ ಎಚ್.ಆರ್.ಸುರೇಶ್, ಬಿ.ಪಿ.ಮೊಗಪ್ಪ, ಕೆ.ಕೆ.ಶಿವಪ್ರಕಾಶ್, ಜಿ.ಎಂ.ಹೂವಯ್ಯ, ಎ.ಎಸ್.ನವೀನ್ ಕುಮಾರ್, ಜಿ.ಎಸ್.ನಾಗರಾಜ್, ಕೆ.ಜಿ.ದಿನೇಶ್, ಎಸ್.ಸಿ.ಸುನೀತಾ, ಜಿ.ಈ.ಸುರೇಶ್, ಜಿ.ಬಿ.ಗಿರೀಶ್, ಕೆ.ಎಲ್.ರಕ್ಷಿತ್, ಸಿ.ಇ.ಒ. ಎಂ.ಎಚ್.ಕಿರಣ್ ಇದ್ದರು.









