
ಮಡಿಕೇರಿ NEWS DESK ಜು.26 : ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆ ಪದಾಧಿಕಾರಿಗಳು ನಗರಸಭೆ ಬಳಿ ಇರುವ ಯುದ್ಧ ಸ್ಮಾರಕದ ಬಳಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶೃದ್ಧಾಂಜಲಿ ಸಲ್ಸಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯ್ ಸ್ಥಾನಿಯ ಆಯುಕ್ತರಾದ ಮುತ್ತಪ್ಪ ಜಿಲ್ಲಾ ಖಜಾಂಚಿ ಮುದ್ದಪ್ಪ, ಮಡಿಕೇರಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ನೀಲಮ್ಮ, ಹಾಗೂ ಕಾರ್ಯದರ್ಶಿ ಚಂದ್ರಶೇಖರ್ ಹಾಜರಿದ್ದರು.









